ಮಳವಳ್ಳಿ: ಜೆಡಿಎಸ್ ರಾಜ್ಯ ಘಟಕದ ಅಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ಜನ್ಮದಿನದ ಅಂಗವಾಗಿ ಜೆಡಿಎಸ್ ಮುಖಂಡ ಕೆ.ಅನ್ನದಾನಿ ನೇತೃತ್ವದಲ್ಲಿ ಪಟ್ಟಣದ ಗಂಗಾಧರೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಲಾಯಿತು.
ನಂತರ ಪಟ್ಟಣದ ಸಾರ್ವಜನಿಕ ಆಸ್ಪತ್ರೆಯ ಒಳರೋಗಿಗಳಿಗೆ ಹಣ್ಣುಹಂಪಲು ವಿತರಿಸಿ ಜೆಡಿಎಸ್ ಮುಖಂಡ ಕೆ.ಅನ್ನದಾನಿ ಮಾತನಾಡಿ, ರಾಜ್ಯದ ಅಭಿವೃದ್ಧಿಗೆ ಸಾಕಷ್ಟು ಕೊಡುಗೆ ನೀಡಿ ಜನರ ಮನಗೆದ್ದಿರುವ ಎಚ್.ಡಿ.ಕುಮಾರಸ್ವಾಮಿ ಅವರು ಮತ್ತೊಮ್ಮೆ ಮುಖ್ಯಮಂತ್ರಿಯಾಗಿ ಜನರ ಸೇವೆ ಮಾಡುವಂತಾಗಲಿ ಹಾಗೂ ಅವರಿಗೆ ಆಯಸ್ಸು, ಆರೋಗ್ಯ ಲಭಿಸಲಿ ಎಂದು ಆಶಿಸಿದರು.
ಅನಂತ್ ರಾಂ ವೃತ್ತದ ಬಳಿ ಜೆಡಿಎಸ್ ಕಾರ್ಯಕರ್ತರು ಪಟಾಕಿ ಸಿಡಿಸಿ ಸಿಹಿ ವಿತರಿಸಿದರು. ಜೆಡಿಎಸ್ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಎಂ.ವಿಶ್ವನಾಥ್, ಪುರಸಭೆ ಸದಸ್ಯರಾದ ಎಂ.ಟಿ.ಪ್ರಶಾಂತ್, ಸಿದ್ದರಾಜು, ನಾಗೇಶ್, ನಂದಕುಮಾರ್, ಮಣಿ, ಮುಖಂಡರಾದ ಹನುಮಂತು, ಎಂ.ಎಚ್.ಕೆಂಪಯ್ಯ, ಪುಟ್ಟಬುದ್ಧಿ, ಕೃಷ್ಣ, ಕಿಟ್ಟಿ, ಶಂಕರೇಗೌಡ, ಅಂಕರಾಜು, ಮಲ್ಲೇಶ್, ನಾಗರಾಜು, ಬೂವಳ್ಳಿ ಸದಾನಂದ ಇದ್ದರು.