ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ದಲಿತರು ಮುಖ್ಯಮಂತ್ರಿಯಾಗುವುದನ್ನು ನಾವು ತಪ್ಪಿಸಿಲ್ಲ. ಅವಕಾಶ ತಪ್ಪಿಸಿದ್ದವರೇ ಈಗ ಮತ್ತೆ ಸಿ.ಎಂ ಆಗಬೇಕು ಎಂದು ಹೇಳಿಕೊಳ್ಳುತ್ತಿದ್ದಾರೆ. ತಾನಿದ್ದರೆ ಮಾತ್ರ ಕಾಂಗ್ರೆಸ್ ಎಂದೂ ಹೇಳಿಕೊಳ್ಳುತ್ತಾರೆ. 130 ಸೀಟ್ನಿಂದ 78ಕ್ಕೆ ಇಳಿಸಿದರಲ್ಲ ಅವರೇ ದಲಿತರಿಗೆ ಸಿ.ಎಂ ಆಗುವ ಅವಕಾಶ ತಪ್ಪಿಸಿದ್ದಾರೆ’ ಎಂದು ಸಿದ್ದರಾಮಯ್ಯ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದರು.