ಕೆ.ಆರ್.ಪೇಟೆ: ನಾಲ್ಕು ದಶಕಗಳಿಂದ ಪಕ್ಷದ ಕಾರ್ಯಕರ್ತನಾಗಿ ಕೆಲಸ ಮಾಡಿದ ಬಿ.ಎಲ್.ದೇವರಾಜು ಅವರಿಗೆ ಕಳೆದ ಚುನಾವಣೆಯಲ್ಲಿ ಟಿಕೆಟ್ ಕೊಡಲಾಗದ್ದಕ್ಕೆ ದೇವೇಗೌಡರು ಕಣ್ಣೀರು ಹಾಕಿದ್ದರು. ಹೀಗಾಗಿ, ಈ ಬಾರಿ ದೇವರಾಜು ಅವರಿಗೆ ಟಿಕೆಟ್ ನೀಡಲಾಗಿದೆ. ತತ್ವ, ನಿಷ್ಠೆ, ದಕ್ಷತೆಗೆ ಹೆಸರಾದ ಬಿ.ಎಲ್.ದೇವರಾಜು ಅವರನ್ನು ಮತದಾರರು ಬೆಂಬಲಿಸಬೇಕು ಎಂದು ಶಾಸಕ ಎಚ್.ಡಿ.ರೇವಣ್ಣ ಮನವಿ ಮಾಡಿದರು.