<p><strong>ಮಂಡ್ಯ</strong>: ಜೆಡಿಎಸ್ ವತಿಯಿಂದ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸನ್ಮಾನ ಹಾಗು ಕೃತಜ್ಞತಾ ಸಮಾರಂಭವನ್ನು ಜೂನ್ 16ರಂದು ಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಂಡ್ಯ ಜಿಲ್ಲೆಯ ಬಗ್ಗೆ ಅರಿವಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. </p>.<p>ಪ್ರಧಾನಿ ನರೇಂದ್ರ ಮೋದಿ ಅವರು ಕುಮಾರಸ್ವಾಮಿ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡುವ ಮೂಲಕ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಕುಮಾರಸ್ವಾಮಿ ಅವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಅವರು ಜಿಲ್ಲೆಯ ಮಗನಾಗಿ ಕೆಲಸ ಮಾಡುತ್ತಾರೆ ಎಂದರು.</p>.<p>ನಾಲೆಗೆ ನೀರು ಹರಿಸಿ:</p>.<p>ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ನಾಲೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರನಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಾಲೆಗಳಿಗೆ ನೀರು ಬಿಡದೆ ರೈತರನ್ನು ವಂಚಿಸಲಾಗಿದೆ. ಕೂಡಲೇ ನಾಲೆಗಳಿಗೆ ನೀರು ಬಿಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದರು. </p>.<p>ಮಂಡ್ಯ ಜಿಲ್ಲೆ ಪ್ರಬುದ್ಧತೆಯಿಂದ ಮತ ಚಲಾಯಿಸಿದ್ದಾರೆ. ಅನೇಕ ತಪ್ಪು ಮಾಡಿರುವ ಕಾರಣ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಎಚ್ಡಿಕೆ ಅವರನ್ನು ತೇಜೋವಧೆ ಮಾಡಿದ್ದಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದರು. </p>.<p>ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಚ್.ಟಿ. ಮಂಜು, ಮಾಜಿ ಶಾಸಕರಾದ ಅನ್ನದಾನಿ, ಸುರೇಶ್ ಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ. ರಮೇಶ್, ಮುಖಂಡರಾದ ಬಿ.ಆರ್. ರಾಮಚಂದ್ರ, ಅಮರಾವತಿ ಚಂದ್ರಶೇಖರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಜೆಡಿಎಸ್ ವತಿಯಿಂದ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಸನ್ಮಾನ ಹಾಗು ಕೃತಜ್ಞತಾ ಸಮಾರಂಭವನ್ನು ಜೂನ್ 16ರಂದು ಮಂಡ್ಯದ ಸರ್ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಮಾಜಿ ಸಚಿವ ಸಿ.ಎಸ್. ಪುಟ್ಟರಾಜು ತಿಳಿಸಿದರು.</p>.<p>ಗುರುವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಎಚ್.ಡಿ. ಕುಮಾರಸ್ವಾಮಿ ಅವರಿಗೆ ಮಂಡ್ಯ ಜಿಲ್ಲೆಯ ಬಗ್ಗೆ ಅರಿವಿದೆ. ಕೇಂದ್ರ ಸರ್ಕಾರ ಮತ್ತು ರಾಜ್ಯ ಸರ್ಕಾರದ ಸಹಕಾರದೊಂದಿಗೆ ಕ್ಷೇತ್ರದ ಸಮಗ್ರ ಅಭಿವೃದ್ಧಿ ಹಾಗೂ ನಿರುದ್ಯೋಗ ನಿವಾರಣೆಗೆ ಕ್ರಮ ಕೈಗೊಳ್ಳುತ್ತಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದರು. </p>.<p>ಪ್ರಧಾನಿ ನರೇಂದ್ರ ಮೋದಿ ಅವರು ಕುಮಾರಸ್ವಾಮಿ ಅವರಿಗೆ ಸಂಪುಟ ದರ್ಜೆ ಸ್ಥಾನ ನೀಡುವ ಮೂಲಕ ದೊಡ್ಡ ಜವಾಬ್ದಾರಿಯನ್ನು ನೀಡಿದ್ದಾರೆ. ಕುಮಾರಸ್ವಾಮಿ ಅವರಿಗೆ ಇದೊಂದು ಸುವರ್ಣ ಅವಕಾಶವಾಗಿದ್ದು ಅವರು ಜಿಲ್ಲೆಯ ಮಗನಾಗಿ ಕೆಲಸ ಮಾಡುತ್ತಾರೆ ಎಂದರು.</p>.<p>ನಾಲೆಗೆ ನೀರು ಹರಿಸಿ:</p>.<p>ಮಾಜಿ ಶಾಸಕ ರವೀಂದ್ರ ಶ್ರೀಕಂಠಯ್ಯ ಮಾತನಾಡಿ, ನಾಲೆ ಕಾಮಗಾರಿ ನಡೆಸುತ್ತಿರುವ ಗುತ್ತಿಗೆದಾರನಿಗೆ ಅನುಕೂಲ ಮಾಡಿಕೊಡುವ ನಿಟ್ಟಿನಲ್ಲಿ ನಾಲೆಗಳಿಗೆ ನೀರು ಬಿಡದೆ ರೈತರನ್ನು ವಂಚಿಸಲಾಗಿದೆ. ಕೂಡಲೇ ನಾಲೆಗಳಿಗೆ ನೀರು ಬಿಟ್ಟು ರೈತರ ಸಂಕಷ್ಟಕ್ಕೆ ಸ್ಪಂದಿಸಬೇಕು ಎಂದರು. </p>.<p>ಮಂಡ್ಯ ಜಿಲ್ಲೆ ಪ್ರಬುದ್ಧತೆಯಿಂದ ಮತ ಚಲಾಯಿಸಿದ್ದಾರೆ. ಅನೇಕ ತಪ್ಪು ಮಾಡಿರುವ ಕಾರಣ ಚುನಾವಣೆಯಲ್ಲಿ ಕಾಂಗ್ರೆಸ್ಗೆ ಹಿನ್ನಡೆಯಾಗಿದೆ. ಎಚ್ಡಿಕೆ ಅವರನ್ನು ತೇಜೋವಧೆ ಮಾಡಿದ್ದಕ್ಕೆ ಜನರು ತಕ್ಕ ಉತ್ತರ ನೀಡಿದ್ದಾರೆ ಎಂದು ಹೇಳಿದರು. </p>.<p>ಪತ್ರಿಕಾಗೋಷ್ಠಿಯಲ್ಲಿ ಶಾಸಕ ಎಚ್.ಟಿ. ಮಂಜು, ಮಾಜಿ ಶಾಸಕರಾದ ಅನ್ನದಾನಿ, ಸುರೇಶ್ ಗೌಡ, ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ. ರಮೇಶ್, ಮುಖಂಡರಾದ ಬಿ.ಆರ್. ರಾಮಚಂದ್ರ, ಅಮರಾವತಿ ಚಂದ್ರಶೇಖರ್ ಇದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>