<p>ನಾಗಮಂಗಲ: ತಾಲ್ಲೂಕಿನಾದ್ಯಂತ ಭಾನುವಾರ ಮಧ್ಯಾಹ್ನದ ಬಳಿಕ ಪ್ರಾರಂಭವಾದ ಧಾರಾಕಾರ ಮಳೆ, ಗಾಳಿಗೆ ಸೆಸ್ಕ್ ಕಚೇರಿಯ ಕಾಂಪೌಡ್ ಕುಸಿದಿದೆ. ಅಂಗಡಿ ಮುಂಗಟ್ಟುಗಳಿಗೆ ಮಳೆ ನೀರು ನುಗ್ಗಿದೆ.</p>.<p>ಸುಮಾರು ಎರಡು ಗಂಟೆ ಸುರಿದ ಧಾರಾಕಾರ ಮಳೆಗೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಗ್ರಾಣದ ಕಾಂಪೌಂಡ್ ಕುಸಿದು ಬಿದ್ದಿದೆ.</p>.<p>ಸ್ಥಳಕ್ಕೆ ಸೆಸ್ಕ್ ಎಂಜಿನಿಯರ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಪಟ್ಟಣದ ಮೈಲಾರಾ ಪಟ್ಟಣದ ರಸ್ತೆಯಲ್ಲಿ ಭಾರಿ ಪ್ರಮಾಣದ<br />ನೀರು ಹರಿದು ವಾಹನ ಸಂಚಾರಕ್ಕೆ<br />ತಡೆ ಉಂಟಾಗಿತ್ತು.</p>.<p>ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹವಾಗಿ ಕೆರೆಯಂತಾಗಿ ಪ್ರಯಾಣಿಕರ ಓಡಾಟಕ್ಕೆ ತೊಂದರೆಯಾಯಿತು. ನಿರಂತರವಾಗಿ ಸುರಿದ ಮಳೆಯಿಂದ ಪಟ್ಟಣದ ವ್ಯಾಪ್ತಿಯ ಹಲವು ಅಂಗಡಿ ಮಳಿಗೆಗಳಿಗೂ ನೀರು<br />ನುಗ್ಗಿ ಅಂಗಡಿ ಮಾಲೀಕರು ಪರದಾಡುವಂತಾಯಿತು.</p>.<p>ತಾಲ್ಲೂಕಿನ ಹೊಣಕೆರೆ, ಬೆಳ್ಳೂರು, ದೇವಾಲಾಪುರ, ಬಿಂಡಿಗನವಿಲೆ ಹೋಬಳಿ ವ್ಯಾಪ್ತಿಯಲ್ಲೂ ಮಳೆಯಾ ಗಿದ್ದು, ರಾಗಿ ಬಿತ್ತನೆ ಮಾಡಿ ಬೆಳೆ ಒಣ ಗುವ ಭೀತಿಯಲ್ಲಿದ್ದ ರೈತರಿಗೆ ಉತ್ತಮ ಮಳೆಯಿಂದ ನೆಮ್ಮದಿ ಉಂಟಾಗಿದೆ.</p>.<p>ಪಟ್ಟಣದ ವ್ಯಾಪ್ತಿಯಲ್ಲಿ<br />ಕೆಲಗಂಟೆ ಕಾಲ ವಿದ್ಯುತ್<br />ಸ್ಥಗಿತವಾಗಿತ್ತು. ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸಂಜೆಯ ನಂತರವೂ ಮಳೆ ಮುಂದುವರಿದ ಕಾರಣ<br />ವಿದ್ಯುತ್ ಸ್ಥಗಿತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ನಾಗಮಂಗಲ: ತಾಲ್ಲೂಕಿನಾದ್ಯಂತ ಭಾನುವಾರ ಮಧ್ಯಾಹ್ನದ ಬಳಿಕ ಪ್ರಾರಂಭವಾದ ಧಾರಾಕಾರ ಮಳೆ, ಗಾಳಿಗೆ ಸೆಸ್ಕ್ ಕಚೇರಿಯ ಕಾಂಪೌಡ್ ಕುಸಿದಿದೆ. ಅಂಗಡಿ ಮುಂಗಟ್ಟುಗಳಿಗೆ ಮಳೆ ನೀರು ನುಗ್ಗಿದೆ.</p>.<p>ಸುಮಾರು ಎರಡು ಗಂಟೆ ಸುರಿದ ಧಾರಾಕಾರ ಮಳೆಗೆ ಪಟ್ಟಣದ ಚಾಮುಂಡೇಶ್ವರಿ ವಿದ್ಯುತ್ ಸರಬರಾಜು ನಿಗಮದ ಉಗ್ರಾಣದ ಕಾಂಪೌಂಡ್ ಕುಸಿದು ಬಿದ್ದಿದೆ.</p>.<p>ಸ್ಥಳಕ್ಕೆ ಸೆಸ್ಕ್ ಎಂಜಿನಿಯರ್ ಮತ್ತು ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.</p>.<p>ಪಟ್ಟಣದ ಮೈಲಾರಾ ಪಟ್ಟಣದ ರಸ್ತೆಯಲ್ಲಿ ಭಾರಿ ಪ್ರಮಾಣದ<br />ನೀರು ಹರಿದು ವಾಹನ ಸಂಚಾರಕ್ಕೆ<br />ತಡೆ ಉಂಟಾಗಿತ್ತು.</p>.<p>ಪಟ್ಟಣದ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ನೀರು ಸಂಗ್ರಹವಾಗಿ ಕೆರೆಯಂತಾಗಿ ಪ್ರಯಾಣಿಕರ ಓಡಾಟಕ್ಕೆ ತೊಂದರೆಯಾಯಿತು. ನಿರಂತರವಾಗಿ ಸುರಿದ ಮಳೆಯಿಂದ ಪಟ್ಟಣದ ವ್ಯಾಪ್ತಿಯ ಹಲವು ಅಂಗಡಿ ಮಳಿಗೆಗಳಿಗೂ ನೀರು<br />ನುಗ್ಗಿ ಅಂಗಡಿ ಮಾಲೀಕರು ಪರದಾಡುವಂತಾಯಿತು.</p>.<p>ತಾಲ್ಲೂಕಿನ ಹೊಣಕೆರೆ, ಬೆಳ್ಳೂರು, ದೇವಾಲಾಪುರ, ಬಿಂಡಿಗನವಿಲೆ ಹೋಬಳಿ ವ್ಯಾಪ್ತಿಯಲ್ಲೂ ಮಳೆಯಾ ಗಿದ್ದು, ರಾಗಿ ಬಿತ್ತನೆ ಮಾಡಿ ಬೆಳೆ ಒಣ ಗುವ ಭೀತಿಯಲ್ಲಿದ್ದ ರೈತರಿಗೆ ಉತ್ತಮ ಮಳೆಯಿಂದ ನೆಮ್ಮದಿ ಉಂಟಾಗಿದೆ.</p>.<p>ಪಟ್ಟಣದ ವ್ಯಾಪ್ತಿಯಲ್ಲಿ<br />ಕೆಲಗಂಟೆ ಕಾಲ ವಿದ್ಯುತ್<br />ಸ್ಥಗಿತವಾಗಿತ್ತು. ತಾಲ್ಲೂಕಿನ ವಿವಿಧ ಭಾಗಗಳಲ್ಲಿ ಸಂಜೆಯ ನಂತರವೂ ಮಳೆ ಮುಂದುವರಿದ ಕಾರಣ<br />ವಿದ್ಯುತ್ ಸ್ಥಗಿತವಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>