<p><strong>ಮಂಡ್ಯ:</strong> ಜಿಲ್ಲೆಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ವಿವಿಧೆಡೆ ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ನಾಗಮಂಗಲ ತಾಲ್ಲೂಕು ಹೊನ್ನಾವರದ ಹಿರಿಕೆರೆ, ಬಿಂಡಿಗನವಿಲೆ ಕೆರೆ ತುಂಬಿ ಜಲಪಾತದ ರೀತಿಯಲ್ಲಿ ನೀರು ಹರಿಯುತ್ತಿದೆ.</p>.<p>ಮಂಗಳವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬಿಂಡಿಗನವಿಲೆ ಕೆರೆ ತುಂಬಿ ನೀರು ಹೊರಗೆ ಹರಿದು ಹೋಗುತ್ತಿದೆ. ಹೊನ್ನಾವರದ ಹಿರಿಕೆರೆ, ಕಲ್ಕೆರೆ, ಹುಲಿಕೆರೆ, ಚನ್ನಾಪುರ ಕೆರೆಗಳೂ ತುಂಬಿವೆ. ದುಮ್ಮಸಂದ್ರ ಅಣೆಕಟ್ಟೆ ಮೇಲೆ ನೀರು ಹರಿಯುತ್ತಿದ್ದು ಪ್ರವಾಸಿ ತಾಣದಂತಹ ದೃಶ್ಯ ವೈಭವ ಸೃಷ್ಟಿಯಾಗಿದೆ.</p>.<p>ಒಡೆದ ಕಾಲುವೆ: ನಾಗಮಂಗಲ ತಾಲ್ಲೂಕು ಕಲ್ಲಿನಾಥಪುರದ ಬಳಿ ಹೇಮಾವತಿ ನಾಲೆ ಒಡೆದು ಅಪಾರ ಪ್ರಮಾಣದ ನೀರು ಕೆರೆಯಂಚಿನ ತೆಂಗಿನ ತೋಟ, ಹೊಲಗಳಿಗೆ ನುಗ್ಗಿದೆ. ಕಳೆದ ವರ್ಷವೂ ಈ ನಾಲೆ ಒಡೆದು ಹೋಗಿತ್ತು, ನೀರಾವರಿ ಇಲಾಖೆ ಅಧಿಕಾರಿಗಳು ಮರಳಿನ ಚೀಲ ಹಾಕಿ ತೇಪೆ ಹಾಕುವ ಕೆಲಸ ಮಾಡಿದ್ದರು. ಸಮರ್ಪಕವಾಗಿ ದುರಸ್ತಿ ಮಾಡದ ಕಾರಣ ಈ ವರ್ಷ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಾಲೆ ಒಡೆದಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.</p>.<p>ಕೆ.ಆರ್.ಪೇಟೆ ತಾಲ್ಲೂಕು ಮದ್ದಿಕನಾಚೇನಹಳ್ಳಿಯಲ್ಲಿ ಶೇಷಣ್ಣ ಅವರ ಮನೆ ಭಾಗಶಃ ಕುಸಿದಿದೆ, ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಜಿಲ್ಲೆಯಾದ್ಯಂತ ಸುರಿಯುತ್ತಿರುವ ನಿರಂತರ ಮಳೆಯಿಂದಾಗಿ ವಿವಿಧೆಡೆ ಕೆರೆಕಟ್ಟೆಗಳು ತುಂಬಿ ತುಳುಕುತ್ತಿವೆ. ನಾಗಮಂಗಲ ತಾಲ್ಲೂಕು ಹೊನ್ನಾವರದ ಹಿರಿಕೆರೆ, ಬಿಂಡಿಗನವಿಲೆ ಕೆರೆ ತುಂಬಿ ಜಲಪಾತದ ರೀತಿಯಲ್ಲಿ ನೀರು ಹರಿಯುತ್ತಿದೆ.</p>.<p>ಮಂಗಳವಾರ ರಾತ್ರಿಯಿಡೀ ಸುರಿದ ಮಳೆಯಿಂದಾಗಿ ಬಿಂಡಿಗನವಿಲೆ ಕೆರೆ ತುಂಬಿ ನೀರು ಹೊರಗೆ ಹರಿದು ಹೋಗುತ್ತಿದೆ. ಹೊನ್ನಾವರದ ಹಿರಿಕೆರೆ, ಕಲ್ಕೆರೆ, ಹುಲಿಕೆರೆ, ಚನ್ನಾಪುರ ಕೆರೆಗಳೂ ತುಂಬಿವೆ. ದುಮ್ಮಸಂದ್ರ ಅಣೆಕಟ್ಟೆ ಮೇಲೆ ನೀರು ಹರಿಯುತ್ತಿದ್ದು ಪ್ರವಾಸಿ ತಾಣದಂತಹ ದೃಶ್ಯ ವೈಭವ ಸೃಷ್ಟಿಯಾಗಿದೆ.</p>.<p>ಒಡೆದ ಕಾಲುವೆ: ನಾಗಮಂಗಲ ತಾಲ್ಲೂಕು ಕಲ್ಲಿನಾಥಪುರದ ಬಳಿ ಹೇಮಾವತಿ ನಾಲೆ ಒಡೆದು ಅಪಾರ ಪ್ರಮಾಣದ ನೀರು ಕೆರೆಯಂಚಿನ ತೆಂಗಿನ ತೋಟ, ಹೊಲಗಳಿಗೆ ನುಗ್ಗಿದೆ. ಕಳೆದ ವರ್ಷವೂ ಈ ನಾಲೆ ಒಡೆದು ಹೋಗಿತ್ತು, ನೀರಾವರಿ ಇಲಾಖೆ ಅಧಿಕಾರಿಗಳು ಮರಳಿನ ಚೀಲ ಹಾಕಿ ತೇಪೆ ಹಾಕುವ ಕೆಲಸ ಮಾಡಿದ್ದರು. ಸಮರ್ಪಕವಾಗಿ ದುರಸ್ತಿ ಮಾಡದ ಕಾರಣ ಈ ವರ್ಷ ಇನ್ನೂ ಹೆಚ್ಚಿನ ಪ್ರಮಾಣದಲ್ಲಿ ನಾಲೆ ಒಡೆದಿದ್ದು ಅಪಾರ ಪ್ರಮಾಣದ ಬೆಳೆ ಹಾನಿಯಾಗಿದೆ.</p>.<p>ಕೆ.ಆರ್.ಪೇಟೆ ತಾಲ್ಲೂಕು ಮದ್ದಿಕನಾಚೇನಹಳ್ಳಿಯಲ್ಲಿ ಶೇಷಣ್ಣ ಅವರ ಮನೆ ಭಾಗಶಃ ಕುಸಿದಿದೆ, ಮನೆಯಲ್ಲಿ ಯಾರೂ ಇಲ್ಲದ ಕಾರಣ ಯಾವುದೇ ಅಪಾಯ ಸಂಭವಿಸಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>