<p><strong>ನಾಗಮಂಗಲ:</strong> ನನ್ನ ಕ್ಷೇತ್ರದ ಗ್ರಾಮಗಳು, ಹೇಮಾವತಿ ನದಿ ನೀರಿನಿಂದ ವಂಚಿತರಾಗಿರುವ ಪ್ರದೇಶಗಳಿಗೆ ಏತನೀರಾವರಿ ಯೋಜನೆ ಮೂಲಕ ನೀರು ಹರಿಸಿ ಈ ಭಾಗದ ಕೆರೆ ಕಟ್ಟೆ ತುಂಬಿಸಲಾಗುತ್ತಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಹೆರಗನಹಳ್ಳಿ ಕೆರೆಯಿಂದ ₹9.9 ಕೋಟಿ ವೆಚ್ಚದ ಏತ ನೀರಾವರಿ ಮೂಲಕ ಕದಬಹಳ್ಳಿ ಗ್ರಾಮದ ಎರಡು ಕೆರೆಗಳು ಹಾಗೂ ಏಳು ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಯಾವ ಗ್ರಾಮಕ್ಕೂ ಹೇಮಾವತಿ ನೀರು ಸಿಗಲಿಲ್ಲ ಎಂಬುವ ಮಾತು ಬರಬಾರದು, ಹಾಗಾಗಿ ಕೆ.ಆರ್.ಪೇಟೆ ತಾಲ್ಲೂಕಿನ ಗೂಡೆಹೊಸಹಳ್ಳಿ ಏತ ನೀರಾವರಿ ಯೋಜನೆಯನ್ನು ₹330 ಕೋಟಿ ಅಂದಾಜಿನಲ್ಲಿ ಕೈಗೆತ್ತಿಕೊಂಡಿದ್ದು, ತಾಲ್ಲೂಕಿನ ಬಹುತೇಕ ಕೆರೆ ಕಟ್ಟೆಗಳಿಗೆ ನೀರು ಹರಿಸಲಾಗುವುದು. ಇನ್ನೆರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.</p>.<p>ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಲು ಬದ್ಧನಾಗಿದ್ದೇನೆ. ಹಂತ ಹಂತವಾಗಿ ಆದ್ಯತೆಯ ಮೇರೆ ರಸ್ತೆ ದುರಸ್ತಿ ಮಾಡಲಾಗುವುದು. ಕದಬಹಳ್ಳಿ ಕಾವೇಟಿ ರಂಗನಾಥ ಸ್ವಾಮಿಯ ಸಮುದಾಯ ಭವನದ ಕಾಮಗಾರಿ ಬಹು ವರ್ಷಗಳಿಂದ ಕುಂಟುತ್ತಾ ಸಾಗಿದೆ. ಭವನವನ್ನು ಪೂರ್ಣಗೊಳಿಸಲು ವಿಶೇಷ ಕಾಳಜಿ ವಹಿಸಿದ್ದೇನೆ ಎಂದು ತಿಳಿಸಿದರು.</p>.<p>ಮನ್ಮುಲ್ ನಿರ್ದೇಶಕರಾದ ಎನ್.ಅಪ್ಪಾಜಿಗೌಡ, ಲಕ್ಷ್ಮೀನಾರಾಯಣ, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸಿಲ್ದಾರ್ ಆದರ್ಶ್, ಮುಖಂಡರಾದ ಎನ್.ಜೆ.ರಾಜೇಶ್, ವೆಂಕಟೇಶ್, ಎನ್.ಟಿ.ಕೃಷ್ಣಮೂರ್ತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನಾಗಮಂಗಲ:</strong> ನನ್ನ ಕ್ಷೇತ್ರದ ಗ್ರಾಮಗಳು, ಹೇಮಾವತಿ ನದಿ ನೀರಿನಿಂದ ವಂಚಿತರಾಗಿರುವ ಪ್ರದೇಶಗಳಿಗೆ ಏತನೀರಾವರಿ ಯೋಜನೆ ಮೂಲಕ ನೀರು ಹರಿಸಿ ಈ ಭಾಗದ ಕೆರೆ ಕಟ್ಟೆ ತುಂಬಿಸಲಾಗುತ್ತಿದೆ. ಇದರಿಂದ ರೈತರಿಗೆ ಅನುಕೂಲವಾಗಲಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.</p>.<p>ತಾಲ್ಲೂಕಿನ ಹೆರಗನಹಳ್ಳಿ ಕೆರೆಯಿಂದ ₹9.9 ಕೋಟಿ ವೆಚ್ಚದ ಏತ ನೀರಾವರಿ ಮೂಲಕ ಕದಬಹಳ್ಳಿ ಗ್ರಾಮದ ಎರಡು ಕೆರೆಗಳು ಹಾಗೂ ಏಳು ಕಟ್ಟೆಗಳಿಗೆ ನೀರು ತುಂಬಿಸುವ ಯೋಜನೆಗೆ ಮಂಗಳವಾರ ಚಾಲನೆ ನೀಡಿ ಅವರು ಮಾತನಾಡಿದರು.</p>.<p>ಯಾವ ಗ್ರಾಮಕ್ಕೂ ಹೇಮಾವತಿ ನೀರು ಸಿಗಲಿಲ್ಲ ಎಂಬುವ ಮಾತು ಬರಬಾರದು, ಹಾಗಾಗಿ ಕೆ.ಆರ್.ಪೇಟೆ ತಾಲ್ಲೂಕಿನ ಗೂಡೆಹೊಸಹಳ್ಳಿ ಏತ ನೀರಾವರಿ ಯೋಜನೆಯನ್ನು ₹330 ಕೋಟಿ ಅಂದಾಜಿನಲ್ಲಿ ಕೈಗೆತ್ತಿಕೊಂಡಿದ್ದು, ತಾಲ್ಲೂಕಿನ ಬಹುತೇಕ ಕೆರೆ ಕಟ್ಟೆಗಳಿಗೆ ನೀರು ಹರಿಸಲಾಗುವುದು. ಇನ್ನೆರಡು ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳ್ಳಲಿದೆ ಎಂದು ಭರವಸೆ ನೀಡಿದರು.</p>.<p>ಹದಗೆಟ್ಟಿರುವ ರಸ್ತೆಗಳನ್ನು ಸರಿಪಡಿಸಲು ಬದ್ಧನಾಗಿದ್ದೇನೆ. ಹಂತ ಹಂತವಾಗಿ ಆದ್ಯತೆಯ ಮೇರೆ ರಸ್ತೆ ದುರಸ್ತಿ ಮಾಡಲಾಗುವುದು. ಕದಬಹಳ್ಳಿ ಕಾವೇಟಿ ರಂಗನಾಥ ಸ್ವಾಮಿಯ ಸಮುದಾಯ ಭವನದ ಕಾಮಗಾರಿ ಬಹು ವರ್ಷಗಳಿಂದ ಕುಂಟುತ್ತಾ ಸಾಗಿದೆ. ಭವನವನ್ನು ಪೂರ್ಣಗೊಳಿಸಲು ವಿಶೇಷ ಕಾಳಜಿ ವಹಿಸಿದ್ದೇನೆ ಎಂದು ತಿಳಿಸಿದರು.</p>.<p>ಮನ್ಮುಲ್ ನಿರ್ದೇಶಕರಾದ ಎನ್.ಅಪ್ಪಾಜಿಗೌಡ, ಲಕ್ಷ್ಮೀನಾರಾಯಣ, ಉಪ ವಿಭಾಗಾಧಿಕಾರಿ ಶ್ರೀನಿವಾಸ್, ತಹಸಿಲ್ದಾರ್ ಆದರ್ಶ್, ಮುಖಂಡರಾದ ಎನ್.ಜೆ.ರಾಜೇಶ್, ವೆಂಕಟೇಶ್, ಎನ್.ಟಿ.ಕೃಷ್ಣಮೂರ್ತಿ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>