<p><strong>ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಹೇಮಾವತಿ ಎಡದಂಡೆ ನಾಲೆಯಲ್ಲಿ ಗೊರೂರು ಜಲಾಶಯದಿಂದ ನೀರು ಹರಿಸಬೇಕೆಂಬ ರೈತರ ಆಗ್ರಹಕ್ಕೆ ಅಧಿಕಾರಿಗಳು ಮಣಿದಿದ್ದು ಜಲಾಶಯದಿಂದ ನೀರು ಹರಿಸಲಾಗಿದೆ.</p><p>‘ಪ್ರಜಾವಾಣಿ’ಯಲ್ಲಿ ‘ಎಡದಂಡೆಯಲ್ಲಿ ಹರಿಯದ ಹೇಮೆ: ರೈತರ ಕಣ್ಣೀರು’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. </p><p>ಹೇಮಾವತಿ ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದರೂ ಕಾಲುವೆಗೆ ನೀರು ಹರಿಸದಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬೆಳೆದಿರುವ ಕಬ್ಬು, ಭತ್ತ , ತೆಂಗು, ಅಡಿಕೆ ಮತ್ತಿತರ ಬೆಳೆಗಳು ಒಣಗುತ್ತಿರುವ ಬಗ್ಗೆ ಮತ್ತು ಅಂತರ್ಜಲ ಮಟ್ಟ ಕುಸಿತದ ಬಗ್ಗೆ ವರದಿಯಲ್ಲಿ ಬೆಳಕು ಚೆಲ್ಲಲಾಗಿತ್ತು. </p><p>‘ಪ್ರಸ್ತುತ ಕಡಿಮೆ ಪ್ರಮಾಣದಲ್ಲಿ ನೀರು ಹರಿಸುತ್ತಿದ್ದು, ನೀರಿನ ಪ್ರಮಾಣವನ್ನು ಹೆಚ್ಚಿಸಬೇಕು. ತಾಲ್ಲೂಕಿನ ಕೆರೆಕಟ್ಟೆಗಳಿಗೆ ನೀರು ತುಂಬಿಸಬೇಕು’ ಎಂದು ಸಾರ್ವಜನಿಕರು ಮತ್ತು ಅಚ್ಚುಕಟ್ಟಿನ ರೈತರು ಒತ್ತಾಯಿಸಿದ್ದಾರೆ.</p>.ಹೇಮಾವತಿ: ಎಡದಂಡೆ ನಾಲೆಯಲ್ಲಿ ಹರಿಯದ ಹೇಮೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ (ಮಂಡ್ಯ ಜಿಲ್ಲೆ):</strong> ತಾಲ್ಲೂಕಿನ ಹೇಮಾವತಿ ಎಡದಂಡೆ ನಾಲೆಯಲ್ಲಿ ಗೊರೂರು ಜಲಾಶಯದಿಂದ ನೀರು ಹರಿಸಬೇಕೆಂಬ ರೈತರ ಆಗ್ರಹಕ್ಕೆ ಅಧಿಕಾರಿಗಳು ಮಣಿದಿದ್ದು ಜಲಾಶಯದಿಂದ ನೀರು ಹರಿಸಲಾಗಿದೆ.</p><p>‘ಪ್ರಜಾವಾಣಿ’ಯಲ್ಲಿ ‘ಎಡದಂಡೆಯಲ್ಲಿ ಹರಿಯದ ಹೇಮೆ: ರೈತರ ಕಣ್ಣೀರು’ ಶೀರ್ಷಿಕೆಯಲ್ಲಿ ವಿಶೇಷ ವರದಿ ಪ್ರಕಟವಾಗಿತ್ತು. </p><p>ಹೇಮಾವತಿ ಜಲಾಶಯದಲ್ಲಿ ಸಾಕಷ್ಟು ನೀರಿನ ಸಂಗ್ರಹವಿದ್ದರೂ ಕಾಲುವೆಗೆ ನೀರು ಹರಿಸದಿರುವುದರಿಂದ ಅಚ್ಚುಕಟ್ಟು ವ್ಯಾಪ್ತಿಯಲ್ಲಿ ಬೆಳೆದಿರುವ ಕಬ್ಬು, ಭತ್ತ , ತೆಂಗು, ಅಡಿಕೆ ಮತ್ತಿತರ ಬೆಳೆಗಳು ಒಣಗುತ್ತಿರುವ ಬಗ್ಗೆ ಮತ್ತು ಅಂತರ್ಜಲ ಮಟ್ಟ ಕುಸಿತದ ಬಗ್ಗೆ ವರದಿಯಲ್ಲಿ ಬೆಳಕು ಚೆಲ್ಲಲಾಗಿತ್ತು. </p><p>‘ಪ್ರಸ್ತುತ ಕಡಿಮೆ ಪ್ರಮಾಣದಲ್ಲಿ ನೀರು ಹರಿಸುತ್ತಿದ್ದು, ನೀರಿನ ಪ್ರಮಾಣವನ್ನು ಹೆಚ್ಚಿಸಬೇಕು. ತಾಲ್ಲೂಕಿನ ಕೆರೆಕಟ್ಟೆಗಳಿಗೆ ನೀರು ತುಂಬಿಸಬೇಕು’ ಎಂದು ಸಾರ್ವಜನಿಕರು ಮತ್ತು ಅಚ್ಚುಕಟ್ಟಿನ ರೈತರು ಒತ್ತಾಯಿಸಿದ್ದಾರೆ.</p>.ಹೇಮಾವತಿ: ಎಡದಂಡೆ ನಾಲೆಯಲ್ಲಿ ಹರಿಯದ ಹೇಮೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>