ತಾಲ್ಲೂಕಿನ ಬೆಳ್ಳಿಬೆಟ್ಟದ ಕಾವಲು ಅರಣ್ಯ ಪ್ರದೇಶದಲ್ಲಿ ಹೇಮಾವತಿ ಜಲಾಶಯ ಯೋಜನೆಯ ಮುಳುಗಡೆ ಸಂತ್ರಸ್ತರಿಗೆ ನೀಡಲು ಗುರುತಿಸಲಾಗಿರುವ ಪ್ರದೇಶಕ್ಕೆ ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ್, ಉಪವಿಭಾಗಾಧಿಕಾರಿ ಶೈಲಜಾ, ತಹಶೀಲ್ದಾರ್ ಶಿವಮೂರ್ತಿ ಹಾಗೂ ಅರಣ್ಯ ಇಲಾಖೆಯ ಅಧಿಕಾರಿಗಳ ನೇತೃತ್ವದಲ್ಲಿ ಭೂಮಿ ಪರಿಶೀಲನೆ ನಡೆಸಿದ ಅವರು, ಸಂತ್ರಸ್ತರಿಗೆ ಬದಲಿ ಭೂಮಿಯನ್ನು ಒದಗಿಸುವುದು ನಮ್ಮ ಕರ್ತವ್ಯ. ಆದ್ದರಿಂದ ಬೆಳ್ಳಿಬೆಟ್ಟದ ಸರ್ವೆ ನಂಬರ್ 1 ಅನ್ನು ಅಳತೆ ಮಾಡಿಸಿ ಇಲಾಖೆಗೆ ಉಳಿಯಬೇಕಾದ ಭೂಮಿ ಉಳಿಸಿ ಹೆಚ್ಚುವರಿ ಭೂಮಿಯನ್ನು ನೀಡಿ ಎಂದು ಹೇಳಿದರು.