<p><strong>ಕೆ.ಆರ್.ಪೇಟೆ</strong>: ‘ಎಚ್.ಎಂ.ಟಿ ಕಾರ್ಖಾನೆ ಪುನಃಶ್ಚೇತನಕ್ಕೆ ಮುಂದಾಗಿರುವ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಇಲ್ಲ ಸಲ್ಲದ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಡೆ ಖಂಡನೀಯ’ ಎಂದು ಶಾಸಕ ಎಚ್.ಟಿ.ಮಂಜು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಶಾಸಕರ ಗೃಹಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಉಸ್ತುವಾರಿಗಳು ಯಾವುದೇ ವಿಚಾರವನ್ನು ಆಲೋಚಿಸಿ ಮಾತನಾಡಬೇಕು. ಕೇಂದ್ರ ಸರ್ಕಾರದ ಎಲ್ಲಾ ಒಳ್ಳೆ ಕಾರ್ಯಗಳನ್ನು ಟೀಕಿಸುವ ಒಂದೇ ಉದ್ದೇಶ ಅವರಿಗೆ ಇದ್ದಂತಿದೆ’ ಎಂದರು.</p>.<p>‘ರಾಜ್ಯದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನಿರುದ್ಯೋಗ ಸಮಸ್ಯೆಯನ್ನು ನೀಗಿಸಲು ಕುಮಾರಸ್ವಾಮಿ ಅವರು ಎಚ್.ಎಂ.ಟಿ ಕಾರ್ಖಾನೆಯನ್ನು ಪುನಃಶ್ಚೇತನಗೊಳಿಸಲು ಮುಂದಾಗಿದ್ದಾರೆ. ರಾಜ್ಯದ ಜನರಿಗೆ ಅನುಕೂಲವಾಗುವ ಈ ಯೋಜನೆಗೆ ರಾಜ್ಯ ಸರ್ಕಾರ ಬೆಂಬಲ ನೀಡಬೇಕು. ಉಸ್ತುವಾರಿ ಹೊತ್ತವರು ಸ್ವಾಗತಿಸಬೇಕು. ಆದರೆ, ಇದನ್ನು ಅರ್ಥ ಮಾಡಿಕೊಳ್ಳದೆ ರಿಯಲ್ ಎಸ್ಟೇಟ್ ಉದ್ದೇಶದಿಂದ ಕಾರ್ಖಾನೆಯನ್ನು ಪುನಶ್ಚೇತನ ಮಾಡಲು ಹೊರಟಿದ್ದಾರೆ ಎಂದು ಸುರ್ಜೆವಾಲಾ ಅವರು ಟೀಕಿಸಿರುವದು ಖಂಡನೀಯ’ ಎಂದರು.</p>.<p>ಅನುದಾನದಲ್ಲಿ ತಾರತಮ್ಯ ಬೇಡ: ‘ರಾಜ್ಯ ಸರ್ಕಾರ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಶಾಸಕರಿಗೆ ₹50 ಕೋಟಿ ಕೊಟ್ಟು, ವಿಪಕ್ಷದವರಿಗೆ ₹25 ಕೋಟಿ ಕೊಡುತ್ತಾರೆಂದು ತಿಳಿದುಬಂದಿದೆ. ಈ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಕೊಡುವದಾದರೆ ಎಲ್ಲರಿಗೂ ಒಂದೇ ರೀತಿಯ ಅನುದಾನ ನೀಡಲಿ. ಶಾಸಕರಲ್ಲಿ ತಾರತಮ್ಯ ಮಾಡಬಾರದು’ ಎಂದು ಒತ್ತಾಯಿಸಿದರು.</p>.<p>ಪಕ್ಷದ ಮುಖಂಡರಾದ ಹುಲ್ಲೇಗೌಡ, ಮೋಹನ್, ತೋಟಪ್ಪ ಮಾದೇವೇಗೌಡ, ಬಲದೇವ್, ಹೊಸಹೊಳಲು ಅಶೋಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕೆ.ಆರ್.ಪೇಟೆ</strong>: ‘ಎಚ್.ಎಂ.ಟಿ ಕಾರ್ಖಾನೆ ಪುನಃಶ್ಚೇತನಕ್ಕೆ ಮುಂದಾಗಿರುವ ಕೇಂದ್ರದ ಬೃಹತ್ ಕೈಗಾರಿಕಾ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಇಲ್ಲ ಸಲ್ಲದ ಮಾತನಾಡಿರುವ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ನಡೆ ಖಂಡನೀಯ’ ಎಂದು ಶಾಸಕ ಎಚ್.ಟಿ.ಮಂಜು ಆಕ್ರೋಶ ವ್ಯಕ್ತಪಡಿಸಿದರು.</p>.<p>ಪಟ್ಟಣದ ಶಾಸಕರ ಗೃಹಕಚೇರಿಯಲ್ಲಿ ಭಾನುವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಕಾಂಗ್ರೆಸ್ ಪಕ್ಷದ ಉಸ್ತುವಾರಿಗಳು ಯಾವುದೇ ವಿಚಾರವನ್ನು ಆಲೋಚಿಸಿ ಮಾತನಾಡಬೇಕು. ಕೇಂದ್ರ ಸರ್ಕಾರದ ಎಲ್ಲಾ ಒಳ್ಳೆ ಕಾರ್ಯಗಳನ್ನು ಟೀಕಿಸುವ ಒಂದೇ ಉದ್ದೇಶ ಅವರಿಗೆ ಇದ್ದಂತಿದೆ’ ಎಂದರು.</p>.<p>‘ರಾಜ್ಯದ ಜನರಿಗೆ ಅನುಕೂಲ ಮಾಡಿಕೊಡುವ ಉದ್ದೇಶದಿಂದ ನಿರುದ್ಯೋಗ ಸಮಸ್ಯೆಯನ್ನು ನೀಗಿಸಲು ಕುಮಾರಸ್ವಾಮಿ ಅವರು ಎಚ್.ಎಂ.ಟಿ ಕಾರ್ಖಾನೆಯನ್ನು ಪುನಃಶ್ಚೇತನಗೊಳಿಸಲು ಮುಂದಾಗಿದ್ದಾರೆ. ರಾಜ್ಯದ ಜನರಿಗೆ ಅನುಕೂಲವಾಗುವ ಈ ಯೋಜನೆಗೆ ರಾಜ್ಯ ಸರ್ಕಾರ ಬೆಂಬಲ ನೀಡಬೇಕು. ಉಸ್ತುವಾರಿ ಹೊತ್ತವರು ಸ್ವಾಗತಿಸಬೇಕು. ಆದರೆ, ಇದನ್ನು ಅರ್ಥ ಮಾಡಿಕೊಳ್ಳದೆ ರಿಯಲ್ ಎಸ್ಟೇಟ್ ಉದ್ದೇಶದಿಂದ ಕಾರ್ಖಾನೆಯನ್ನು ಪುನಶ್ಚೇತನ ಮಾಡಲು ಹೊರಟಿದ್ದಾರೆ ಎಂದು ಸುರ್ಜೆವಾಲಾ ಅವರು ಟೀಕಿಸಿರುವದು ಖಂಡನೀಯ’ ಎಂದರು.</p>.<p>ಅನುದಾನದಲ್ಲಿ ತಾರತಮ್ಯ ಬೇಡ: ‘ರಾಜ್ಯ ಸರ್ಕಾರ ಅನುದಾನ ಬಿಡುಗಡೆಯಲ್ಲಿ ತಾರತಮ್ಯ ಮಾಡುವುದು ಸರಿಯಲ್ಲ. ಕಾಂಗ್ರೆಸ್ ಶಾಸಕರಿಗೆ ₹50 ಕೋಟಿ ಕೊಟ್ಟು, ವಿಪಕ್ಷದವರಿಗೆ ₹25 ಕೋಟಿ ಕೊಡುತ್ತಾರೆಂದು ತಿಳಿದುಬಂದಿದೆ. ಈ ಬಗ್ಗೆ ಸ್ಪಷ್ಟತೆ ಸಿಕ್ಕಿಲ್ಲ. ಕೊಡುವದಾದರೆ ಎಲ್ಲರಿಗೂ ಒಂದೇ ರೀತಿಯ ಅನುದಾನ ನೀಡಲಿ. ಶಾಸಕರಲ್ಲಿ ತಾರತಮ್ಯ ಮಾಡಬಾರದು’ ಎಂದು ಒತ್ತಾಯಿಸಿದರು.</p>.<p>ಪಕ್ಷದ ಮುಖಂಡರಾದ ಹುಲ್ಲೇಗೌಡ, ಮೋಹನ್, ತೋಟಪ್ಪ ಮಾದೇವೇಗೌಡ, ಬಲದೇವ್, ಹೊಸಹೊಳಲು ಅಶೋಕ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>