<p><strong>ಮಂಡ್ಯ</strong>: ಸ್ವಾತಂತ್ರ್ಯ ಯೋಧರಿಗೆ ‘ಮಾಸಿಕ ಗೌರವಧನ’ ಮತ್ತು ಅವರ ಅವಲಂಬಿತರಿಗೆ ‘ಮಾಸಾಶನ’ ಸಮರ್ಪಕವಾಗಿ ಪಾವತಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ರಾಜ್ಯದ 16 ಜಿಲ್ಲೆಗಳ ವ್ಯಾಪ್ತಿಯ 29 ಉಪವಿಭಾಗಾಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.</p><p>ಬಾಗಲಕೋಟೆ, ಜಮಖಂಡಿ, ದೊಡ್ಡಬಳ್ಳಾಪುರ, ಬೆಳಗಾವಿ, ಬೈಲಹೊಂಗಲ, ಚಿಕ್ಕೋಡಿ, ಬಳ್ಳಾರಿ, ಹರಪನಹಳ್ಳಿ, ಹೊಸಪೇಟೆ, ಬೀದರ್, ಬಸವಕಲ್ಯಾಣ, ಮಂಗಳೂರು, ಪುತ್ತೂರು, ದಾವಣಗೆರೆ, ಹೊನ್ನಾಳಿ, ಹಾವೇರಿ, ಸವಣೂರು, ಕಲಬುರಗಿ, ಸೇಡಂ, ಕೋಲಾರ, ಕೊಪ್ಪಳ, ಮಂಡ್ಯ, ಪಾಂಡವಪುರ, ರಾಯಚೂರು, ಲಿಂಗಸುಗೂರು, ತುಮಕೂರು, ತಿಪಟೂರು, ಮಧುಗಿರಿ ಹಾಗೂ ಉಡುಪಿ ಉಪವಿಭಾಗಗಳ ಎ.ಸಿ.ಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಉಪಲೋಕಾಯುಕ್ತ–2 ನ್ಯಾಯಮೂರ್ತಿ ಬಿ.ವೀರಪ್ಪ ಆದೇಶಿಸಿದ್ದಾರೆ. </p><p>ಈ ನ್ಯೂನತೆ ನಿವಾರಿಸಿ, ಕೈಗೊಂಡ ಕ್ರಮಗಳ ಬಗ್ಗೆ ಪಾಲನಾ ವರದಿಯನ್ನು ಪೂರಕ ದಾಖಲೆಗಳೊಂದಿಗೆ ನವೆಂಬರ್ 26ರೊಳಗೆ ಖುದ್ದಾಗಿ ಹಾಜರಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಈ ಬಗ್ಗೆ ಮೇಲ್ವಿಚಾರಣೆ ವಹಿಸುವಂತೆ ಆದೇಶಿಸಲಾಗಿದೆ. </p><p>ಆಗಸ್ಟ್ 18ರಂದು ‘ಪ್ರಜಾವಾಣಿ’ ಮುಖಪುಟದಲ್ಲಿ ಪ್ರಕಟವಾದ ‘ಸ್ವಾತಂತ್ರ್ಯ ಯೋಧರಿಗೆ ಸಿಗದ ಗೌರವ ಧನ: ಸರ್ಕಾರದಿಂದ ₹4.85 ಕೋಟಿ ಬಾಕಿ’ ವಿಶೇಷ ವರದಿಯನ್ನು ಆದೇಶ ಪ್ರತಿಯಲ್ಲಿ ಪ್ರಸ್ತಾಪಿಸಿ, ದೇಶಸೇವೆ ಮಾಡಿದವರ ಕುಟುಂಬಸ್ಥರನ್ನು ಹೀನಾಯ ಸ್ಥಿತಿಯಲ್ಲಿ ನಡೆಸಿಕೊಳ್ಳುತ್ತಿರುವುದು ಶೋಚನೀಯ ಹಾಗೂ ಅವರ ತ್ಯಾಗಕ್ಕೆ ನಾವು ನೀಡುವ ಕೊಡುಗೆ ಇದೆಯೇ? ಎಂದು ಚಾಟಿ ಬೀಸಲಾಗಿದೆ. </p><p>ಸುಪ್ರೀಂ ಮತ್ತು ಹೈಕೋರ್ಟ್ ಆದೇಶಗಳಿದ್ದರೂ, ಸರ್ಕಾರದಿಂದ ಕಾಲಕಾಲಕ್ಕೆ ದೊರೆಯಬೇಕಾದ ಸೌಲಭ್ಯಗಳನ್ನು ನೀಡಲು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವರ್ತನೆಯು ಲೋಕಾಯುಕ್ತ ಕಾಯ್ದೆಯಡಿ ಭ್ರಷ್ಟಾಚಾರ, ದುರಾಡಳಿತ ವ್ಯಾಪ್ತಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.ರಾಜ್ಯದಲ್ಲಿ ಸ್ವಾತಂತ್ರ್ಯ ಯೋಧರಿಗೆ ಸಿಗದ ‘ಗೌರವಧನ’: ಬಾಕಿ ಎಷ್ಟು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಸ್ವಾತಂತ್ರ್ಯ ಯೋಧರಿಗೆ ‘ಮಾಸಿಕ ಗೌರವಧನ’ ಮತ್ತು ಅವರ ಅವಲಂಬಿತರಿಗೆ ‘ಮಾಸಾಶನ’ ಸಮರ್ಪಕವಾಗಿ ಪಾವತಿಯಾಗದ ಹಿನ್ನೆಲೆಯಲ್ಲಿ ಕರ್ನಾಟಕ ಲೋಕಾಯುಕ್ತ ಸಂಸ್ಥೆಯು ರಾಜ್ಯದ 16 ಜಿಲ್ಲೆಗಳ ವ್ಯಾಪ್ತಿಯ 29 ಉಪವಿಭಾಗಾಧಿಕಾರಿಗಳ ವಿರುದ್ಧ ಸ್ವಯಂಪ್ರೇರಿತ ಪ್ರಕರಣ ದಾಖಲಿಸಿಕೊಂಡಿದೆ.</p><p>ಬಾಗಲಕೋಟೆ, ಜಮಖಂಡಿ, ದೊಡ್ಡಬಳ್ಳಾಪುರ, ಬೆಳಗಾವಿ, ಬೈಲಹೊಂಗಲ, ಚಿಕ್ಕೋಡಿ, ಬಳ್ಳಾರಿ, ಹರಪನಹಳ್ಳಿ, ಹೊಸಪೇಟೆ, ಬೀದರ್, ಬಸವಕಲ್ಯಾಣ, ಮಂಗಳೂರು, ಪುತ್ತೂರು, ದಾವಣಗೆರೆ, ಹೊನ್ನಾಳಿ, ಹಾವೇರಿ, ಸವಣೂರು, ಕಲಬುರಗಿ, ಸೇಡಂ, ಕೋಲಾರ, ಕೊಪ್ಪಳ, ಮಂಡ್ಯ, ಪಾಂಡವಪುರ, ರಾಯಚೂರು, ಲಿಂಗಸುಗೂರು, ತುಮಕೂರು, ತಿಪಟೂರು, ಮಧುಗಿರಿ ಹಾಗೂ ಉಡುಪಿ ಉಪವಿಭಾಗಗಳ ಎ.ಸಿ.ಗಳ ವಿರುದ್ಧ ಪ್ರಕರಣ ದಾಖಲಿಸುವಂತೆ ಉಪಲೋಕಾಯುಕ್ತ–2 ನ್ಯಾಯಮೂರ್ತಿ ಬಿ.ವೀರಪ್ಪ ಆದೇಶಿಸಿದ್ದಾರೆ. </p><p>ಈ ನ್ಯೂನತೆ ನಿವಾರಿಸಿ, ಕೈಗೊಂಡ ಕ್ರಮಗಳ ಬಗ್ಗೆ ಪಾಲನಾ ವರದಿಯನ್ನು ಪೂರಕ ದಾಖಲೆಗಳೊಂದಿಗೆ ನವೆಂಬರ್ 26ರೊಳಗೆ ಖುದ್ದಾಗಿ ಹಾಜರಾಗಿ ಸಲ್ಲಿಸುವಂತೆ ಸೂಚಿಸಲಾಗಿದೆ. ಆಯಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಈ ಬಗ್ಗೆ ಮೇಲ್ವಿಚಾರಣೆ ವಹಿಸುವಂತೆ ಆದೇಶಿಸಲಾಗಿದೆ. </p><p>ಆಗಸ್ಟ್ 18ರಂದು ‘ಪ್ರಜಾವಾಣಿ’ ಮುಖಪುಟದಲ್ಲಿ ಪ್ರಕಟವಾದ ‘ಸ್ವಾತಂತ್ರ್ಯ ಯೋಧರಿಗೆ ಸಿಗದ ಗೌರವ ಧನ: ಸರ್ಕಾರದಿಂದ ₹4.85 ಕೋಟಿ ಬಾಕಿ’ ವಿಶೇಷ ವರದಿಯನ್ನು ಆದೇಶ ಪ್ರತಿಯಲ್ಲಿ ಪ್ರಸ್ತಾಪಿಸಿ, ದೇಶಸೇವೆ ಮಾಡಿದವರ ಕುಟುಂಬಸ್ಥರನ್ನು ಹೀನಾಯ ಸ್ಥಿತಿಯಲ್ಲಿ ನಡೆಸಿಕೊಳ್ಳುತ್ತಿರುವುದು ಶೋಚನೀಯ ಹಾಗೂ ಅವರ ತ್ಯಾಗಕ್ಕೆ ನಾವು ನೀಡುವ ಕೊಡುಗೆ ಇದೆಯೇ? ಎಂದು ಚಾಟಿ ಬೀಸಲಾಗಿದೆ. </p><p>ಸುಪ್ರೀಂ ಮತ್ತು ಹೈಕೋರ್ಟ್ ಆದೇಶಗಳಿದ್ದರೂ, ಸರ್ಕಾರದಿಂದ ಕಾಲಕಾಲಕ್ಕೆ ದೊರೆಯಬೇಕಾದ ಸೌಲಭ್ಯಗಳನ್ನು ನೀಡಲು ಯಾವುದೇ ಕ್ರಮ ಕೈಗೊಳ್ಳದೆ ನಿರ್ಲಕ್ಷ್ಯ ತೋರುತ್ತಿರುವ ಅಧಿಕಾರಿಗಳ ವರ್ತನೆಯು ಲೋಕಾಯುಕ್ತ ಕಾಯ್ದೆಯಡಿ ಭ್ರಷ್ಟಾಚಾರ, ದುರಾಡಳಿತ ವ್ಯಾಪ್ತಿಗೆ ಬರಲಿದೆ ಎಂದು ಆದೇಶದಲ್ಲಿ ತಿಳಿಸಲಾಗಿದೆ.</p>.ರಾಜ್ಯದಲ್ಲಿ ಸ್ವಾತಂತ್ರ್ಯ ಯೋಧರಿಗೆ ಸಿಗದ ‘ಗೌರವಧನ’: ಬಾಕಿ ಎಷ್ಟು?.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>