<p><strong>ಮಂಡ್ಯ</strong>: ‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 87 ಅಕ್ಕಿ ಗಿರಣಿ ಮಾಲೀಕರು ಭತ್ತ ಸಂಗ್ರಹಿಸಿದ್ದು, ಕೇವಲ 32 ಗಿರಣಿಗಳಲ್ಲಿ ಮಾತ್ರ ಹಲ್ಲಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಕೂಡಲೇ ಎಲ್ಲಾ ಗಿರಣಿಗಳಲ್ಲಿ ಹಲ್ಲಿಂಗ್ ಆರಂಭಿಸಿ ಪರಿವರ್ತಿತ ಅಕ್ಕಿ ಸಂಗ್ರಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರೈತರಿಂದ ಖರೀದಿಸಿ, ಸಂಗ್ರಹಿಸಲಾಗಿರುವ ಭತ್ತದ ಹಲ್ಲಿಂಗ್ ಪ್ರಕ್ರಿಯೆ ಶೀಘ್ರವೇ ನಡೆಯಬೇಕು. ಈಗ ಇನ್ನೊಂದು ಭತ್ತದ ಹಂಗಾಮು ಬರುತ್ತಿದ್ದು ರೈತರು ಶೀಘ್ರ ಕಟಾವು ಮಾಡುವ ಸಾಧ್ಯತೆ ಇದೆ. ಈಗ ಸಂಗ್ರಹಿಸಲಾಗಿರುವ ಭತ್ತದ ಹಲ್ಲಿಂಗ್ ನಡೆಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕುರಿತು ಅಕ್ಕಿ ಗಿರಣಿ ಮಾಲೀಕರಿಗೆ ಶೀಘ್ರ ಸೂಚನೆ ನೀಡಬೇಕು. ಗಿರಣಿಗಳಲ್ಲಿ ಸಂಗ್ರಹವಾ ಗಿರುವ ಭತ್ತದ ಪ್ರಮಾಣವನ್ನು ಪರಿಶೀ ಲನೆ ನಡೆಸಬೇಕು’ ಎಂದು ಹೇಳಿದರು.</p>.<p>‘2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅಕ್ಕಿ ಸಂಗ್ರಹಿಸಿರುವ ಎಲ್ಲಾ ಗಿರಣಿಗಳು ಹಲ್ಲಿಂಗ್ ಪ್ರಕ್ರಿಯೆ ಕುರಿತ ಮಾಹಿತಿ ನೀಡಬೇಕು. ಪ್ರಕ್ರಿಯೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕುರಿತು ದೂರುಗಳು ಬಂದಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಶೀಘ್ರ ವಿದ್ಯುತ್ ಸಮಸ್ಯೆ ಪರಿಹರಿಸಲಾಗುವುದು’ ಎಂದರು.</p>.<p>‘ಸಂಗ್ರಹಿಸಿದ ಭತ್ತ ಹಲ್ಲಿಂಗ್ ಮಾಡಿ ಪರಿವರ್ತಿತ ಅಕ್ಕಿ ಪಡೆಯಲು ಏಪ್ರಿಲ್, ಮೇ, ಜೂನ್ ತಿಂಗಳವರೆಗೆ ಗುರಿ ನಿಗದಿಪಡಿಸಿದ್ದು, ಈ ಪ್ರಕ್ರಿಯೆ ತ್ವರಿತಗತಿಯಲ್ಲಿ ಸಾಗಲು ಗಿರಣಿ ಮಾಲೀಕರು ಸಹಕಾರ ನೀಡಬೇಕು. ಒಳ್ಳೆಯ ಗುಣಮಟ್ಟದ ಅಕ್ಕಿ ನೀಡುವಲ್ಲಿ ಗಿರಣಿ ಮಾಲೀಕರು ಕ್ರಮವಹಿಸಬೇಕು. ಕಳಪೆ ಗುಣಮಟ್ಟದ ಅಕ್ಕಿ ನೀಡಿದರೆ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಭತ್ತ, ರಾಗಿ ಖರೀದಿ ಮಾಡಿರುವ ರೈತರಿಗೆ ಹಣ ಸಂದಾಯ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಮಾರ್ಕೆಟಿಂಗ್ ಫೆಡರೇಷನ್ ಅಧಿಕಾರಿಗಳು ಕ್ರಮ ವಹಿಸಬೇಕು. ರೈತರಿಗೆ ಹಣ ವಿತರಿಸುವ ಪ್ರಕ್ರಿಯೆ ಯಾವುದೇ ಕಾರಣಕ್ಕೂ ತಡವಾಗಬಾರದು. ನಿಗದಿತ ಅವಧಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡರೆ ಮುಂದಿನ ಹಂಗಾಮಿನ ವೇಳೆಗೆ ಯೋಜನೆ ಜಾರಿಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾ ರಗಳ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ, ಜಂಟಿ ಕೃಷಿ ನಿರ್ದೇಶಕರಾದ ಬಿ.ಎಸ್.ಚಂದ್ರಶೇಖರ್, ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷ ಎಂ.ಎಸ್.ರಮೇಶ್, ಕಾರ್ಯದರ್ಶಿ ಎಚ್.ಸಿ.ಮಹೇಶ್ ಇದ್ದರು.</p>.<p><strong>ನೋಂದಣಿ, ಖರೀದಿ ಅವಧಿ ವಿಸ್ತರಣೆ</strong></p>.<p>2021-22ನೇ ಸಾಲಿನ ರಬಿ, ಮುಂಗಾರು ಅವಧಿಯ ಋತುವಿನ ಭತ್ತ ಖರೀದಿ ಸಂಬಂಧ ನೋಂದಣಿ ದಿನಾಂಕವನ್ನು ಮೇ 5ರ ವರೆಗೆ, ಖರೀದಿ ದಿನಾಂಕವನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ.</p>.<p>ಪ್ರತಿ ಕ್ವಿಂಟಲ್ ಸಾಮಾನ್ಯ ಮತ್ತು ಜ್ಯೋತಿ ಭತ್ತವನ್ನು ₹ 1868ರ ದರದಲ್ಲಿ ಖರೀದಿಸಲಾಗುವುದು. ಕೋವಿಡ್-19 ಹರಡುವಿಕೆ ಹಿನ್ನೆಲೆಯಲ್ಲಿ ಅಂತರ ಹಾಗೂ ನೈರ್ಮಲ್ಯ ಕಾಪಾಡಲು ಸಂಗ್ರಹಣಾ ಕೇಂದ್ರದಲ್ಲಿ ಜನಜಂಗುಳಿ ಉಂಟಾಗದಂತೆ ನೋಡಿಕೊಳ್ಳಲು ನಿರ್ದಿಷ್ಟ ಸಂಖ್ಯೆಯ ರೈತರಿಗೆ ಮಾತ್ರ ಅವಕಾಶ ನೀಡಲಾಗುವುದು.</p>.<p>ಕೋವಿಡ್ ಬಗ್ಗೆ ಜಿಲ್ಲಾಡಳಿತ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಗ್ರಹಣಾ ಕೇಂದ್ರಕ್ಕೆ ಬರುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ‘ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ 87 ಅಕ್ಕಿ ಗಿರಣಿ ಮಾಲೀಕರು ಭತ್ತ ಸಂಗ್ರಹಿಸಿದ್ದು, ಕೇವಲ 32 ಗಿರಣಿಗಳಲ್ಲಿ ಮಾತ್ರ ಹಲ್ಲಿಂಗ್ ಪ್ರಕ್ರಿಯೆ ನಡೆಯುತ್ತಿದೆ. ಕೂಡಲೇ ಎಲ್ಲಾ ಗಿರಣಿಗಳಲ್ಲಿ ಹಲ್ಲಿಂಗ್ ಆರಂಭಿಸಿ ಪರಿವರ್ತಿತ ಅಕ್ಕಿ ಸಂಗ್ರಹಿಸಬೇಕು’ ಎಂದು ಜಿಲ್ಲಾಧಿಕಾರಿ ಎಸ್.ಅಶ್ವಥಿ ಸೂಚನೆ ನೀಡಿದರು.</p>.<p>ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ನಡೆದ ಜಿಲ್ಲಾ ಟಾಸ್ಕ್ಫೋರ್ಸ್ ಸಮಿತಿ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ರೈತರಿಂದ ಖರೀದಿಸಿ, ಸಂಗ್ರಹಿಸಲಾಗಿರುವ ಭತ್ತದ ಹಲ್ಲಿಂಗ್ ಪ್ರಕ್ರಿಯೆ ಶೀಘ್ರವೇ ನಡೆಯಬೇಕು. ಈಗ ಇನ್ನೊಂದು ಭತ್ತದ ಹಂಗಾಮು ಬರುತ್ತಿದ್ದು ರೈತರು ಶೀಘ್ರ ಕಟಾವು ಮಾಡುವ ಸಾಧ್ಯತೆ ಇದೆ. ಈಗ ಸಂಗ್ರಹಿಸಲಾಗಿರುವ ಭತ್ತದ ಹಲ್ಲಿಂಗ್ ನಡೆಸಲು ಅಧಿಕಾರಿಗಳು ಕ್ರಮ ವಹಿಸಬೇಕು. ಈ ಕುರಿತು ಅಕ್ಕಿ ಗಿರಣಿ ಮಾಲೀಕರಿಗೆ ಶೀಘ್ರ ಸೂಚನೆ ನೀಡಬೇಕು. ಗಿರಣಿಗಳಲ್ಲಿ ಸಂಗ್ರಹವಾ ಗಿರುವ ಭತ್ತದ ಪ್ರಮಾಣವನ್ನು ಪರಿಶೀ ಲನೆ ನಡೆಸಬೇಕು’ ಎಂದು ಹೇಳಿದರು.</p>.<p>‘2020-21ನೇ ಸಾಲಿನ ಕನಿಷ್ಠ ಬೆಂಬಲ ಬೆಲೆ ಯೋಜನೆಯಡಿ ಅಕ್ಕಿ ಸಂಗ್ರಹಿಸಿರುವ ಎಲ್ಲಾ ಗಿರಣಿಗಳು ಹಲ್ಲಿಂಗ್ ಪ್ರಕ್ರಿಯೆ ಕುರಿತ ಮಾಹಿತಿ ನೀಡಬೇಕು. ಪ್ರಕ್ರಿಯೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಿರುವ ಕುರಿತು ದೂರುಗಳು ಬಂದಿವೆ. ಈ ಸಂಬಂಧ ಅಧಿಕಾರಿಗಳ ಜೊತೆ ಚರ್ಚಿಸಿದ್ದೇನೆ. ಶೀಘ್ರ ವಿದ್ಯುತ್ ಸಮಸ್ಯೆ ಪರಿಹರಿಸಲಾಗುವುದು’ ಎಂದರು.</p>.<p>‘ಸಂಗ್ರಹಿಸಿದ ಭತ್ತ ಹಲ್ಲಿಂಗ್ ಮಾಡಿ ಪರಿವರ್ತಿತ ಅಕ್ಕಿ ಪಡೆಯಲು ಏಪ್ರಿಲ್, ಮೇ, ಜೂನ್ ತಿಂಗಳವರೆಗೆ ಗುರಿ ನಿಗದಿಪಡಿಸಿದ್ದು, ಈ ಪ್ರಕ್ರಿಯೆ ತ್ವರಿತಗತಿಯಲ್ಲಿ ಸಾಗಲು ಗಿರಣಿ ಮಾಲೀಕರು ಸಹಕಾರ ನೀಡಬೇಕು. ಒಳ್ಳೆಯ ಗುಣಮಟ್ಟದ ಅಕ್ಕಿ ನೀಡುವಲ್ಲಿ ಗಿರಣಿ ಮಾಲೀಕರು ಕ್ರಮವಹಿಸಬೇಕು. ಕಳಪೆ ಗುಣಮಟ್ಟದ ಅಕ್ಕಿ ನೀಡಿದರೆ ಕ್ರಮ ಜರುಗಿಸಲಾಗುವುದು’ ಎಂದು ಎಚ್ಚರಿಕೆ ನೀಡಿದರು.</p>.<p>‘ಭತ್ತ, ರಾಗಿ ಖರೀದಿ ಮಾಡಿರುವ ರೈತರಿಗೆ ಹಣ ಸಂದಾಯ ಮಾಡಲು ಕ್ರಮ ಕೈಗೊಳ್ಳಬೇಕು. ಈ ಕುರಿತು ಮಾರ್ಕೆಟಿಂಗ್ ಫೆಡರೇಷನ್ ಅಧಿಕಾರಿಗಳು ಕ್ರಮ ವಹಿಸಬೇಕು. ರೈತರಿಗೆ ಹಣ ವಿತರಿಸುವ ಪ್ರಕ್ರಿಯೆ ಯಾವುದೇ ಕಾರಣಕ್ಕೂ ತಡವಾಗಬಾರದು. ನಿಗದಿತ ಅವಧಿಯಲ್ಲಿ ಈ ಪ್ರಕ್ರಿಯೆ ಪೂರ್ಣಗೊಂಡರೆ ಮುಂದಿನ ಹಂಗಾಮಿನ ವೇಳೆಗೆ ಯೋಜನೆ ಜಾರಿಗೆ ಸಿದ್ಧತೆ ಮಾಡಿಕೊಳ್ಳಲು ಸಾಧ್ಯವಾಗುತ್ತದೆ’ ಎಂದರು.</p>.<p>ಆಹಾರ ಮತ್ತು ನಾಗರಿಕ ಸರಬರಾಜು ಹಾಗೂ ಗ್ರಾಹಕರ ವ್ಯವಹಾ ರಗಳ ಇಲಾಖೆಯ ಜಂಟಿ ನಿರ್ದೇಶಕಿ ಕುಮುದಾ, ಜಂಟಿ ಕೃಷಿ ನಿರ್ದೇಶಕರಾದ ಬಿ.ಎಸ್.ಚಂದ್ರಶೇಖರ್, ಅಕ್ಕಿ ಗಿರಣಿ ಮಾಲೀಕರ ಸಂಘದ ಅಧ್ಯಕ್ಷ ಎಂ.ಎಸ್.ರಮೇಶ್, ಕಾರ್ಯದರ್ಶಿ ಎಚ್.ಸಿ.ಮಹೇಶ್ ಇದ್ದರು.</p>.<p><strong>ನೋಂದಣಿ, ಖರೀದಿ ಅವಧಿ ವಿಸ್ತರಣೆ</strong></p>.<p>2021-22ನೇ ಸಾಲಿನ ರಬಿ, ಮುಂಗಾರು ಅವಧಿಯ ಋತುವಿನ ಭತ್ತ ಖರೀದಿ ಸಂಬಂಧ ನೋಂದಣಿ ದಿನಾಂಕವನ್ನು ಮೇ 5ರ ವರೆಗೆ, ಖರೀದಿ ದಿನಾಂಕವನ್ನು ಜೂನ್ 30ರ ವರೆಗೆ ವಿಸ್ತರಿಸಲಾಗಿದೆ.</p>.<p>ಪ್ರತಿ ಕ್ವಿಂಟಲ್ ಸಾಮಾನ್ಯ ಮತ್ತು ಜ್ಯೋತಿ ಭತ್ತವನ್ನು ₹ 1868ರ ದರದಲ್ಲಿ ಖರೀದಿಸಲಾಗುವುದು. ಕೋವಿಡ್-19 ಹರಡುವಿಕೆ ಹಿನ್ನೆಲೆಯಲ್ಲಿ ಅಂತರ ಹಾಗೂ ನೈರ್ಮಲ್ಯ ಕಾಪಾಡಲು ಸಂಗ್ರಹಣಾ ಕೇಂದ್ರದಲ್ಲಿ ಜನಜಂಗುಳಿ ಉಂಟಾಗದಂತೆ ನೋಡಿಕೊಳ್ಳಲು ನಿರ್ದಿಷ್ಟ ಸಂಖ್ಯೆಯ ರೈತರಿಗೆ ಮಾತ್ರ ಅವಕಾಶ ನೀಡಲಾಗುವುದು.</p>.<p>ಕೋವಿಡ್ ಬಗ್ಗೆ ಜಿಲ್ಲಾಡಳಿತ ನೀಡಿರುವ ಸೂಚನೆಗಳನ್ನು ಕಡ್ಡಾಯವಾಗಿ ಪಾಲಿಸಬೇಕು. ಸಂಗ್ರಹಣಾ ಕೇಂದ್ರಕ್ಕೆ ಬರುವ ರೈತರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಜಿಲ್ಲಾಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>