<p><strong>ಶ್ರೀರಂಗಪಟ್ಟಣ:</strong> ‘ಸತ್ಯ ಸಾಯಿಬಾಬಾ ಅವರ ಜನ್ಮ ಶತಮಾನೋತ್ಸವದ ನಿಮಿತ್ತ ಪಟ್ಟಣದ ಶ್ರೀ ಸಾಯಿ ಸೇವಾ ಅನಾಥಾಶ್ರಮದ ವತಿಯಿಂದ 100 ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಭರಿಸಲಾಗುವುದು’ ಎಂದು ಆಶ್ರಮದ ಮುಖ್ಯಸ್ಥ ಎಸ್.ಎಚ್. ಸಾಯಿಕುಮಾರ್ ಹೇಳಿದರು.</p>.<p>ಪಟ್ಟಣದ ಶ್ರೀ ಸಾಯಿ ಸೇವಾ ಅನಾಥಾಶ್ರಮದಲ್ಲಿ ಭಾನುವಾರ ಏರ್ಪಡಿಸಿದ್ದ ಸತ್ಯ ಸಾಯಿಬಾಬಾ ಅವರ ಜನ್ಮ ಶತಮಾನೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಪಟ್ಟಣದ ಕಾವೇರಿ ವಿದ್ಯಾ ಶಾಲೆಯಲ್ಲಿ ಓದುತ್ತಿರುವ ವಿವಿಧ ಗ್ರಾಮಗಳ 100 ಬಡ ವಿದ್ಯಾರ್ಥಿಗಳ ₹1.50 ಲಕ್ಷ ಶುಲ್ಕವನ್ನು ಪಾವತಿಸಲಾಗುತ್ತದೆ. ಈ ಸಂಬಂಧ ಶಾಲೆಯ ಮುಖ್ಯ ಶಿಕ್ಷಕರಿಂದ ವಿದ್ಯಾರ್ಥಿಗಳ ಪಟ್ಟಿ ಪಡೆದಿದ್ದು, ಸೋಮವಾರ ಅಷ್ಟೂ ಶುಲ್ಕವನ್ನು ಪಾವತಿಸಲಾಗುವುದು’ ಎಂದು ಅವರು ತಿಳಿಸಿದರು.</p>.<p>ಆಶ್ರಮದಲ್ಲಿ ಭಾನುವಾರ ನಡೆದ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ 100 ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಲೇಖನ ಸಾಮಗ್ರಿ, ಅಂಗನವಾಡಿ ಕೇಂದ್ರಗಳ 50 ಮಕ್ಕಳಿಗೆ ಹಾಸಿಗೆ, ಪಟ್ಟಣದ ಪೂರ್ಣಯ್ಯ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ವಿತರಿಸಲಾಯಿತು.</p>.<p>ಜ್ಯೋತಿಷಿ ವಿ. ಭಾನುಪ್ರಕಾಶ ಶರ್ಮಾ ನೇತೃತ್ವದಲ್ಲಿ ಸತ್ಯಸಾಯಿ ಬಾಬಾ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಅಭಿಷೇಕ ಮತ್ತು ಸಾಮೂಹಿಕ ಭಜನೆಗಳು ನಡೆದವು. ಲಕ್ಷ್ಮೀ ಹಲಗಪ್ಪ, ಸಾಯಿ ಗಣೇಶ್, ಡಾ.ಸಾಯಿವೀರ್, ಕಿಶೋರ್, ನಂದನ್ ಇದ್ದರು. ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ‘ಸತ್ಯ ಸಾಯಿಬಾಬಾ ಅವರ ಜನ್ಮ ಶತಮಾನೋತ್ಸವದ ನಿಮಿತ್ತ ಪಟ್ಟಣದ ಶ್ರೀ ಸಾಯಿ ಸೇವಾ ಅನಾಥಾಶ್ರಮದ ವತಿಯಿಂದ 100 ಬಡ ವಿದ್ಯಾರ್ಥಿಗಳ ಶಾಲಾ ಶುಲ್ಕವನ್ನು ಭರಿಸಲಾಗುವುದು’ ಎಂದು ಆಶ್ರಮದ ಮುಖ್ಯಸ್ಥ ಎಸ್.ಎಚ್. ಸಾಯಿಕುಮಾರ್ ಹೇಳಿದರು.</p>.<p>ಪಟ್ಟಣದ ಶ್ರೀ ಸಾಯಿ ಸೇವಾ ಅನಾಥಾಶ್ರಮದಲ್ಲಿ ಭಾನುವಾರ ಏರ್ಪಡಿಸಿದ್ದ ಸತ್ಯ ಸಾಯಿಬಾಬಾ ಅವರ ಜನ್ಮ ಶತಮಾನೋತ್ಸವದಲ್ಲಿ ಅವರು ಮಾತನಾಡಿದರು.</p>.<p>‘ಪಟ್ಟಣದ ಕಾವೇರಿ ವಿದ್ಯಾ ಶಾಲೆಯಲ್ಲಿ ಓದುತ್ತಿರುವ ವಿವಿಧ ಗ್ರಾಮಗಳ 100 ಬಡ ವಿದ್ಯಾರ್ಥಿಗಳ ₹1.50 ಲಕ್ಷ ಶುಲ್ಕವನ್ನು ಪಾವತಿಸಲಾಗುತ್ತದೆ. ಈ ಸಂಬಂಧ ಶಾಲೆಯ ಮುಖ್ಯ ಶಿಕ್ಷಕರಿಂದ ವಿದ್ಯಾರ್ಥಿಗಳ ಪಟ್ಟಿ ಪಡೆದಿದ್ದು, ಸೋಮವಾರ ಅಷ್ಟೂ ಶುಲ್ಕವನ್ನು ಪಾವತಿಸಲಾಗುವುದು’ ಎಂದು ಅವರು ತಿಳಿಸಿದರು.</p>.<p>ಆಶ್ರಮದಲ್ಲಿ ಭಾನುವಾರ ನಡೆದ ಜನ್ಮ ಶತಮಾನೋತ್ಸವ ಕಾರ್ಯಕ್ರಮದಲ್ಲಿ 100 ವಿದ್ಯಾರ್ಥಿಗಳಿಗೆ ಬ್ಯಾಗ್ ಮತ್ತು ಲೇಖನ ಸಾಮಗ್ರಿ, ಅಂಗನವಾಡಿ ಕೇಂದ್ರಗಳ 50 ಮಕ್ಕಳಿಗೆ ಹಾಸಿಗೆ, ಪಟ್ಟಣದ ಪೂರ್ಣಯ್ಯ ಬೀದಿಯ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ಕಂಪ್ಯೂಟರ್ ಮತ್ತು ಪ್ರಿಂಟರ್ ವಿತರಿಸಲಾಯಿತು.</p>.<p>ಜ್ಯೋತಿಷಿ ವಿ. ಭಾನುಪ್ರಕಾಶ ಶರ್ಮಾ ನೇತೃತ್ವದಲ್ಲಿ ಸತ್ಯಸಾಯಿ ಬಾಬಾ ಅವರ ಭಾವಚಿತ್ರಕ್ಕೆ ಪೂಜೆ ಸಲ್ಲಿಸಲಾಯಿತು. ಅಭಿಷೇಕ ಮತ್ತು ಸಾಮೂಹಿಕ ಭಜನೆಗಳು ನಡೆದವು. ಲಕ್ಷ್ಮೀ ಹಲಗಪ್ಪ, ಸಾಯಿ ಗಣೇಶ್, ಡಾ.ಸಾಯಿವೀರ್, ಕಿಶೋರ್, ನಂದನ್ ಇದ್ದರು. ಅನ್ನ ಸಂತರ್ಪಣೆ ಏರ್ಪಡಿಸಲಾಗಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>