<p><strong>ಪಾಂಡವಪುರ</strong>: ತಾಲ್ಲೂಕಿನ ಹುಲ್ಕೆರೆ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.</p>.<p>ಸೌಮ್ಯ (23) ಕೊಲೆಯಾದವರು. ಆರೋಪಿ ಎಚ್.ಪಿ.ಗಣೇಶ್ (33) ಘಟನೆ ನಂತರ ತಲೆಮರೆಸಿಕೊಂಡಿದ್ದಾನೆ.</p>.<p>ನಂಜನಗೂಡು ತಾಲ್ಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಅವರು 6 ವರ್ಷದ ಹಿಂದೆ ಹುಲ್ಕೆರೆ ಗ್ರಾಮದ ಗಣೇಶ ಅವರನ್ನು ವರಿಸಿದ್ದರು. ಇವರಿಗೆ 4 ವರ್ಷದ ಗಂಡು ಮಗು ಇದೆ.</p>.<p>ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು ಎಂದು ಹೇಳಲಾಗುತ್ತಿದೆ. ಸೋಮವಾರವೂ ಕೂಡ ಜಗಳ ನಡೆದು, ಕೋಪದಿಂದ ಗಂಡ ಕಬ್ಬಿಣದ ಆಯುಧದಿಂದ ಪತ್ನಿಯ ಕತ್ತು ಸೀಳಿ, ಆಕೆ ಮೃತಪಟ್ಟಿದ್ದನ್ನು ಖಚಿತಪಡಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.</p>.<p> 4 ವರ್ಷದ ಮಗು ಅಂಗನವಾಡಿ ಕೇಂದ್ರಕ್ಕೆ ಹೋಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಕೆಲ ಹೊತ್ತಿನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸೌಮ್ಯಳ ಶವವನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಪಾಂಡವಪುರ</strong>: ತಾಲ್ಲೂಕಿನ ಹುಲ್ಕೆರೆ ಗ್ರಾಮದಲ್ಲಿ ಸೋಮವಾರ ಮಧ್ಯಾಹ್ನ ಪತಿಯೇ ತನ್ನ ಪತ್ನಿಯ ಕತ್ತು ಸೀಳಿ ಕೊಲೆ ಮಾಡಿ ಪರಾರಿಯಾಗಿದ್ದಾನೆ.</p>.<p>ಸೌಮ್ಯ (23) ಕೊಲೆಯಾದವರು. ಆರೋಪಿ ಎಚ್.ಪಿ.ಗಣೇಶ್ (33) ಘಟನೆ ನಂತರ ತಲೆಮರೆಸಿಕೊಂಡಿದ್ದಾನೆ.</p>.<p>ನಂಜನಗೂಡು ತಾಲ್ಲೂಕಿನ ಕೊಂಗಳ್ಳಿ ಗ್ರಾಮದ ಸೌಮ್ಯ ಅವರು 6 ವರ್ಷದ ಹಿಂದೆ ಹುಲ್ಕೆರೆ ಗ್ರಾಮದ ಗಣೇಶ ಅವರನ್ನು ವರಿಸಿದ್ದರು. ಇವರಿಗೆ 4 ವರ್ಷದ ಗಂಡು ಮಗು ಇದೆ.</p>.<p>ಕೌಟುಂಬಿಕ ವಿಚಾರವಾಗಿ ಇಬ್ಬರ ನಡುವೆ ಆಗಾಗ್ಗೆ ಜಗಳವಾಗುತ್ತಿತ್ತು ಎಂದು ಹೇಳಲಾಗುತ್ತಿದೆ. ಸೋಮವಾರವೂ ಕೂಡ ಜಗಳ ನಡೆದು, ಕೋಪದಿಂದ ಗಂಡ ಕಬ್ಬಿಣದ ಆಯುಧದಿಂದ ಪತ್ನಿಯ ಕತ್ತು ಸೀಳಿ, ಆಕೆ ಮೃತಪಟ್ಟಿದ್ದನ್ನು ಖಚಿತಪಡಿಸಿಕೊಂಡು ಸ್ಥಳದಿಂದ ಪರಾರಿಯಾಗಿದ್ದಾನೆ ಎನ್ನಲಾಗಿದೆ.</p>.<p> 4 ವರ್ಷದ ಮಗು ಅಂಗನವಾಡಿ ಕೇಂದ್ರಕ್ಕೆ ಹೋಗಿದ್ದ ಎಂದು ಸ್ಥಳೀಯರು ತಿಳಿಸಿದ್ದಾರೆ.</p>.<p>ಕೆಲ ಹೊತ್ತಿನಲ್ಲಿ ರಕ್ತದ ಮಡುವಿನಲ್ಲಿ ಬಿದ್ದಿದ್ದ ಸೌಮ್ಯಳ ಶವವನ್ನು ಗಮನಿಸಿದ ಅಕ್ಕಪಕ್ಕದ ಮನೆಯವರು ಪೊಲೀಸರಿಗೆ ವಿಷಯ ಮುಟ್ಟಿಸಿದ್ದಾರೆ. ಈ ಸಂಬಂಧ ಪಾಂಡವಪುರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>