<p><strong>ಮಂಡ್ಯ:</strong> ವಿಚ್ಛೇದನ ಪಡೆದು ಪ್ರತ್ಯೇಕ ಜೀವನ ನಡೆಸುತ್ತಿದ್ದ ಪತ್ನಿಯನ್ನು ಕೊಲೆ ಮಾಡಿದ್ದ ಅಪರಾಧಿ ಪತಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.</p>.<p>ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಸುರೇಶ್ ಶಿಕ್ಷೆಗೆ ಗುರಿಯಾದವನು. ಕಳೆದ 18 ವರ್ಷಗಳ ಹಿಂದೆ ಅದೇ ಗ್ರಾಮದ ಶಾಲಿನಿ ಎಂಬುವರನ್ನು ಮದುವೆಯಾಗಿದ್ದನು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು.</p>.<p>ಕೌಟುಂಬಿಕ ಕಲಹದಿಂದ ಶಾಲಿನಿ ಅವರು ವಿಚ್ಚೇದನ ಪಡೆದು ಪ್ರತ್ಯೇಕವಾಗಿ ವಾಸವಾಗಿದ್ದರು. ಸುರೇಶ್ ಶಾಲಿನಿಯೊಂದಿಗೆ ಜೀವನ ನಡೆಸಲು ಮುಂದಾದಾಗ ಇದಕ್ಕೆ ಪತ್ನಿ ಒಪ್ಪಿರಲಿಲ್ಲ ಹಾಗೂ ಮಕ್ಕಳೊಂದಿಗೂ ಸಂಪರ್ಕ ಮಾಡದಂತೆ ತಡೆಯೊಡ್ಡಲಾಗಿತ್ತು.</p>.<p>ಕೋಪಗೊಂಡ ಸುರೇಶ 2022ರ ಜ.20 ರಂದು ಶಾಲಿನಿ ಅವರು ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಬರುತ್ತಿರುವ ದಾರಿಯಲ್ಲಿ ಗಲಾಟೆ ಮಾಡಿ ಕೊಡಲಿಯಿಂದ ಹಲ್ಲೆ ಮಾಡಿ, ಶಿರಚ್ಛೇದನ ಮಾಡಿದ್ದನು. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುರೇಶ್ ವಿರುದ್ಧ ಪ್ರಕರಣ ದಾಖಲಲಾಗಿತ್ತು.</p>.<p>ನಂತರ ಪೊಲೀಸರು ಸಾಕ್ಷಿ ಸಮೇತ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸೈಯದ್ ಉನ್ನಿಸಾ ಅವರು ಸುರೇಶ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ, ಐದು ವರ್ಷ ಸೆರೆಮನೆ ವಾಸದ ತೀರ್ಪು ನೀಡಿದ್ದಾರೆ.</p>.<p>ಜೊತೆಗೆ ಮೃತಳ ಇಬ್ಬರು ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡಲು ನಿರ್ದೇಶಿಸಲಾಗಿದೆ. ಆರೋಪಿ ವಿರುದ್ಧ ಸರ್ಕಾರಿ ಅಭಿಯೋಜಕರಾದ ಎನ್.ಬಿ.ವಿಜಯಲಕ್ಷ್ಮಿ, ಕೆ.ನಾಗರಾಜ ವಾದ ಮಂಡಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ವಿಚ್ಛೇದನ ಪಡೆದು ಪ್ರತ್ಯೇಕ ಜೀವನ ನಡೆಸುತ್ತಿದ್ದ ಪತ್ನಿಯನ್ನು ಕೊಲೆ ಮಾಡಿದ್ದ ಅಪರಾಧಿ ಪತಿಗೆ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ನೀಡಿದೆ.</p>.<p>ತಾಲ್ಲೂಕಿನ ರಾಗಿಮುದ್ದನಹಳ್ಳಿ ಗ್ರಾಮದ ಸುರೇಶ್ ಶಿಕ್ಷೆಗೆ ಗುರಿಯಾದವನು. ಕಳೆದ 18 ವರ್ಷಗಳ ಹಿಂದೆ ಅದೇ ಗ್ರಾಮದ ಶಾಲಿನಿ ಎಂಬುವರನ್ನು ಮದುವೆಯಾಗಿದ್ದನು. ಇವರಿಗೆ ಇಬ್ಬರು ಹೆಣ್ಣು ಮಕ್ಕಳಿದ್ದರು.</p>.<p>ಕೌಟುಂಬಿಕ ಕಲಹದಿಂದ ಶಾಲಿನಿ ಅವರು ವಿಚ್ಚೇದನ ಪಡೆದು ಪ್ರತ್ಯೇಕವಾಗಿ ವಾಸವಾಗಿದ್ದರು. ಸುರೇಶ್ ಶಾಲಿನಿಯೊಂದಿಗೆ ಜೀವನ ನಡೆಸಲು ಮುಂದಾದಾಗ ಇದಕ್ಕೆ ಪತ್ನಿ ಒಪ್ಪಿರಲಿಲ್ಲ ಹಾಗೂ ಮಕ್ಕಳೊಂದಿಗೂ ಸಂಪರ್ಕ ಮಾಡದಂತೆ ತಡೆಯೊಡ್ಡಲಾಗಿತ್ತು.</p>.<p>ಕೋಪಗೊಂಡ ಸುರೇಶ 2022ರ ಜ.20 ರಂದು ಶಾಲಿನಿ ಅವರು ಖಾಸಗಿ ಕಾರ್ಖಾನೆಯಲ್ಲಿ ಕೆಲಸ ಮುಗಿಸಿಕೊಂಡು ಗ್ರಾಮಕ್ಕೆ ಬರುತ್ತಿರುವ ದಾರಿಯಲ್ಲಿ ಗಲಾಟೆ ಮಾಡಿ ಕೊಡಲಿಯಿಂದ ಹಲ್ಲೆ ಮಾಡಿ, ಶಿರಚ್ಛೇದನ ಮಾಡಿದ್ದನು. ಈ ಸಂಬಂಧ ಮಂಡ್ಯ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ಸುರೇಶ್ ವಿರುದ್ಧ ಪ್ರಕರಣ ದಾಖಲಲಾಗಿತ್ತು.</p>.<p>ನಂತರ ಪೊಲೀಸರು ಸಾಕ್ಷಿ ಸಮೇತ ನ್ಯಾಯಾಲಯಕ್ಕೆ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು. ಪ್ರಕರಣದ ವಿಚಾರಣೆ ನಡೆಸಿದ ಎರಡನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದ ನ್ಯಾಯಾಧೀಶೆ ಸೈಯದ್ ಉನ್ನಿಸಾ ಅವರು ಸುರೇಶ್ ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಜೀವಾವಧಿ ಶಿಕ್ಷೆ, ₹50 ಸಾವಿರ ದಂಡ, ಐದು ವರ್ಷ ಸೆರೆಮನೆ ವಾಸದ ತೀರ್ಪು ನೀಡಿದ್ದಾರೆ.</p>.<p>ಜೊತೆಗೆ ಮೃತಳ ಇಬ್ಬರು ಮಕ್ಕಳಿಗೆ ಕಾನೂನು ಸೇವಾ ಪ್ರಾಧಿಕಾರದಿಂದ ಪರಿಹಾರ ನೀಡಲು ನಿರ್ದೇಶಿಸಲಾಗಿದೆ. ಆರೋಪಿ ವಿರುದ್ಧ ಸರ್ಕಾರಿ ಅಭಿಯೋಜಕರಾದ ಎನ್.ಬಿ.ವಿಜಯಲಕ್ಷ್ಮಿ, ಕೆ.ನಾಗರಾಜ ವಾದ ಮಂಡಿಸಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>