ಮಂಡ್ಯ ಮತ್ತು ಹಾಸನ ಕ್ಷೇತ್ರ ತಮ್ಮ ಪಕ್ಷಕ್ಕೆ ಲಭಿಸಲಿದೆ ಎಂಬ ಬಿಜೆಪಿ ರಾಜ್ಯ ಘಟಕದ ಪ್ರಧಾನ ಕಾರ್ಯದರ್ಶಿ ಪ್ರೀತಂ ಗೌಡ ಹೇಳಿಕೆ ಕುರಿತು ಪ್ರತಿಕ್ರಿಯಿಸಿದ ಅವರು, ‘ಬಿಜೆಪಿಯ ಕೇಂದ್ರದ ನಾಯಕರು ಮತ್ತು ನಮ್ಮ ಪಕ್ಷದ ವರಿಷ್ಠರು ಸೇರಿ ಶೀಘ್ರದಲ್ಲಿ ಎಲ್ಲ ಪ್ರಶ್ನೆಗಳಿಗೂ ತೆರೆ ಎಳೆಯುತ್ತಾರೆ. ಅಲ್ಲಿಯವರೆಗೆ ತಾಳ್ಮೆಯಿಂದ ಕಾಯಬೇಕು. ಕಾಲವೇ ಎಲ್ಲದಕ್ಕೂ ಉತ್ತರ ಕೊಡುತ್ತದೆ’ ಎಂದರು.