<p><strong>ಭಾರತೀನಗರ:</strong> ‘ಜಿಲ್ಲೆಯ ಜನರು ಆಶೀರ್ವಾದ ಮಾಡಿದ್ದರಿಂದಲೇ ತಂದೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೇಂದ್ರ ಸರ್ಕಾರ ದೊಡ್ಡ ಜವಾಬ್ದಾರಿ ನೀಡಿದ್ದು, ಜಿಲ್ಲೆಗೆ ಅವರು ಬರಲು ಆಗದ ಸಮಯದಲ್ಲಿ ಆ ಜವಾಬ್ದಾರಿಯನ್ನು ನಾನು ನಿರ್ವಹಿಸುತ್ತೇನೆ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p>.<p>ಸಮೀಪದ ಬೊಮ್ಮನಹಳ್ಳಿಯಲ್ಲಿ ನಿರ್ಮಿಸಿರುವ ಲಕ್ಷ್ಮೀ ದೇವಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.</p>.<p>‘ಕುಮಾರಸ್ವಾಮಿ ಅವರಿಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯನ್ನು ನೀಡಿರುವುದರಿಂದ ಬೆಂಗಳೂರಿಗೆ ವಾರಕ್ಕೆರಡು ದಿನ ಮಾತ್ರ ಬರುತ್ತಾರೆ. ಅವರು ಈ ದಿನ ಮಂತ್ರಿಯಾಗಲು ಮಂಡ್ಯ ಜಿಲ್ಲೆಯ ಜನರೇ ಕಾರಣ. ಹಾಗಾಗಿ ಜನರ ಕಷ್ಟ–ಸುಖ ಆಲಿಸುವ ಜವಾಬ್ದಾರಿ ನನ್ನದು. ಜಿಲ್ಲೆಯ ಯಾವುದೇ ಗ್ರಾಮದವರಾದರೂ ಸರಿ ನಮ್ಮ ಮುಖಂಡರ ಮೂಲಕ ನನಗೆ ವಿಚಾರ ತಿಳಿಸಿದರೆ ತಕ್ಷಣದಲ್ಲೇ ಸ್ಪಂದಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಜಿಲ್ಲೆಯಲ್ಲಿ ಮದ್ದೂರು ತಾಲ್ಲೂಕಿನ ಜನತೆಯೇ ಹೆಚ್ಚು ಮತಗಳನ್ನು ನೀಡಿದ್ದು, ಎಲ್ಲಾ ತಾಲ್ಲೂಕುಗಳಲ್ಲಿಯೂ ಲೀಡ್ ಕೊಟ್ಟಿದ್ದೀರಿ. ನಿಮ್ಮ ಋಣ ಮರೆಯಲಾರದಂತಹದು. ಯಾವುದೇ ಸಮಾರಂಭವಾದರೂ ಕುಮಾರಸ್ವಾಮಿ ಅವರನ್ನು ಕಾಯದೆ ನನಗೆ ತಿಳಿಸಿದಲ್ಲಿ ನಾನು ಎಲ್ಲಾ ಕರ್ಯಕ್ರಮಗಳಲ್ಲೂ ಭಾಗವಹಿಸುತ್ತೇನೆ’ ಎಂದು ಹೇಳಿದರು.</p>.<p>ಗುರುವಾರ ರಾತ್ರಿಯಿಂದಲೇ ದೇವಾಲಯದಲ್ಲಿ ವಿವಿಧ ಹೋಮ, ಹವನ ಸೇರಿದಂತೆ ವಿಶೇಷ ಪೂಜೆಗಳು ನಡೆದವು. ಹೊನ್ನಾಯ್ಕನಹಳ್ಳಿಮಠದ ಬಸವ, ಕಾರ್ಕಹಳ್ಳಿ ಬಸವೇಶ್ವರಸ್ವಾಮಿ ಬಸವ, ಆಲಭುಜನಹಳ್ಳಿ ಬಸವೇಶ್ವರಸ್ವಾಮಿ ಬಸವ, ತಿಮ್ಮಪ್ಪನ ವಾಹನ, ಹರಿಗೆಗಳು ಸೇರಿದಂತೆ ಗ್ರಾಮದ ವಿವಿಧ ದೇವರುಗಳನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಅನ್ನದಾನಿ, ಮುಖಂಡರಾದ ಮಾದನಾಯ್ಕನಹಳ್ಳಿ ರಾಜಣ್ಣ, ಕೂಳಗೆರೆ ಶೇಖರ್ ಕೂಡ ಪೂಜೆ ಸಲ್ಲಿಸಿದರು.</p>.<p>ಮುಖಂಡರಾದ ಹನುಮಂತೇಗೌಡ, ಕೆ.ಟಿ. ಸುರೇಶ್, ಅಣ್ಣೂರು ವಿನು, ಶ್ರೀನಿವಾಸ್, ಯೋಗ, ಬಿ.ಟಿ.ಉಮೇಶ್, ಶ್ರೀಕಂಠೇಗೌಡ, ವಿಜಿ, ಟಿ.ಜೆ. ವೆಂಕಟೇಶ್, ನಂಜುಂಡೇಗೌಡ, ಮೋಹನ, ಚಂದು, ಮುತ್ತುರಾಜು, ನಂಜೇಗೌಡ, ಜಗದೀಶ್, ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಭಾರತೀನಗರ:</strong> ‘ಜಿಲ್ಲೆಯ ಜನರು ಆಶೀರ್ವಾದ ಮಾಡಿದ್ದರಿಂದಲೇ ತಂದೆ ಎಚ್.ಡಿ. ಕುಮಾರಸ್ವಾಮಿ ಅವರಿಗೆ ಕೇಂದ್ರ ಸರ್ಕಾರ ದೊಡ್ಡ ಜವಾಬ್ದಾರಿ ನೀಡಿದ್ದು, ಜಿಲ್ಲೆಗೆ ಅವರು ಬರಲು ಆಗದ ಸಮಯದಲ್ಲಿ ಆ ಜವಾಬ್ದಾರಿಯನ್ನು ನಾನು ನಿರ್ವಹಿಸುತ್ತೇನೆ’ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.</p>.<p>ಸಮೀಪದ ಬೊಮ್ಮನಹಳ್ಳಿಯಲ್ಲಿ ನಿರ್ಮಿಸಿರುವ ಲಕ್ಷ್ಮೀ ದೇವಿ ದೇವಾಲಯದ ಉದ್ಘಾಟನಾ ಕಾರ್ಯಕ್ರಮದಲ್ಲಿ ಪೂಜೆ ಸಲ್ಲಿಸಿದ ಬಳಿಕ ಅವರು ಮಾತನಾಡಿದರು.</p>.<p>‘ಕುಮಾರಸ್ವಾಮಿ ಅವರಿಗೆ ಬೃಹತ್ ಕೈಗಾರಿಕೆ ಮತ್ತು ಉಕ್ಕು ಖಾತೆಯನ್ನು ನೀಡಿರುವುದರಿಂದ ಬೆಂಗಳೂರಿಗೆ ವಾರಕ್ಕೆರಡು ದಿನ ಮಾತ್ರ ಬರುತ್ತಾರೆ. ಅವರು ಈ ದಿನ ಮಂತ್ರಿಯಾಗಲು ಮಂಡ್ಯ ಜಿಲ್ಲೆಯ ಜನರೇ ಕಾರಣ. ಹಾಗಾಗಿ ಜನರ ಕಷ್ಟ–ಸುಖ ಆಲಿಸುವ ಜವಾಬ್ದಾರಿ ನನ್ನದು. ಜಿಲ್ಲೆಯ ಯಾವುದೇ ಗ್ರಾಮದವರಾದರೂ ಸರಿ ನಮ್ಮ ಮುಖಂಡರ ಮೂಲಕ ನನಗೆ ವಿಚಾರ ತಿಳಿಸಿದರೆ ತಕ್ಷಣದಲ್ಲೇ ಸ್ಪಂದಿಸುತ್ತೇನೆ’ ಎಂದು ಭರವಸೆ ನೀಡಿದರು.</p>.<p>‘ಜಿಲ್ಲೆಯಲ್ಲಿ ಮದ್ದೂರು ತಾಲ್ಲೂಕಿನ ಜನತೆಯೇ ಹೆಚ್ಚು ಮತಗಳನ್ನು ನೀಡಿದ್ದು, ಎಲ್ಲಾ ತಾಲ್ಲೂಕುಗಳಲ್ಲಿಯೂ ಲೀಡ್ ಕೊಟ್ಟಿದ್ದೀರಿ. ನಿಮ್ಮ ಋಣ ಮರೆಯಲಾರದಂತಹದು. ಯಾವುದೇ ಸಮಾರಂಭವಾದರೂ ಕುಮಾರಸ್ವಾಮಿ ಅವರನ್ನು ಕಾಯದೆ ನನಗೆ ತಿಳಿಸಿದಲ್ಲಿ ನಾನು ಎಲ್ಲಾ ಕರ್ಯಕ್ರಮಗಳಲ್ಲೂ ಭಾಗವಹಿಸುತ್ತೇನೆ’ ಎಂದು ಹೇಳಿದರು.</p>.<p>ಗುರುವಾರ ರಾತ್ರಿಯಿಂದಲೇ ದೇವಾಲಯದಲ್ಲಿ ವಿವಿಧ ಹೋಮ, ಹವನ ಸೇರಿದಂತೆ ವಿಶೇಷ ಪೂಜೆಗಳು ನಡೆದವು. ಹೊನ್ನಾಯ್ಕನಹಳ್ಳಿಮಠದ ಬಸವ, ಕಾರ್ಕಹಳ್ಳಿ ಬಸವೇಶ್ವರಸ್ವಾಮಿ ಬಸವ, ಆಲಭುಜನಹಳ್ಳಿ ಬಸವೇಶ್ವರಸ್ವಾಮಿ ಬಸವ, ತಿಮ್ಮಪ್ಪನ ವಾಹನ, ಹರಿಗೆಗಳು ಸೇರಿದಂತೆ ಗ್ರಾಮದ ವಿವಿಧ ದೇವರುಗಳನ್ನು ಗ್ರಾಮದಲ್ಲಿ ಮೆರವಣಿಗೆ ಮಾಡಲಾಯಿತು.</p>.<p>ಮಾಜಿ ಶಾಸಕರಾದ ಡಿ.ಸಿ. ತಮ್ಮಣ್ಣ, ಕೆ.ಅನ್ನದಾನಿ, ಮುಖಂಡರಾದ ಮಾದನಾಯ್ಕನಹಳ್ಳಿ ರಾಜಣ್ಣ, ಕೂಳಗೆರೆ ಶೇಖರ್ ಕೂಡ ಪೂಜೆ ಸಲ್ಲಿಸಿದರು.</p>.<p>ಮುಖಂಡರಾದ ಹನುಮಂತೇಗೌಡ, ಕೆ.ಟಿ. ಸುರೇಶ್, ಅಣ್ಣೂರು ವಿನು, ಶ್ರೀನಿವಾಸ್, ಯೋಗ, ಬಿ.ಟಿ.ಉಮೇಶ್, ಶ್ರೀಕಂಠೇಗೌಡ, ವಿಜಿ, ಟಿ.ಜೆ. ವೆಂಕಟೇಶ್, ನಂಜುಂಡೇಗೌಡ, ಮೋಹನ, ಚಂದು, ಮುತ್ತುರಾಜು, ನಂಜೇಗೌಡ, ಜಗದೀಶ್, ಸ್ವಾಮಿ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>