<p><strong>ಮಂಡ್ಯ</strong>: ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವುದನ್ನು ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯೂ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್ ತಿಳಿಸಿದ್ದಾರೆ. </p>.<p>ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ಕೆಆರ್ಎಸ್ ಎಂಬುದು ಒಂದು ಅಣೆಕಟ್ಟೆಯಲ್ಲ, ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ’ ಎಂದಿದ್ದಾರೆ. </p>.<p>‘ನಮ್ಮ ಮಂಡ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಇಂತಹ ದುಂದು ವೆಚ್ಚಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಯೋಜನೆಯ ವಿರೋಧಕ್ಕೆ ನನ್ನ ಬೆಂಬಲ ಸೂಚಿಸುತ್ತಿದ್ದೇನೆ. ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕೃಷ್ಣರಾಜಸಾಗರ ಅಣೆಕಟ್ಟಿನ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ನಿರ್ಮಿಸುವುದನ್ನು ಮಂಡ್ಯದ ಜನತೆ ಹಾಗೂ ರೈತ ಸಂಘಗಳು ವಿರೋಧಿಸಿದ ಹೊರತಾಗಿಯೂ ಸರ್ಕಾರ ತನ್ನ ನಿರ್ಧಾರವನ್ನು ಹಿಂಪಡೆಯದಿರುವುದು ಖಂಡನೀಯ ಎಂದು ಮಾಜಿ ಸಂಸದೆ ಸುಮಲತಾ ಅಂಬರೀಷ್ ತಿಳಿಸಿದ್ದಾರೆ. </p>.<p>ಈ ಬಗ್ಗೆ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿರುವ ಅವರು, ‘ಕೆಆರ್ಎಸ್ ಎಂಬುದು ಒಂದು ಅಣೆಕಟ್ಟೆಯಲ್ಲ, ಅದು ನಮ್ಮ ಇತಿಹಾಸ, ಸಂಸ್ಕೃತಿ ಮತ್ತು ಮಂಡ್ಯದ ಜನತೆಯ ಜೀವನಾಡಿ. ಅದರ ಪಾವಿತ್ರ್ಯತೆ ಮತ್ತು ಪರಿಸರ ಸೂಕ್ಷ್ಮತೆಯನ್ನು ಕಾಪಾಡುವುದು ನಮ್ಮೆಲ್ಲರ ಆದ್ಯ ಕರ್ತವ್ಯ’ ಎಂದಿದ್ದಾರೆ. </p>.<p>‘ನಮ್ಮ ಮಂಡ್ಯದ ಅಭಿವೃದ್ಧಿಗೆ ಆದ್ಯತೆ ನೀಡುವ ಬದಲು ಇಂತಹ ದುಂದು ವೆಚ್ಚಕ್ಕೆ ಮುಂದಾಗಿರುವ ರಾಜ್ಯ ಕಾಂಗ್ರೆಸ್ ಸರ್ಕಾರದ ಈ ಯೋಜನೆಯ ವಿರೋಧಕ್ಕೆ ನನ್ನ ಬೆಂಬಲ ಸೂಚಿಸುತ್ತಿದ್ದೇನೆ. ಶತಮಾನಗಳ ಇತಿಹಾಸವಿರುವ ಕನ್ನಂಬಾಡಿ ಕಟ್ಟೆಯ ಅಸ್ತಿತ್ವಕ್ಕೆ ಧಕ್ಕೆ ತರುವ ಯಾವುದೇ ಯೋಜನೆಯನ್ನು ಜಾರಿಗೆ ತರಲು ಸ್ವಾಭಿಮಾನಿ ಮಂಡ್ಯದ ಜನತೆ ಅವಕಾಶ ಕೊಡಲಾರೆವು’ ಎಂದು ತಿಳಿಸಿದ್ದಾರೆ. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>