<p><strong>ಮಂಡ್ಯ: </strong>ಕೋವಿಡ್–19ನಿಂದ ಗುಣಮುಖರಾದ ಕೆ.ಆರ್.ಪೇಟೆ ಪಟ್ಟಣ ಠಾಣೆಯ ಹೆಡ್ಕಾನ್ಸ್ಟೆಬಲ್ ನಾಗರಾಜು ಅವರಿಗೆ ದಕ್ಷಿಣ ವಲಯದ ಪೊಲೀಸ್ ಮಹಾ ನಿರ್ದೇಶಕ ವಿಫುಲ್ ಕುಮಾರ್ ಶುಕ್ರವಾರ ಬೀಳ್ಕೊಡುಗೆ ನೀಡಿದರು.</p>.<p>ಕ್ವಾರಂಟೈನ್ ಕೇಂದ್ರಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಅವರಿಗೆ ಮೇ 21ರಂದು ಸೋಂಕು ದೃಢಪಟ್ಟಿತ್ತು. 14 ದಿನ ಚಿಕಿತ್ಸೆ ಪಡೆದ ಅವರಿಗೆ ಅಂತಿಮವಾಗಿ ಮೂರು ಬಾರಿ ಕೋವಿಡ್ ಪರೀಕ್ಷೆ ನಡೆಸಲಾಯಿತು. ಎಲ್ಲಾ ವರದಿಗಳು ನೆಗೆಟಿವ್ ಇದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.</p>.<p>ಫ್ರಂಟ್ಲೈನ್ ಕೊರೊನಾ ವಾರಿಯರ್ ಆಗಿದ್ದ ಅವರು ಶೀಘ್ರ ಗುಣಮುಖರಾಗಿದ್ದು ಪೊಲೀಸ್ ಬ್ಯಾಂಡ್ನೊಂದಿಗೆ ಗೌರವ ಸಲ್ಲಿಸಲಾಯಿತು.</p>.<p>‘ಆತ್ಮವಿಶ್ವಾಸ ಹಾಗೂ ಧೈರ್ಯದಿಂದ ಕೊರೊನಾ ಸೋಂಕಿನ ವಿರುದ್ಧ ಹೋರಾಟ ಮಾಡಬೇಕಿದೆ. ಇಂತಹ ಹೋರಾಟದಲ್ಲಿ ನಮ್ಮ ಸಿಬ್ಬಂದಿ ಗೆಲುವು ಕಂಡಿದ್ದು ಎಲ್ಲರಲ್ಲೂ ವಿಶ್ವಾಸ ಮೂಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದಿಸಲು ಬಂದಿದ್ದೇನೆ’ ಎಂದು ವಿಫುಲ್ಕುಮಾರ್ ಹೇಳಿದರು.</p>.<p><strong>ಸಿಡಿಪಿಒ ಗುಣಮುಖ: </strong>ಮಳವಳ್ಳಿ ನಿಷೇಧಿತ ವಲಯ ಈದ್ಗಾ ಬಡಾವಣೆಯಲ್ಲಿ ಕಾರ್ಯನಿರ್ವಾಹಕ ದಂಡಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಕುಮಾರ್ ಕೂಡ ಕೋವಿಡ್ ಗೆದ್ದಿದ್ದಾರೆ. ಅವರೊಂದಿಗೆ ಗುಣಮುಖರಾದ ಇತರ 12 ಮಂದಿಯನ್ನೂ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.</p>.<p>ಇಲ್ಲಿಯವರೆಗೆ ಜಿಲ್ಲೆಯಲ್ಲೆ 317 ಮಂದಿಗೆ ಕೋವಿಡ್ ಪತ್ತೆಯಾಗಿದ್ದು 147 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ: </strong>ಕೋವಿಡ್–19ನಿಂದ ಗುಣಮುಖರಾದ ಕೆ.ಆರ್.ಪೇಟೆ ಪಟ್ಟಣ ಠಾಣೆಯ ಹೆಡ್ಕಾನ್ಸ್ಟೆಬಲ್ ನಾಗರಾಜು ಅವರಿಗೆ ದಕ್ಷಿಣ ವಲಯದ ಪೊಲೀಸ್ ಮಹಾ ನಿರ್ದೇಶಕ ವಿಫುಲ್ ಕುಮಾರ್ ಶುಕ್ರವಾರ ಬೀಳ್ಕೊಡುಗೆ ನೀಡಿದರು.</p>.<p>ಕ್ವಾರಂಟೈನ್ ಕೇಂದ್ರಗಳಲ್ಲಿ ಭದ್ರತೆಗೆ ನಿಯೋಜನೆಗೊಂಡಿದ್ದ ಅವರಿಗೆ ಮೇ 21ರಂದು ಸೋಂಕು ದೃಢಪಟ್ಟಿತ್ತು. 14 ದಿನ ಚಿಕಿತ್ಸೆ ಪಡೆದ ಅವರಿಗೆ ಅಂತಿಮವಾಗಿ ಮೂರು ಬಾರಿ ಕೋವಿಡ್ ಪರೀಕ್ಷೆ ನಡೆಸಲಾಯಿತು. ಎಲ್ಲಾ ವರದಿಗಳು ನೆಗೆಟಿವ್ ಇದ್ದ ಹಿನ್ನೆಲೆಯಲ್ಲಿ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.</p>.<p>ಫ್ರಂಟ್ಲೈನ್ ಕೊರೊನಾ ವಾರಿಯರ್ ಆಗಿದ್ದ ಅವರು ಶೀಘ್ರ ಗುಣಮುಖರಾಗಿದ್ದು ಪೊಲೀಸ್ ಬ್ಯಾಂಡ್ನೊಂದಿಗೆ ಗೌರವ ಸಲ್ಲಿಸಲಾಯಿತು.</p>.<p>‘ಆತ್ಮವಿಶ್ವಾಸ ಹಾಗೂ ಧೈರ್ಯದಿಂದ ಕೊರೊನಾ ಸೋಂಕಿನ ವಿರುದ್ಧ ಹೋರಾಟ ಮಾಡಬೇಕಿದೆ. ಇಂತಹ ಹೋರಾಟದಲ್ಲಿ ನಮ್ಮ ಸಿಬ್ಬಂದಿ ಗೆಲುವು ಕಂಡಿದ್ದು ಎಲ್ಲರಲ್ಲೂ ವಿಶ್ವಾಸ ಮೂಡಿದೆ. ಈ ಹಿನ್ನೆಲೆಯಲ್ಲಿ ಅವರಿಗೆ ಅಭಿನಂದಿಸಲು ಬಂದಿದ್ದೇನೆ’ ಎಂದು ವಿಫುಲ್ಕುಮಾರ್ ಹೇಳಿದರು.</p>.<p><strong>ಸಿಡಿಪಿಒ ಗುಣಮುಖ: </strong>ಮಳವಳ್ಳಿ ನಿಷೇಧಿತ ವಲಯ ಈದ್ಗಾ ಬಡಾವಣೆಯಲ್ಲಿ ಕಾರ್ಯನಿರ್ವಾಹಕ ದಂಡಾಧಿಕಾರಿಯಾಗಿ ಕೆಲಸ ಮಾಡುತ್ತಿದ್ದ ಶಿಶು ಅಭಿವೃದ್ಧಿ ಯೋಜನಾಧಿಕಾರಿ (ಸಿಡಿಪಿಒ) ಕುಮಾರ್ ಕೂಡ ಕೋವಿಡ್ ಗೆದ್ದಿದ್ದಾರೆ. ಅವರೊಂದಿಗೆ ಗುಣಮುಖರಾದ ಇತರ 12 ಮಂದಿಯನ್ನೂ ಕೋವಿಡ್ ಆಸ್ಪತ್ರೆಯಿಂದ ಬಿಡುಗಡೆ ಮಾಡಲಾಯಿತು.</p>.<p>ಇಲ್ಲಿಯವರೆಗೆ ಜಿಲ್ಲೆಯಲ್ಲೆ 317 ಮಂದಿಗೆ ಕೋವಿಡ್ ಪತ್ತೆಯಾಗಿದ್ದು 147 ಮಂದಿ ಗುಣಮುಖರಾಗಿ ಮನೆಗೆ ತೆರಳಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>