<p><strong>ಮಂಡ್ಯ</strong>: ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಭಿಲೇಖಾಲಯದ ದಾಖಲೆಗಳನ್ನು ಅಕ್ರಮವಾಗಿ ತಿದ್ದಿ ಮತ್ತು ಸೃಷ್ಟಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರಾತಿ ಮಾಡಿದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್ (ಎ–9) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. </p><p>ತನಿಖಾಧಿಕಾರಿ ಡಿವೈಎಸ್ಪಿ ಚಲುವರಾಜು ನೇತೃತ್ವದ ತಂಡ ವಿಜಯಕುಮಾರ್ ಅವರನ್ನು ಚಾಮರಾಜನಗರ ಬಳಿ ಬಂಧಿಸಿದ್ದಾರೆ. ನಾಗಮಂಗಲದ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. </p><p>ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಶಿರಸ್ತೇದಾರರು ಸೇರಿದಂತೆ ಒಟ್ಟು 5 ಸರ್ಕಾರಿ ನೌಕರರನ್ನು ಬಂಧಿಸಲಾಗಿತ್ತು. ಈಗ ಬಂಧಿತರ ಸಂಖ್ಯೆ 6ಕ್ಕೇ ಏರಿದೆ. ತಲೆಮರೆಸಿಕೊಂಡಿರುವ ಉಳಿದ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. </p><p>ಹೆಚ್ಚಿನ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಜ.19ರಂದು ನ್ಯಾಯಾಧೀಶರನ್ನು ಕೇಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ನಾಗಮಂಗಲ ತಾಲ್ಲೂಕು ಕಚೇರಿಯಲ್ಲಿ ಅಭಿಲೇಖಾಲಯದ ದಾಖಲೆಗಳನ್ನು ಅಕ್ರಮವಾಗಿ ತಿದ್ದಿ ಮತ್ತು ಸೃಷ್ಟಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಮಂಜೂರಾತಿ ಮಾಡಿದ ಪ್ರಕರಣದಲ್ಲಿ ದ್ವಿತೀಯ ದರ್ಜೆ ಸಹಾಯಕ ವಿಜಯಕುಮಾರ್ (ಎ–9) ಅವರನ್ನು ಪೊಲೀಸರು ಭಾನುವಾರ ಬಂಧಿಸಿದ್ದಾರೆ. </p><p>ತನಿಖಾಧಿಕಾರಿ ಡಿವೈಎಸ್ಪಿ ಚಲುವರಾಜು ನೇತೃತ್ವದ ತಂಡ ವಿಜಯಕುಮಾರ್ ಅವರನ್ನು ಚಾಮರಾಜನಗರ ಬಳಿ ಬಂಧಿಸಿದ್ದಾರೆ. ನಾಗಮಂಗಲದ ಜೆಎಂಎಫ್ಸಿ ನ್ಯಾಯಾಲಯ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದೆ. </p><p>ಈ ಪ್ರಕರಣದಲ್ಲಿ ಈಗಾಗಲೇ ಇಬ್ಬರು ಶಿರಸ್ತೇದಾರರು ಸೇರಿದಂತೆ ಒಟ್ಟು 5 ಸರ್ಕಾರಿ ನೌಕರರನ್ನು ಬಂಧಿಸಲಾಗಿತ್ತು. ಈಗ ಬಂಧಿತರ ಸಂಖ್ಯೆ 6ಕ್ಕೇ ಏರಿದೆ. ತಲೆಮರೆಸಿಕೊಂಡಿರುವ ಉಳಿದ ನಾಲ್ವರು ಆರೋಪಿಗಳ ಬಂಧನಕ್ಕೆ ಪೊಲೀಸರು ಶೋಧ ಕಾರ್ಯ ಮುಂದುವರಿಸಿದ್ದಾರೆ. </p><p>ಹೆಚ್ಚಿನ ಮಾಹಿತಿ ಕಲೆ ಹಾಕುವ ಉದ್ದೇಶದಿಂದ ಆರೋಪಿಗಳನ್ನು ಪೊಲೀಸ್ ಕಸ್ಟಡಿಗೆ ನೀಡುವಂತೆ ಜ.19ರಂದು ನ್ಯಾಯಾಧೀಶರನ್ನು ಕೇಳುವ ಸಾಧ್ಯತೆ ಇದೆ ಎಂಬ ಮಾಹಿತಿ ಲಭ್ಯವಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>