ಗಣಿ ಅಕ್ರಮ ತಡೆಗೆ ಹೊಸ ಗಣಿ ನೀತಿ ರೂಪಿಸಲಾಗುವುದು ಎಂದು ಸಚಿವ ನಿರಾಣಿ ತಿಳಿಸಿದರು. ಅಭಿವೃದ್ಧಿ ಕೆಲಸ ನಡೆಯಲು ಗಣಿಗಾರಿಕೆ ಅನಿವಾರ್ಯ. ಆದರೆ, ಕಾನೂನು ಬದ್ಧವಾಗಿ ನಡೆಯುವಂತೆ ನಿಯಮ ಜಾರಿ ಮಾಡುತ್ತೇವೆ. ನಿಯಮ ಉಲ್ಲಂಘಿಸಿ ಕಲ್ಲು ಗಣಿಗಾರಿಕೆ ನಡೆಸುತ್ತಿರುವವರು ಪ್ರಭಾವಿಗಳಾದರೂ ಕಠಿಣ ಕ್ರಮ ಕೈಗೊಳ್ಳಲಾಗುವುದು. ಚೆಕ್ಪೋಸ್ಟ್ಗಳಲ್ಲಿ ಕೂಡ ಮಾಹಿತಿ ಪಡೆಯಲಾಗುತ್ತದೆ. ಕಲ್ಲು ಗಣಿಗಾರಿಕೆಗಾಗಿ ಅರಣ್ಯ, ಕೆರೆ, ಕಟ್ಟೆಗಳ ನಾಶ ಆಗದಂತೆ ನಿಗಾ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸುತ್ತೇನೆ ಎಂದು ಹೇಳಿದರು.