ಪಟ್ಟಣದ ಅರಣ್ಯ ಇಲಾಖೆ ಕಚೇರಿಗೆ ಸೊಮವಾರ ತೆರಳಿ ಅಧಿಕಾರಿಗಳನ್ನು ಪ್ರಶ್ನಿಸಿದರು. ಕಾಳೇನಹಳ್ಳಿ, ಟಿ.ಎಂ. ಹೊಸೂರು ಕಡೆಗಳಲ್ಲಿ ಅರಣ್ಯ ಭೂಮಿಯಲ್ಲಿ ಕಲ್ಲು ಗಣಿಗಾರಿಕೆ ಅಡೆ ತಡೆಯಿಲ್ಲದೆ ನಡೆಯುತ್ತಿದೆ. ಅರಣ್ಯ ಇಲಾಖೆ ಅಧಿಕಾರಿಗಳು ಮತ್ತು ಸಿಬ್ಬಂದಿಗೆ ವಿಷಯ ಗೊತ್ತಿದ್ದರೂ ಕ್ರಮ ಕೈಗೊಳ್ಳಲು ಮೀನಾ ಮೇಷ ಎಣಿಸುತ್ತಿದ್ದಾರೆ ಎಂದು ರೈತ ಸಂಘದ ಗೌರವಾಧ್ಯಕ್ಷ ಬಿ.ಎಸ್. ರಮೇಶ್ ದೂರಿದರು.