ಬೇಬಿ ಬೆಟ್ಟದಲ್ಲಿ ನಡೆಯುತ್ತಿರುವ ಅಕ್ರಮ ಗಣಿಗಾರಿಕೆಯನ್ನು ಕೂಡಲೇ ನಿಲ್ಲಿಸಬೇಕು. ಜಿಲ್ಲಾಡಳಿತದ ನಿಷೇಧ ಕಟ್ಟುನಿಟ್ಟಾಗಿ ಅನುಷ್ಠಾನಗೊಳಿಸಬೇಕು ಎಂದು ಬೇಬಿಬೆಟ್ಟ ಉಳಿಸಿ ಹೋರಾಟ ಸಮಿತಿಯ ನಟರಾಜು, ಲೋಕೇಶ್ ಮೂರ್ತಿ, ಕುಮಾರ್, ಬಿ.ಎಂ.ಮಂಜುನಾಥ್ ಅವರು ಸೋಮವಾರ ಪಾಂಡವಪುರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ.ನಾರಾಯಣಗೌಡ ಅವರಿಗೆ ಮನವಿ ಸಲ್ಲಿಸಿದರು.