‘ಶಾಲೆಯಲ್ಲಿ ಸುಮಾರು 15 ವಿದ್ಯಾರ್ಥಿಗಳು ಇದ್ದು, ಅವರು ಸ್ವಾತಂತ್ರ್ಯದ ಸಂಭ್ರಮದಿಂದ ವಂಚಿತರಾ ಗಿದ್ದಾರೆ. ಶಾಲೆಯಲ್ಲಿ ಸ್ವಾತಂತ್ರ್ಯದ ಆಚರಣೆ ಬಗ್ಗೆ ಎಸ್ಡಿಎಂಸಿ ಆಡಳಿತ ಮಂಡಳಿ ಗಮನಕ್ಕೂ ತಿಳಿಸದೆ ಮಕ್ಕಳಿಗೆ ರಜೆ ನೀಡಿರುವ ಶಿಕ್ಷಕಿ ವಿರುದ್ಧ ಕ್ರಮ ಕೈಗೊಳ್ಳಬೇಕು. ಶಾಲೆಯಲ್ಲಿ ಬಾವುಟ ಇಲ್ಲದೆ ಇರುವುದನ್ನು ಗಮಿನಿಸಿ ಶಾಲೆಯ ಕಟ್ಟಡದ ಮೇಲೆ ನಾವೇ ಬಾವುಟ ಹಾರಿಸಿದ್ದೇವೆ. ಈ ಬಗ್ಗೆ ಶಾಸಕ ಸಿ.ಎಸ್.ಪುಟ್ಟರಾಜು, ಬಿಇಒ ಲೋಕೇಶ್ ಅವರಿಗೆ ದೂರು ನೀಡಿದ್ದೇವೆ. ಶೀಘ್ರವೇ ಕ್ರಮ ಕೈಗೊಳ್ಳಬೇಕೆಂದು ಗ್ರಾಮದ ಮುಖಂಡರಾದ ಸಣ್ಣೇಗೌಡ, ಎಸ್.ಸಿಂಗ್ರೀಗೌಡ, ಪುಟ್ಟರಾಜು, ಪುಟ್ಟಸ್ವಾಮಿಗೌಡ, ಚೆಲುವರಾಜು, ಹರೀಶ್, ಮೋಹನ್ ಕುಮಾರ್, ಲೋಕೇಶ್, ಸುರೇಶ್, ಹರೀಶ್ ಎಸ್., ವರುಣ, ರಮೇಶ್, ಕುಮಾರ್ ಎನ್.ಪಿ, ಉದಯ ಆಗ್ರಹಿಸಿದರು.