ಗುರುವಾರ , ಮಾರ್ಚ್ 30, 2023
23 °C
‘ರಾಷ್ಟ್ರೀಯ ಏಕತಾ ದಿವಸ್‌’ ಕಾರ್ಯಕ್ರಮ

ಭಾರತ ಒಗ್ಗೂಡಿಸಿದ ಪಟೇಲ್‌: ಪುಷ್ಪ ನಮನ ಸಲ್ಲಿಸಿದ ಸಿಇಒ ದಿವ್ಯಾಪ್ರಭು

ಪ್ರಜಾವಾಣಿ ವಾರ್ತೆ Updated:

ಅಕ್ಷರ ಗಾತ್ರ : | |

Prajavani

ಮಂಡ್ಯ: ಹರಿದು ಹಂಚಿ ಹೋಗಿದ್ದ ಭಾರತವನ್ನು ಒಗ್ಗೂಡಿಸಿದ ಹಾಗೂ ರಾಷ್ಟ್ರದ ಏಕತೆಗೆ ಶ್ರಮಿಸಿದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು ಇಂದಿಗೂ ಪ್ರಸ್ತುತವಾಗಿ ನಿಲ್ಲುತ್ತಾರೆ ಎಂದು ಜಿಲ್ಲಾ ಪಂಚಾಯಿತಿ ಸಿಇಒ ದಿವ್ಯಾಪ್ರಭು ಹೇಳಿದರು.

ನಗರದ ನೆಹರೂ ಯುವ ಕೇಂದ್ರದ ಸಭಾಂಗಣದಲ್ಲಿ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರ ಜನ್ಮದಿನದ ಅಂಗವಾಗಿ ಭಾನುವಾರ ಆಯೋಜಿಸಿದ್ದ ‘ರಾಷ್ಟ್ರೀಯ ಏಕತಾ ದಿವಸ್‌’ ಕಾರ್ಯಕ್ರಮದಲ್ಲಿ ಪಟೇಲ್‌ ಭಾವ ಚಿತ್ರಕ್ಕೆ ಪುಷ್ಪಾರ್ಚನೆ ಮಾಡಿ ಅವರು ಮಾತನಾಡಿದರು.

ಉಕ್ಕಿನ ಮನುಷ್ಯ ಎಂದೇ ಖ್ಯಾತರಾ ಗಿದ್ದ ಸರ್ದಾರ್ ವಲ್ಲಭಭಾಯಿ ಪಟೇಲ್ ಅವರು, ದೇಶಿಯ ಸಂಸ್ಥಾನಗಳಾಗಿ ಹರಿದು-ಹಂಚಿ ಹೋಗಿದ್ದ ಭಾರತವನ್ನು ಒಗ್ಗೂಡಿಸಿದ ಮಹನೀಯರು, ಜೊತೆಗೆ ರಾಷ್ಟ್ರದ ಏಕತೆಗೆ ಶ್ರಮಿಸಿದ ಮೇರುವ್ಯಕ್ತಿ ಯಾಗಿ ಕಾಣುತ್ತಾರೆ ಎಂದು
ಅವರು ತಿಳಿಸಿದರು.

‘ರಾಷ್ಟ್ರದ ಆಂತರಿಕ ಭದ್ರತೆಯನ್ನು ಖಾತ್ರಿ ಪಡಿಸಲು ನಾನು ನನ್ನದೇ ಆದ ಕೊಡುಗೆಯನ್ನು ನೀಡುತ್ತೇನೆ ಎಂದು ಒಮ್ಮನಸ್ಸಿನಿಂದ ಪ್ರತಿಜ್ಞೆ ಮಾಡುತ್ತಿದ್ದೇನೆ’ ಎಂಬ ರಾಷ್ಟ್ರೀಯ ಏಕತಾ ದಿವಸದ ಪ್ರತಿಜ್ಞೆಯನ್ನು ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಪ್ರಕಾಶ್ ಬೊಧಿಸಿದರು.

ಸಂತೆಕಸಲಗೆರೆ ಬಸವರಾಜು ಕಲಾತಂಡದವರು ದೇಶಭಕ್ತಿ ಗೀತೆಗಳ ಗಾಯನ ಪ್ರಸ್ತುತ ಪಡಿಸಿದರು.

ಜಿಲ್ಲಾ ಯುವ ಸಮನ್ವಯಾಧಿಕಾರಿ ಅನಂತಪ್ಪ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಉಪನಿರ್ದೇಶಕ ರಾಜುಮೂರ್ತಿ, ನೆಹರೂ ಯುವ ಕೇಂದ್ರದ ಲೆಕ್ಕಾಧಿಕಾರಿ ಎಚ್.ಎಂ.ಬಸವರಾಜು, ಸಂಘಟಕಿ ಬಿ.ಎಸ್‌.ಅನುಪಮಾ ಭಾಗವಹಿಸಿದ್ದರು.

ತಾಜಾ ಮಾಹಿತಿ ಪಡೆಯಲು ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ

ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್‌ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್

ಪ್ರಜಾವಾಣಿ ಫೇಸ್‌ಬುಕ್ ಪುಟವನ್ನುಫಾಲೋ ಮಾಡಿ.

ಈ ವಿಭಾಗದಿಂದ ಇನ್ನಷ್ಟು