<p><strong>ಮಂಡ್ಯ:</strong> ‘ಜಾತಿ, ಮತ, ಪಂಥ, ಧರ್ಮ ಎಲ್ಲವನ್ನೂ ಮೀರಿದ ಹಾಗೆ ಕರಾವಳಿ ವೈಭವಪೂರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಅವು ಇತರರಿಗೆ ಪ್ರೇರೇಪಿಸುವಂತಿವೆ’ ಎಂದು ಸಾಹಿತಿ ಎಸ್.ಶ್ರೀನಿವಾಸ್ ಶೆಟ್ಟಿ ಅಭಿಪ್ರಾಯಪಟ್ಟರು.</p>.<p>ಅಖಿಲ ಕರ್ನಾಟಕ ಕರಾವಳಿ ಸಂಸ್ಕೃತಿಕ ಒಕ್ಕೂಟದ ವತಿಯಿಂದ ನಗರದ ಜಿಲ್ಲಾ ಬ್ರಾಹ್ಮಣ ಸಭಾಂಗಣದಲ್ಲಿ ಭಾನುವಾರ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕರಾವಳಿ ಸಾಂಸ್ಕೃತಿಕ ಒಕ್ಕೂಟದಿಂದ ಮಾಡುತ್ತಿರುವ ಕಾರ್ಯಕ್ರಮಗಳು ಇಲ್ಲಿವರೆವಿಗೂ ವೈಭವಪೂರಿತವಾಗಿ ನಡೆದುಕೊಂಡು ಬಂದಿವೆ. ಅದನ್ನು ಮತ್ತಷ್ಟು ಗಮನ ಸೆಳೆಯುವಂತೆ ಮಾಡಲು ಜಿಲ್ಲೆಯಲ್ಲಿರುವ ಎಲ್ಲಾ ಕರಾವಳಿ ಭಾಗದವರು ಸಹಕರಿಸಿ ಸೇವಾ ಮನೋಭಾವದ ಕಾರ್ಯಕ್ರಮ ಆಯೋಜಿಸಲು ನೆರವಾಗೋಣ’ ಎಂದು ಸಲಹೆ ನೀಡಿದರು.</p>.<p>ಒಕ್ಕೂಟದ ಅಧ್ಯಕ್ಷ ಟಿ.ಸದಾಶಿವಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಕರಾವಳಿಯ ಹಿರಿಯ ನಾಗರಿಕರು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು. ನಂತರ ಕಾರಾವಳಿ ಭಾಗ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಒಕ್ಕೂಟದ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ, ಖಜಾಂಚಿ ಗೋಪಾಲಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಜಾತಿ, ಮತ, ಪಂಥ, ಧರ್ಮ ಎಲ್ಲವನ್ನೂ ಮೀರಿದ ಹಾಗೆ ಕರಾವಳಿ ವೈಭವಪೂರಿತ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯುತ್ತಿದ್ದು, ಅವು ಇತರರಿಗೆ ಪ್ರೇರೇಪಿಸುವಂತಿವೆ’ ಎಂದು ಸಾಹಿತಿ ಎಸ್.ಶ್ರೀನಿವಾಸ್ ಶೆಟ್ಟಿ ಅಭಿಪ್ರಾಯಪಟ್ಟರು.</p>.<p>ಅಖಿಲ ಕರ್ನಾಟಕ ಕರಾವಳಿ ಸಂಸ್ಕೃತಿಕ ಒಕ್ಕೂಟದ ವತಿಯಿಂದ ನಗರದ ಜಿಲ್ಲಾ ಬ್ರಾಹ್ಮಣ ಸಭಾಂಗಣದಲ್ಲಿ ಭಾನುವಾರ ನಡೆದ ಸಾಧಕರಿಗೆ ಸನ್ಮಾನ ಕಾರ್ಯಕ್ರಮವನ್ನು ಉದ್ಘಾಟಿಸಿ ಅವರು ಮಾತನಾಡಿದರು.</p>.<p>‘ಕರಾವಳಿ ಸಾಂಸ್ಕೃತಿಕ ಒಕ್ಕೂಟದಿಂದ ಮಾಡುತ್ತಿರುವ ಕಾರ್ಯಕ್ರಮಗಳು ಇಲ್ಲಿವರೆವಿಗೂ ವೈಭವಪೂರಿತವಾಗಿ ನಡೆದುಕೊಂಡು ಬಂದಿವೆ. ಅದನ್ನು ಮತ್ತಷ್ಟು ಗಮನ ಸೆಳೆಯುವಂತೆ ಮಾಡಲು ಜಿಲ್ಲೆಯಲ್ಲಿರುವ ಎಲ್ಲಾ ಕರಾವಳಿ ಭಾಗದವರು ಸಹಕರಿಸಿ ಸೇವಾ ಮನೋಭಾವದ ಕಾರ್ಯಕ್ರಮ ಆಯೋಜಿಸಲು ನೆರವಾಗೋಣ’ ಎಂದು ಸಲಹೆ ನೀಡಿದರು.</p>.<p>ಒಕ್ಕೂಟದ ಅಧ್ಯಕ್ಷ ಟಿ.ಸದಾಶಿವಭಟ್ ಅವರು ಅಧ್ಯಕ್ಷತೆ ವಹಿಸಿದ್ದರು. ಕರಾವಳಿಯ ಹಿರಿಯ ನಾಗರಿಕರು ಹಾಗೂ ಸಾಧಕರನ್ನು ಸನ್ಮಾನಿಸಲಾಯಿತು. ನಂತರ ಕಾರಾವಳಿ ಭಾಗ ಬಿಂಬಿಸುವ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.</p>.<p>ಒಕ್ಕೂಟದ ಉಪಾಧ್ಯಕ್ಷ ಸುಧಾಕರ್ ಶೆಟ್ಟಿ, ಪ್ರಧಾನ ಕಾರ್ಯದರ್ಶಿ ಸಂಪತ್ ಕುಮಾರ್ ಶೆಟ್ಟಿ, ಜಂಟಿ ಕಾರ್ಯದರ್ಶಿ ಪ್ರಸನ್ನ ಶೆಟ್ಟಿ, ಖಜಾಂಚಿ ಗೋಪಾಲಕೃಷ್ಣ ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>