<p><strong>ಮಂಡ್ಯ</strong>: ಬಾಹ್ಯಾಕಾಶ ಕ್ಷೇತ್ರದಲ್ಲಿ ನಡೆದಿರುವ ಸಂಶೋಧನೆಗಳ ಫಲವಾಗಿ ಕೃಷಿ, ಮೀನುಗಾರಿಕೆ, ರಕ್ಷಣೆ ಹಾಗೂ ಹವಾಮಾನ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಉಂಟಾಗಿವೆ ಎಂದು ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ತಿಳಿಸಿದರು. </p>.<p>ತಾಲ್ಲೂಕಿನ ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗುರುವಾರ ಬಿಇ ಮತ್ತು ಬಿಸಿಎ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ವಿಕ್ರಂ ಸಾರಾಭಾಯಿ ಅವರು ಅಮೆರಿಕದ ಉಪಗ್ರಹವನ್ನು ಉಪಯೋಗಿಸಿಕೊಂಡು ಬಾಹ್ಯಾಕಾಶ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ಭಾರತದ 250 ಹಳ್ಳಿಗಳಿಗೆ ಪ್ರಸಾರ ಮಾಡಲು ಸಫಲರಾದ ಬಗ್ಗೆ ಮತ್ತು ಆಕಾಶವಾಣಿಯಿಂದ ಈಗಿನ ಮೊಬೈಲ್ ತಂತ್ರಜ್ಞಾನದವರೆಗೆ ಆಗಿರುವ ಆವಿಷ್ಕಾರಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಚಂದ್ರಗ್ರಹ ಮತ್ತು ಮಂಗಳ ಗ್ರಹಗಳಿಗೆ ಉಪಗ್ರಹಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದ ಬಗ್ಗೆ ವಿವರಿಸಿದರು. ಆದಿಮಾನವನ ಹಂತದಿಂದ ಇಂದಿನ ಕೃತಕ ಬುದ್ಧಿಮತ್ತೆಯ ಹೊರಗಿನ ತಂತ್ರಜ್ಞಾನದ ಆವಿಷ್ಕಾರ ಮತ್ತು ಬಳಕೆಗೆ ಬಂದ ರೀತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. </p>.<p>ಕಾವೇರಿ ಎಜುಕೇಶನ್ ಅಂಡ್ ರಿಸರ್ಚ್ ಟ್ರಸ್ಟ್ ಅಧ್ಯಕ್ಷ ಬಿ.ಜಿ ಪರಸಂಗಮೇಶ್ವರ ಅಧ್ಯಕ್ಷತೆ ವಹಿಸಿದ್ದರು. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಿಬ್ಬಂದಿ ನಿರ್ವಹಣೆ ವಿಭಾಗದ ಮುಖ್ಯಸ್ಥ ಶ್ರೀನಿವಾಸ ರಾಮನುಜಮ್ ಉಪನ್ಯಾಸ ನೀಡಿದರು.</p>.<p>ಸಿ.ಈ.ಆರ್.ಟಿ. ಕಾರ್ಯದರ್ಶಿ ಸಿ.ಜೆ. ಗಂಗಾಧರಗೌಡರವರು ಮಾತನಾಡಿದರು. ಉಪಾಧ್ಯಕ್ಷ ತಮ್ಮಣ್ಣ ಬಿ.ಎಂ ಮತ್ತು ಸಿಐಟಿ ಪ್ರಾಂಶುಪಾಲ ಶ್ರೀಕಂಠಪ್ಪ ಎ.ಎಸ್. ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಬಾಹ್ಯಾಕಾಶ ಕ್ಷೇತ್ರದಲ್ಲಿ ನಡೆದಿರುವ ಸಂಶೋಧನೆಗಳ ಫಲವಾಗಿ ಕೃಷಿ, ಮೀನುಗಾರಿಕೆ, ರಕ್ಷಣೆ ಹಾಗೂ ಹವಾಮಾನ ಕ್ಷೇತ್ರಗಳಲ್ಲಿ ಗಮನಾರ್ಹ ಬದಲಾವಣೆಗಳು ಉಂಟಾಗಿವೆ ಎಂದು ಇಸ್ರೊ ಮಾಜಿ ಅಧ್ಯಕ್ಷ ಎ.ಎಸ್. ಕಿರಣ್ ಕುಮಾರ್ ತಿಳಿಸಿದರು. </p>.<p>ತಾಲ್ಲೂಕಿನ ಕಾವೇರಿ ಇನ್ಸ್ಟಿಟ್ಯೂಟ್ ಆಫ್ ಎಂಜಿನಿಯರಿಂಗ್ ಕಾಲೇಜಿನಲ್ಲಿ ಗುರುವಾರ ಬಿಇ ಮತ್ತು ಬಿಸಿಎ ವಿದ್ಯಾರ್ಥಿಗಳಿಗಾಗಿ ಹಮ್ಮಿಕೊಂಡಿದ್ದ ಓರಿಯೆಂಟೇಶನ್ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. </p>.<p>ವಿಕ್ರಂ ಸಾರಾಭಾಯಿ ಅವರು ಅಮೆರಿಕದ ಉಪಗ್ರಹವನ್ನು ಉಪಯೋಗಿಸಿಕೊಂಡು ಬಾಹ್ಯಾಕಾಶ ತಂತ್ರಜ್ಞಾನವನ್ನು ಅಭಿವೃದ್ಧಿಪಡಿಸಿ ಭಾರತದ 250 ಹಳ್ಳಿಗಳಿಗೆ ಪ್ರಸಾರ ಮಾಡಲು ಸಫಲರಾದ ಬಗ್ಗೆ ಮತ್ತು ಆಕಾಶವಾಣಿಯಿಂದ ಈಗಿನ ಮೊಬೈಲ್ ತಂತ್ರಜ್ಞಾನದವರೆಗೆ ಆಗಿರುವ ಆವಿಷ್ಕಾರಗಳ ಬಗ್ಗೆ ಮಾಹಿತಿ ನೀಡಿದರು.</p>.<p>ಚಂದ್ರಗ್ರಹ ಮತ್ತು ಮಂಗಳ ಗ್ರಹಗಳಿಗೆ ಉಪಗ್ರಹಗಳನ್ನು ಯಶಸ್ವಿಯಾಗಿ ಅಭಿವೃದ್ಧಿಪಡಿಸಿದ ಬಗ್ಗೆ ವಿವರಿಸಿದರು. ಆದಿಮಾನವನ ಹಂತದಿಂದ ಇಂದಿನ ಕೃತಕ ಬುದ್ಧಿಮತ್ತೆಯ ಹೊರಗಿನ ತಂತ್ರಜ್ಞಾನದ ಆವಿಷ್ಕಾರ ಮತ್ತು ಬಳಕೆಗೆ ಬಂದ ರೀತಿಯನ್ನು ವಿದ್ಯಾರ್ಥಿಗಳಿಗೆ ತಿಳಿಸಿದರು. </p>.<p>ಕಾವೇರಿ ಎಜುಕೇಶನ್ ಅಂಡ್ ರಿಸರ್ಚ್ ಟ್ರಸ್ಟ್ ಅಧ್ಯಕ್ಷ ಬಿ.ಜಿ ಪರಸಂಗಮೇಶ್ವರ ಅಧ್ಯಕ್ಷತೆ ವಹಿಸಿದ್ದರು. ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ ಸಿಬ್ಬಂದಿ ನಿರ್ವಹಣೆ ವಿಭಾಗದ ಮುಖ್ಯಸ್ಥ ಶ್ರೀನಿವಾಸ ರಾಮನುಜಮ್ ಉಪನ್ಯಾಸ ನೀಡಿದರು.</p>.<p>ಸಿ.ಈ.ಆರ್.ಟಿ. ಕಾರ್ಯದರ್ಶಿ ಸಿ.ಜೆ. ಗಂಗಾಧರಗೌಡರವರು ಮಾತನಾಡಿದರು. ಉಪಾಧ್ಯಕ್ಷ ತಮ್ಮಣ್ಣ ಬಿ.ಎಂ ಮತ್ತು ಸಿಐಟಿ ಪ್ರಾಂಶುಪಾಲ ಶ್ರೀಕಂಠಪ್ಪ ಎ.ಎಸ್. ಪಾಲ್ಗೊಂಡಿದ್ದರು. </p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>