ಫೆ.19 ಹಾಗೂ 20ರಂದು ಜ್ಞಾನ–ವಿಜ್ಞಾನ–ತಂತ್ರಜ್ಞಾನ ಮೇಳ ಹಾಗೂ ನಿರ್ಮಲಾನಂದನಾಥ ಸ್ವಾಮೀಜಿ ಅವರ 11ನೇ ವಾರ್ಷಿಕ ಪಟ್ಟಾಭಿಷೇಕ ಮಹೋತ್ಸವ ನಡೆಯಲಿದೆ. ಫೆ.19ರಂದು ವಸ್ತುಪ್ರದರ್ಶನ ಹಾಗೂ ವಿಶೇಷ ಉಪನ್ಯಾಸ ಆಯೋಜಿಸಲಾಗಿದ್ದು, ಹೃದ್ರೋಗ ತಜ್ಞ ಡಾ.ಸಿ.ಎನ್.ಮಂಜುನಾಥ್, ಐಐಎಸ್ಸಿಯ ಕೆ.ಜೆ.ವಿನೋಯ್ ಉದ್ಘಾಟಿಸುವರು. ಮುಖ್ಯ ಅತಿಥಿಗಳಾಗಿ ಉನ್ನತ ಶಿಕ್ಷಣ ಸಚಿವ ಎಂ.ಸಿ.ಸುಧಾಕರ್, ಜೆಡಿಎಸ್ ನಾಯಕರಾದ ಸಿ.ಎಸ್.ಪುಟ್ಟರಾಜು, ಕೆ.ಸುರೇಶ್ಗೌಡ ಪಾಲ್ಗೊಳ್ಳುವರು.