ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ಮೇಲಿನವರು ಕೈಗೊಂಡ ತೀರ್ಮಾನದಿಂದ ಪಕ್ಷಕ್ಕೆ ಒಳ್ಳೆಯದಾಗುತ್ತದೆ ಎಂದು ನಾನು ನಂಬಿದ್ದೇನೆ. ಅವರಿಗೆ ನಮಗಿಂತಲೂ ಹೆಚ್ಚಿನ ತಿಳಿವಳಿಕೆ ಇದೆ. ಮೂವರಿಗೆ ಡಿಸಿಎಂ ಸ್ಥಾನ ನೀಡಿರುವುದನ್ನು ಸಂಸದ ವಿ.ಶ್ರೀನಿವಾಸ್ ಪ್ರಸಾದ್ ವಿರೋಧಿಸಿದ್ದರೆ ಅದು ಅವರ ವೈಯಕ್ತಿಕ ಅಭಿಪ್ರಾಯ. ಒಬ್ಬೊಬ್ಬರದು ಒಂದೊಂದು ಅಭಿಪ್ರಾಯವಿರುತ್ತದೆ’ ಎಂದು ಹೇಳಿದರು.