ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ನಿರಾಪೇಕ್ಷಣ ಪತ್ರ, ಘಟಕಗಳ ವಿಸ್ತರಣೆಗೆ ಬಹಳ ಬೇಗ ಅನುಮತಿ ದೊರೆಯಲಿವೆ. ಕಚೇರಿಗಳಿಗೆ ಅಲೆಯುವ ಅವಶ್ಯಕತೆ ಇಲ್ಲ. ಸ್ವಯಂ ಘೋಷಣೆಯೊಂದಿಗೆ ಅಫಿಡವಿಟ್ ಸಲ್ಲಿಸಿ ಕಾಮಗಾರಿ ಆರಂಭಿಸಬಹುದು. ಕೈಗಾರಿಕಾ ನಿಯಮಗಳಿಗೆ ತಿದ್ದುಪಡಿ ತರಲಾಗಿದ್ದು ಹೊಸ ಬದಲಾವಣೆಗಳನ್ನು ಅರಿತು ಸದುಪಯೋಗ ಮಾಡಿಕೊಳ್ಳಬೇಕು’ ಎಂದರು.