ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸಿರುವ ಮಾತೃಪೂರ್ಣ ಯೋಜನೆಯಲ್ಲೂ ಗರ್ಭಿಣಿಯರಿಗೆ ರಾಸಾಯನಿಕ ಮುಕ್ತ ಬೆಲ್ಲ ವಿತರಣೆ ಮಾಡಬೇಕು. ಆರೋಗ್ಯದ ದೃಷ್ಟಿಯಿಂದ ಬೆಲ್ಲಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯ ಆಲೆಮನೆಗಳಲ್ಲಿ ರಾಸಾಯನಿಕಗಳ ಬಳಕೆ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.