<p><strong>ಮಂಡ್ಯ:</strong> ಪಡಿತರ ಚೀಟಿದಾರರಿಗೆ ಸರ್ಕಾರ ಪ್ರತಿ ತಿಂಗಳು ತಲಾ ಒಂದು ಕೆ.ಜಿ ಬೆಲ್ಲ ವಿತರಣೆ ಮಾಡಬೇಕು. ಆ ಮೂಲಕ ನಷ್ಟದಲ್ಲಿರುವ ಆಲೆಮನೆ ಉದ್ಯಮಕ್ಕೆ ರಕ್ಷಣೆ ನೀಡಬೇಕು ಎಂದು ಆಲೆಮನೆ ಮಾಲೀಕರ ಸಂಘದ ಸದಸ್ಯರು ಮಂಗಳವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರನ್ನು ಒತ್ತಾಯಿಸಿದರು.</p>.<p>ಕೇಂದ್ರ ಸರ್ಕಾರದ ‘ಆತ್ಮನಿರ್ಭರ ಭಾರತ’ ಯೋಜನೆಯಡಿ ಮಂಡ್ಯದ ಬೆಲ್ಲ ತಯಾರಿಕಾ ಘಟಕಗಳಿಗೆ (ಆಲೆಮನೆ) ಪುನಶ್ಚೇತನ ನೀಡುವ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಘದ ಸದಸ್ಯರು ಮನವಿ ಸಲ್ಲಿಸಿದರು.</p>.<p>ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸಿರುವ ಮಾತೃಪೂರ್ಣ ಯೋಜನೆಯಲ್ಲೂ ಗರ್ಭಿಣಿಯರಿಗೆ ರಾಸಾಯನಿಕ ಮುಕ್ತ ಬೆಲ್ಲ ವಿತರಣೆ ಮಾಡಬೇಕು. ಆರೋಗ್ಯದ ದೃಷ್ಟಿಯಿಂದ ಬೆಲ್ಲಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯ ಆಲೆಮನೆಗಳಲ್ಲಿ ರಾಸಾಯನಿಕಗಳ ಬಳಕೆ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ ‘ಆತ್ಮನಿರ್ಭರ ಭಾರತ ಯೋಜನೆಯಡಿ ಬೆಲ್ಲ ಹಾಗೂ ಅದರ ಮೌಲ್ಯವರ್ಧಿತ ಉತ್ಪನ್ನಗಳ ಉದ್ಯಮಕ್ಕೆ ಪುನಶ್ಚೇತನ ನೀಡಲಾಗುವುದು. ಬೆಲ್ಲಕ್ಕೆ ಬ್ರ್ಯಾಂಡ್ ರೂಪ ನೀಡಿ ಅಂತರರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸಲಾಗುವುದು. ಇದರಿಂದ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ’ ಎಂದರು.</p>.<p>‘ಆಲೆಮನೆ ಮಾಲೀಕರು ಎದುರಿಸುತ್ತಿರುವ ಸಮಸ್ಯೆ ಸೇರಿದಂತೆ ಯೋಜನೆ ಜಾರಿಗೆ ಅಡ್ಡಿಯಾಗಿರುವ ಸವಾಲುಗಳ ಅಧ್ಯಯನಕ್ಕೆ ಸಮಿತಿ ರಚನೆ ಮಾಡಲಾಗುವುದು. ಫೆ.6ರೊಳಗೆ ವರದಿ ಪಡೆದು ಸಚಿವ ಸಂಪುಟದ ಅನುಮೋದನೆಯೊಂದಿಗೆ ಬಜೆಟ್ ಘೋಷಣೆಗೆ ಸೇರಿಸಲಾಗುವುದು’ ಎಂದರು.</p>.<p>‘ಒಂದು ಜಿಲ್ಲೆ ಒಂದು ಉತ್ಪನ್ನ ಮಾದರಿಯಡಿ ಆಲೆಮನೆಗಳ ಮೇಲ್ದರ್ಜೆಗೇರಿಸುವುದು, ತಂತ್ರಜ್ಞಾನ ಅಳವಡಿಕೆ ಹಾಗೂ ರಪ್ತಿಗೆ ಆದ್ಯತೆ ನೀಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ಪಡಿತರ ಚೀಟಿದಾರರಿಗೆ ಸರ್ಕಾರ ಪ್ರತಿ ತಿಂಗಳು ತಲಾ ಒಂದು ಕೆ.ಜಿ ಬೆಲ್ಲ ವಿತರಣೆ ಮಾಡಬೇಕು. ಆ ಮೂಲಕ ನಷ್ಟದಲ್ಲಿರುವ ಆಲೆಮನೆ ಉದ್ಯಮಕ್ಕೆ ರಕ್ಷಣೆ ನೀಡಬೇಕು ಎಂದು ಆಲೆಮನೆ ಮಾಲೀಕರ ಸಂಘದ ಸದಸ್ಯರು ಮಂಗಳವಾರ ಸಹಕಾರ ಸಚಿವ ಎಸ್.ಟಿ.ಸೋಮಶೇಖರ್ ಅವರನ್ನು ಒತ್ತಾಯಿಸಿದರು.</p>.<p>ಕೇಂದ್ರ ಸರ್ಕಾರದ ‘ಆತ್ಮನಿರ್ಭರ ಭಾರತ’ ಯೋಜನೆಯಡಿ ಮಂಡ್ಯದ ಬೆಲ್ಲ ತಯಾರಿಕಾ ಘಟಕಗಳಿಗೆ (ಆಲೆಮನೆ) ಪುನಶ್ಚೇತನ ನೀಡುವ ಸಂಬಂಧ ಮಂಗಳವಾರ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸಂಘದ ಸದಸ್ಯರು ಮನವಿ ಸಲ್ಲಿಸಿದರು.</p>.<p>ಮಹಿಳೆ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಅನುಷ್ಠಾನಗೊಳಿಸಿರುವ ಮಾತೃಪೂರ್ಣ ಯೋಜನೆಯಲ್ಲೂ ಗರ್ಭಿಣಿಯರಿಗೆ ರಾಸಾಯನಿಕ ಮುಕ್ತ ಬೆಲ್ಲ ವಿತರಣೆ ಮಾಡಬೇಕು. ಆರೋಗ್ಯದ ದೃಷ್ಟಿಯಿಂದ ಬೆಲ್ಲಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಜಿಲ್ಲೆಯ ಆಲೆಮನೆಗಳಲ್ಲಿ ರಾಸಾಯನಿಕಗಳ ಬಳಕೆ ಹೆಚ್ಚಾಗಿದ್ದು ಇದಕ್ಕೆ ಕಡಿವಾಣ ಹಾಕಬೇಕು ಎಂದು ಒತ್ತಾಯಿಸಿದರು.</p>.<p>ಸಚಿವ ಎಸ್.ಟಿ.ಸೋಮಶೇಖರ್ ಮಾತನಾಡಿ ‘ಆತ್ಮನಿರ್ಭರ ಭಾರತ ಯೋಜನೆಯಡಿ ಬೆಲ್ಲ ಹಾಗೂ ಅದರ ಮೌಲ್ಯವರ್ಧಿತ ಉತ್ಪನ್ನಗಳ ಉದ್ಯಮಕ್ಕೆ ಪುನಶ್ಚೇತನ ನೀಡಲಾಗುವುದು. ಬೆಲ್ಲಕ್ಕೆ ಬ್ರ್ಯಾಂಡ್ ರೂಪ ನೀಡಿ ಅಂತರರಾಷ್ಟ್ರೀಯ ಮಾರುಕಟ್ಟೆ ಕಲ್ಪಿಸಲಾಗುವುದು. ಇದರಿಂದ ಕಬ್ಬು ಬೆಳೆಗಾರರ ಸಮಸ್ಯೆಗಳಿಗೆ ಶಾಶ್ವತ ಪರಿಹಾರ ದೊರೆಯಲಿದೆ’ ಎಂದರು.</p>.<p>‘ಆಲೆಮನೆ ಮಾಲೀಕರು ಎದುರಿಸುತ್ತಿರುವ ಸಮಸ್ಯೆ ಸೇರಿದಂತೆ ಯೋಜನೆ ಜಾರಿಗೆ ಅಡ್ಡಿಯಾಗಿರುವ ಸವಾಲುಗಳ ಅಧ್ಯಯನಕ್ಕೆ ಸಮಿತಿ ರಚನೆ ಮಾಡಲಾಗುವುದು. ಫೆ.6ರೊಳಗೆ ವರದಿ ಪಡೆದು ಸಚಿವ ಸಂಪುಟದ ಅನುಮೋದನೆಯೊಂದಿಗೆ ಬಜೆಟ್ ಘೋಷಣೆಗೆ ಸೇರಿಸಲಾಗುವುದು’ ಎಂದರು.</p>.<p>‘ಒಂದು ಜಿಲ್ಲೆ ಒಂದು ಉತ್ಪನ್ನ ಮಾದರಿಯಡಿ ಆಲೆಮನೆಗಳ ಮೇಲ್ದರ್ಜೆಗೇರಿಸುವುದು, ತಂತ್ರಜ್ಞಾನ ಅಳವಡಿಕೆ ಹಾಗೂ ರಪ್ತಿಗೆ ಆದ್ಯತೆ ನೀಡಲಾಗುವುದು’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>