<p><strong>ಮದ್ದೂರು:</strong> ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದ ಸಮಾಜದ ಕಚೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ಆಚರಿಸಲಾಯಿತು.</p>.<p>ಜಕಣಾಚಾರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ರಾಜ್ಯಾಧ್ಯಕ್ಷ ಮಳವಳ್ಳಿ ಶ್ರೀನಿವಾಸ್ ಸಿಂಹ ಚಾಲನೆ ನೀಡಿ,‘ ನಮ್ಮೆಲ್ಲರಲ್ಲಿ ಒಗ್ಗಟ್ಟಿದ್ದರೆ ಮಾತ್ರ ಸಮಾಜದ ಏಳಿಗೆ ಸಾಧ್ಯ’ ಎಂದರು.</p>.<p>‘ಸರ್ಕಾರವು ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಬೇಕು ಅಷ್ಟೇ ಅಲ್ಲದೇ, ಪ್ರತಿ ತಾಲ್ಲೂಕು ಕೇಂದ್ರದಲ್ಲಿ ವಿಶ್ವಕರ್ಮ ಜನಾಂಗದವರ ಅನುಕೂಲಕ್ಕಾಗಿ ಸಮುದಾಯ ಭವನದ ನಿರ್ಮಾಣಕ್ಕಾಗಿ ನಿವೇಶನವನ್ನು ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಸಮಾಜದ ಜಿಲ್ಲಾಧ್ಯಕ್ಷ ತೈಲೂರು ಆನಂದಾಚಾರಿ ಮಾತನಾಡಿ, ‘ತಾಲ್ಲೂಕು ಆಡಳಿತವು ವಿಶ್ವಕರ್ಮ ಜಯಂತಿ ಸೇರಿದಂತೆ ಅಮರಶಿಲ್ಪಿ ಜಕಣಾಚಾರಿ ರವರ ಜಯಂತಿಗಳನ್ನು ಆಚರಿಸುವ ವಿಷಯದಲ್ಲಿ ಸರಿಯಾದ ಕಾಳಜಿ ವಹಿಸುತ್ತಿಲ್ಲ. ಏನೋ ಕಾಟಾಚಾರಕ್ಕೆ, ನಾಮಕಾವಸ್ಥೆಗಷ್ಟೇ ಆಚರಣೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಜಯಂತಿ ಆಚರಣೆಗೂ ಮುನ್ನ ನಡೆಯುವ ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಪಾಲಿಸುವುದಿಲ್ಲ, ಅನುದಾನ ಕಡಿಮೆಯಿದೆ ಎಂದು ಬೇಕಾಬಿಟ್ಟಿ ಆಚರಣೆ ಮಾಡುತ್ತಾರೆ. ಅಷ್ಟೇ ಅಲ್ಲದೇ ಸಮುದಾಯದ ಮುಖಂಡರನ್ನು ಸರಿಯಾಗಿ ಆಹ್ವಾನಿಸುವುದಿಲ್ಲ ಹಾಗೂ ಗಣನೆಗೂ ತೆಗೆದುಕೊಳ್ಳುವುದಿಲ್ಲ ಎಂದು ಆರೋಪಿಸಿದ ಅವರು, ಈ ಬಗ್ಗೆ ಜಿಲ್ಲಾಡಳಿತವು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಪವಿತ್ರಾ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಘಟಕದ ಅಧ್ಯಕ್ಷ ಬಸವಾಚಾರಿ, ಮುಖಂಡರಾದ ಶಿವಕುಮಾರ್, ಮಂಟೇಸ್ವಾಮಿ, ಉಮಾಶಂಕರ್, ಶಶಿಕುಮಾರ್, ಮಹದೇವು, ವೀರಭದ್ರಾಚಾರ್, ತೊರೆಚಾಕನಹಳ್ಳಿ ಆನಂದ್, ನಾಗೇಶ್, ಗಣೇಶ್, ಜಗದೀಶ್, ಕುಮಾರಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಅಖಿಲ ಕರ್ನಾಟಕ ವಿಶ್ವಕರ್ಮ ಸಮಾಜದ ತಾಲ್ಲೂಕು ಘಟಕದ ವತಿಯಿಂದ ಪಟ್ಟಣದ ಸಮಾಜದ ಕಚೇರಿಯಲ್ಲಿ ಅಮರಶಿಲ್ಪಿ ಜಕಣಾಚಾರಿ ಜಯಂತಿಯನ್ನು ಆಚರಿಸಲಾಯಿತು.</p>.<p>ಜಕಣಾಚಾರಿಯವರ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡುವ ಮೂಲಕ ಕಾರ್ಯಕ್ರಮಕ್ಕೆ ರಾಜ್ಯಾಧ್ಯಕ್ಷ ಮಳವಳ್ಳಿ ಶ್ರೀನಿವಾಸ್ ಸಿಂಹ ಚಾಲನೆ ನೀಡಿ,‘ ನಮ್ಮೆಲ್ಲರಲ್ಲಿ ಒಗ್ಗಟ್ಟಿದ್ದರೆ ಮಾತ್ರ ಸಮಾಜದ ಏಳಿಗೆ ಸಾಧ್ಯ’ ಎಂದರು.</p>.<p>‘ಸರ್ಕಾರವು ವಿಶ್ವಕರ್ಮ ಸಮಾಜದ ಅಭಿವೃದ್ಧಿಗೆ ವಿಶೇಷ ಯೋಜನೆಗಳನ್ನು ರೂಪಿಸಬೇಕು ಅಷ್ಟೇ ಅಲ್ಲದೇ, ಪ್ರತಿ ತಾಲ್ಲೂಕು ಕೇಂದ್ರದಲ್ಲಿ ವಿಶ್ವಕರ್ಮ ಜನಾಂಗದವರ ಅನುಕೂಲಕ್ಕಾಗಿ ಸಮುದಾಯ ಭವನದ ನಿರ್ಮಾಣಕ್ಕಾಗಿ ನಿವೇಶನವನ್ನು ಮಂಜೂರು ಮಾಡಬೇಕು’ ಎಂದು ಆಗ್ರಹಿಸಿದರು.</p>.<p>ಸಮಾಜದ ಜಿಲ್ಲಾಧ್ಯಕ್ಷ ತೈಲೂರು ಆನಂದಾಚಾರಿ ಮಾತನಾಡಿ, ‘ತಾಲ್ಲೂಕು ಆಡಳಿತವು ವಿಶ್ವಕರ್ಮ ಜಯಂತಿ ಸೇರಿದಂತೆ ಅಮರಶಿಲ್ಪಿ ಜಕಣಾಚಾರಿ ರವರ ಜಯಂತಿಗಳನ್ನು ಆಚರಿಸುವ ವಿಷಯದಲ್ಲಿ ಸರಿಯಾದ ಕಾಳಜಿ ವಹಿಸುತ್ತಿಲ್ಲ. ಏನೋ ಕಾಟಾಚಾರಕ್ಕೆ, ನಾಮಕಾವಸ್ಥೆಗಷ್ಟೇ ಆಚರಣೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.</p>.<p>‘ಜಯಂತಿ ಆಚರಣೆಗೂ ಮುನ್ನ ನಡೆಯುವ ಪೂರ್ವಭಾವಿ ಸಭೆಯಲ್ಲಿ ತೆಗೆದುಕೊಂಡ ನಿರ್ಣಯಗಳನ್ನು ಪಾಲಿಸುವುದಿಲ್ಲ, ಅನುದಾನ ಕಡಿಮೆಯಿದೆ ಎಂದು ಬೇಕಾಬಿಟ್ಟಿ ಆಚರಣೆ ಮಾಡುತ್ತಾರೆ. ಅಷ್ಟೇ ಅಲ್ಲದೇ ಸಮುದಾಯದ ಮುಖಂಡರನ್ನು ಸರಿಯಾಗಿ ಆಹ್ವಾನಿಸುವುದಿಲ್ಲ ಹಾಗೂ ಗಣನೆಗೂ ತೆಗೆದುಕೊಳ್ಳುವುದಿಲ್ಲ ಎಂದು ಆರೋಪಿಸಿದ ಅವರು, ಈ ಬಗ್ಗೆ ಜಿಲ್ಲಾಡಳಿತವು ಕ್ರಮ ಕೈಗೊಳ್ಳಬೇಕು’ ಎಂದು ಒತ್ತಾಯಿಸಿದರು.</p>.<p>ಕೆಪಿಸಿಸಿ ರಾಜ್ಯ ಮಹಿಳಾ ಘಟಕದ ಉಪಾಧ್ಯಕ್ಷೆ ಪವಿತ್ರಾ ಆಚಾರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ತಾಲ್ಲೂಕು ಘಟಕದ ಅಧ್ಯಕ್ಷ ಬಸವಾಚಾರಿ, ಮುಖಂಡರಾದ ಶಿವಕುಮಾರ್, ಮಂಟೇಸ್ವಾಮಿ, ಉಮಾಶಂಕರ್, ಶಶಿಕುಮಾರ್, ಮಹದೇವು, ವೀರಭದ್ರಾಚಾರ್, ತೊರೆಚಾಕನಹಳ್ಳಿ ಆನಂದ್, ನಾಗೇಶ್, ಗಣೇಶ್, ಜಗದೀಶ್, ಕುಮಾರಸ್ವಾಮಿ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>