<p><strong>ಮದ್ದೂರು:</strong> ‘ನಮ್ಮ ಪಕ್ಷದಿಂದಲೇ ಬೆಳೆದು, ಅನ್ನತಿಂದು, ಸ್ವಾರ್ಥಕ್ಕಾಗಿ ಈಗ ಬೇರೆ ಪಕ್ಷಕ್ಕೆ ಹೋಗಿ ದ್ರೋಹ ಮಾಡಿದವರು ನಮ್ಮ ಪಕ್ಷದ ವಿರುದ್ಧವೇ ಮಾತನಾಡುತ್ತಿದ್ದಾರೆ’ ಎಂದು ಶಾಸಕ ಡಿ.ಸಿ.ತಮ್ಮಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಸ್ಥಳೀಯ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ ನಡೆದ ಗ್ರಾ.ಪಂ ಸದಸ್ಯರು, ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಚುನಾವಣೆ ಬಂದಾಗ ಮಾತನಾಡುವ ಅವರ ಬೂಟಾಟಿಕೆಯನ್ನು ಜನ ಗಮನಿಸುತ್ತಿದ್ದಾರೆ. ಮುಂದೆ ಬರುವ ಎಲ್ಲ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಅಂಥವರ ಸುಳ್ಳು ಮಾತುಗಳಿಗೆ, ಟೀಕೆಗಳಿಗೆ ಕಿವಿಗೊಡುವ ಅಗತ್ಯವಿಲ್ಲ’ ಎಂದರು.</p>.<p>‘ಜಿಲ್ಲೆಯ ಜೆಡಿಎಸ್ ಶಾಸಕರು ನಮ್ಮ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡಿಸಿಕೊಂಡು ಬರುತ್ತಾರೆ ಎಂದಿದ್ದಾರೆ. ಮುಖ್ಯಮಂತ್ರಿ ಕೆಲವು ಶಾಸಕರಿಗೆ ಸೀಮಿತರಲ್ಲ. ಎಲ್ಲ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುತ್ತಾರೆ. ಅದು ಅವರ ಕರ್ತವ್ಯ’ ಎಂದರು.</p>.<p>ನಾಗಮಂಗಲ ಶಾಸಕ ಸುರೇಶ್ಗೌಡ ಮಾತನಾಡಿ, ‘ಮಂಡ್ಯ ಜಿಲ್ಲೆಯು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದ್ದು, ಪಕ್ಷದ ಸ್ಥಳೀಯ ಸದಸ್ಯರು ಅಪ್ಪಾಜಿಗೌಡ ಅವರನ್ನು ಬೆಂಬಲಿಸಬೇಕು’ ಎಂದರು.</p>.<p>ಮನ್ಮುಲ್ ನಿರ್ದೇಶಕ ನೆಲ್ಲಿಗೆರೆ ಬಾಲು, ವಿಧಾನ ಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಎನ್.ಅಪ್ಪಾಜಿಗೌಡ ಮಾತನಾಡಿದರು.</p>.<p>ತಾಲ್ಲೂಕಿನ ಕೆಸ್ತೂರು, ಗೆಜ್ಜಲಗೆರೆ, ಕೆ.ಹೊನ್ನಲಗೆರೆ ಭಾಗಗಳಲ್ಲಿ ಪ್ರಚಾರ ಮಾಡಿದರು.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಗೌಡ, ಕಾರ್ಯಾಧ್ಯಕ್ಷ ಕೆ.ದಾಸೇಗೌಡ, ಜೆಡಿಎಸ್ ಮುಖಂಡ ಮಾದನಾಯಕನಹಳ್ಳಿ ರಾಜಣ್ಣ, ಜಿಪಂ ಮಾಜಿ ಸದಸ್ಯ ಕೆ.ರವಿ, ಮಧುರಾಮಣಿ ಅಪ್ಪಾಜಿಗೌಡ, ಗ್ರಾ.ಪಂ.ಅಧ್ಯಕ್ಷರಾದ ಉಮೇಶ್, ಹರೀಶ್, ರವಿ, ಇಂದಿರಾ, ಅನಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ‘ನಮ್ಮ ಪಕ್ಷದಿಂದಲೇ ಬೆಳೆದು, ಅನ್ನತಿಂದು, ಸ್ವಾರ್ಥಕ್ಕಾಗಿ ಈಗ ಬೇರೆ ಪಕ್ಷಕ್ಕೆ ಹೋಗಿ ದ್ರೋಹ ಮಾಡಿದವರು ನಮ್ಮ ಪಕ್ಷದ ವಿರುದ್ಧವೇ ಮಾತನಾಡುತ್ತಿದ್ದಾರೆ’ ಎಂದು ಶಾಸಕ ಡಿ.ಸಿ.ತಮ್ಮಣ್ಣ ಅವರು ಜಿಲ್ಲಾ ಉಸ್ತುವಾರಿ ಸಚಿವ ಕೆ.ಸಿ. ನಾರಾಯಣಗೌಡ ವಿರುದ್ಧ ವಾಗ್ದಾಳಿ ನಡೆಸಿದರು.</p>.<p>ಸ್ಥಳೀಯ ವಿಧಾನ ಪರಿಷತ್ ಚುನಾವಣೆಗೆ ಸಂಬಂಧಿಸಿ ಮದ್ದೂರು ತಾಲ್ಲೂಕಿನ ಗೆಜ್ಜಲಗೆರೆಯಲ್ಲಿ ನಡೆದ ಗ್ರಾ.ಪಂ ಸದಸ್ಯರು, ಕಾರ್ಯಕರ್ತರ ಸಭೆಯಲ್ಲಿ ಅವರು ಮಾತನಾಡಿದರು.</p>.<p>‘ಚುನಾವಣೆ ಬಂದಾಗ ಮಾತನಾಡುವ ಅವರ ಬೂಟಾಟಿಕೆಯನ್ನು ಜನ ಗಮನಿಸುತ್ತಿದ್ದಾರೆ. ಮುಂದೆ ಬರುವ ಎಲ್ಲ ಚುನಾವಣೆಗಳಲ್ಲಿ ತಕ್ಕ ಪಾಠ ಕಲಿಸಲಿದ್ದಾರೆ. ಅಂಥವರ ಸುಳ್ಳು ಮಾತುಗಳಿಗೆ, ಟೀಕೆಗಳಿಗೆ ಕಿವಿಗೊಡುವ ಅಗತ್ಯವಿಲ್ಲ’ ಎಂದರು.</p>.<p>‘ಜಿಲ್ಲೆಯ ಜೆಡಿಎಸ್ ಶಾಸಕರು ನಮ್ಮ ಮುಖ್ಯಮಂತ್ರಿಯನ್ನು ಭೇಟಿ ಮಾಡಿ ಅನುದಾನ ಬಿಡುಗಡೆ ಮಾಡಿಸಿಕೊಂಡು ಬರುತ್ತಾರೆ ಎಂದಿದ್ದಾರೆ. ಮುಖ್ಯಮಂತ್ರಿ ಕೆಲವು ಶಾಸಕರಿಗೆ ಸೀಮಿತರಲ್ಲ. ಎಲ್ಲ ಕ್ಷೇತ್ರಗಳಿಗೆ ಅನುದಾನ ಬಿಡುಗಡೆ ಮಾಡುತ್ತಾರೆ. ಅದು ಅವರ ಕರ್ತವ್ಯ’ ಎಂದರು.</p>.<p>ನಾಗಮಂಗಲ ಶಾಸಕ ಸುರೇಶ್ಗೌಡ ಮಾತನಾಡಿ, ‘ಮಂಡ್ಯ ಜಿಲ್ಲೆಯು ಜೆಡಿಎಸ್ ಪಕ್ಷದ ಭದ್ರಕೋಟೆಯಾಗಿದ್ದು, ಪಕ್ಷದ ಸ್ಥಳೀಯ ಸದಸ್ಯರು ಅಪ್ಪಾಜಿಗೌಡ ಅವರನ್ನು ಬೆಂಬಲಿಸಬೇಕು’ ಎಂದರು.</p>.<p>ಮನ್ಮುಲ್ ನಿರ್ದೇಶಕ ನೆಲ್ಲಿಗೆರೆ ಬಾಲು, ವಿಧಾನ ಪರಿಷತ್ ಚುನಾವಣೆಯ ಜೆಡಿಎಸ್ ಅಭ್ಯರ್ಥಿ ಎನ್.ಅಪ್ಪಾಜಿಗೌಡ ಮಾತನಾಡಿದರು.</p>.<p>ತಾಲ್ಲೂಕಿನ ಕೆಸ್ತೂರು, ಗೆಜ್ಜಲಗೆರೆ, ಕೆ.ಹೊನ್ನಲಗೆರೆ ಭಾಗಗಳಲ್ಲಿ ಪ್ರಚಾರ ಮಾಡಿದರು.</p>.<p>ಜೆಡಿಎಸ್ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ರಾಜ್ಯ ಸಂಘಟನಾ ಕಾರ್ಯದರ್ಶಿ ಬಿಳಿಗೌಡ, ಕಾರ್ಯಾಧ್ಯಕ್ಷ ಕೆ.ದಾಸೇಗೌಡ, ಜೆಡಿಎಸ್ ಮುಖಂಡ ಮಾದನಾಯಕನಹಳ್ಳಿ ರಾಜಣ್ಣ, ಜಿಪಂ ಮಾಜಿ ಸದಸ್ಯ ಕೆ.ರವಿ, ಮಧುರಾಮಣಿ ಅಪ್ಪಾಜಿಗೌಡ, ಗ್ರಾ.ಪಂ.ಅಧ್ಯಕ್ಷರಾದ ಉಮೇಶ್, ಹರೀಶ್, ರವಿ, ಇಂದಿರಾ, ಅನಿಲ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>