ಮಂಡ್ಯ: ‘ಕೋವಿಡ್ ನಿರ್ಬಂಧದ ಹೆಸರಿನಲ್ಲಿ ಪಂಚರತ್ನ ರಥಯಾತ್ರೆ ಸ್ಥಗಿತಗೊಳಿಸುವ ಹುನ್ನಾರ ನಡೆಯುತ್ತಿದೆ. ಈ ಕುರಿತು ಕೇಶವ ಕೃಪದಲ್ಲೇ ಚರ್ಚೆ ನಡೆಸಲಾಗಿದೆ’ ಎಂದು ಜೆಡಿಎಸ್ ಶಾಸಕಾಂಗದ ಪಕ್ಷದ ನಾಯಕ ಎಚ್.ಡಿ.ಕುಮಾರಸ್ವಾಮಿ ಗುರುವಾರ ಹೇಳಿದರು.
ಪಂಚರತ್ನ ರಥಯಾತ್ರೆ ಸಂದರ್ಭದಲ್ಲಿ ಸುದ್ದಿಗಾರರ ಜೊತೆ ಮಾತನಾಡಿದ ಅವರು ‘ರಥಯಾತ್ರೆಯ ಅಲೆ ಕಂಡು ಬಿಜೆಪಿ ಮುಖಂಡರಿಗೆ ಆತಂಕ ಸೃಷ್ಟಿಯಾಗಿದೆ. ಹೀಗಾಗಿ ಕೋವಿಡ್ ನೆಪದಲ್ಲಿ ಯಾತ್ರೆ ಸ್ಥಗಿತಗೊಳಿಸುವ ಚರ್ಚೆ ನಡೆದಿದೆ. ಕೋವಿಡ್ ಬಗ್ಗೆ ನಾನು ಲಘುವಾಗಿ ಮಾತನಾಡುವುದಿಲ್ಲ. ಮುಂಜಾಗೃತಾ ಕ್ರಮ ಕೈಗೊಳ್ಳುವುದು ಸರ್ಕಾರದ ಜವಾಬ್ದಾರಿಯಾಗಿದೆ, ಅದಕ್ಕೆ ನಾನೂ ಸಹಕಾರ ನೀಡುತ್ತೇನೆ’ ಎಂದರು.