<p><strong>ಮಂಡ್ಯ:</strong> ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಆರ್. ಪೇಟೆ ಕ್ಷೇತ್ರದ ಅಭಿವೃದ್ಧಿಗೆ ನೀಡಿದ್ದ ಸುಮಾರು ₹100 ಕೋಟಿ ಅನುದಾನವನ್ನು ಇಂದಿನ ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣ ನೀಡದೆ ವಾಪಸ್ ಪಡೆದುಕೊಂಡಿದೆ. ಅನುದಾನ ಕೊರತೆಯಿಂದ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆಗುತ್ತಿಲ್ಲ’ ಎಂದು ಕೆ.ಆರ್. ಪೇಟೆ ಶಾಸಕ ಎಚ್.ಟಿ. ಮಂಜು ಅಸಮಾಧಾನ ವ್ಯಕ್ತಪಡಿಸಿದರು. </p><p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಣ್ಣ ನೀರಾವರಿ ಮತ್ತು ಜಲಸಂಪನ್ಮೂಲ ಯೋಜನೆಗಳಿಗೆ ಸಂಬಂಧಿಸಿದ ₹60 ಕೋಟಿ, ಲೋಕೋಪಯೋಗಿ ಯೋಜನೆಗಳಿಗೆ ಸಂಬಂಧಿಸಿದ ಅನುದಾನಗಳನ್ನು ತಾಂತ್ರಿಕ ಮತ್ತು ಇತರೆ ಕಾರಣ ನೀಡಿ, ವಾಪಸ್ ಪಡೆಯಲಾಗಿದೆ. ಹೀಗಾಗಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡರು ಪದೇ ಪದೇ ಅನುದಾನ ತಂದೆ ಎಂಬ ಮಾತುಗಳನ್ನು ಆಡಬಾರದು ಎಂದು ಹೇಳಿದರು. </p><p>‘ನನ್ನ ಅವಧಿಯಲ್ಲಿ ಕೆ.ಆರ್. ಪೇಟೆ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೆ.ಆರ್. ಪೇಟೆ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಹಣ ನೀಡುವಂತೆ ಮನವಿ ಮಾಡಿದ್ದರಿಂದ ₹100 ಕೋಟಿ ನೀಡಿದ್ದಾರೆ. ಲೋಕೋಪಯೋಗಿ ಇಲಾಖೆಗೆ ₹10 ಕೋಟಿ ಹಾಗೂ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ₹25 ಕೋಟಿ ಅನುದಾನ ಬಂದಿದೆ. ಆದರೆ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕಿಂತ ಕಡಿಮೆ ಅನುದಾನ ಸಿಕ್ಕಿದೆ’ ಎಂದು ಹೇಳುವ ಮೂಲಕ ಅನುದಾನ ಬಿಡುಗಡೆಯಲ್ಲಿ ತಾರತಮ್ಯವಾಗಿರುವುದನ್ನು ಪರೋಕ್ಷವಾಗಿ ಹೇಳಿದರು. </p><p><strong>ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿಲ್ಲ:</strong></p><p>ಬಿಜೆಪಿಯ ಯಾವೊಬ್ಬ ಕಾರ್ಯಕರ್ತರಿಗೆ ಜೆಡಿಎಸ್ ಶಾಲು ಹೊದಿಸಿ ಪಕ್ಷಕ್ಕೆ ಆಹ್ವಾನಿಸಿಲ್ಲ. ಪುರಸಭೆ ಮಾಜಿ ಸದಸ್ಯ ನಂದೀಶ್ ಅವರು ಹುಟ್ಟುಹಬ್ಬದ ದಿನದಂದು ನನ್ನ ಮನೆಗೆ ಬಂದಾಗ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದ್ದೇನೆಯೇ ಹೊರತು ಜೆಡಿಎಸ್ಗೆ ಸೇರ್ಪಡೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.</p><p>ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಬಲದೇವ್, ಜಿಲ್ಲಾ ಯುವ ಜೆಡಿಎಸ್ ಘಟಕದ ಅಧ್ಯಕ್ಷ ಕಂಸಾಗರ ರವಿ, ತಾ.ಪಂ. ಮಾಜಿ ಸದಸ್ಯ ಮೋಹನ್, ಮಹದೇವ ಹಾಜರಿದ್ದರು.</p><p><strong>‘ಸಂಘರ್ಷದ ಹೇಳಿಕೆ ಸಲ್ಲದು’</strong></p><p>ಕೆ.ಆರ್.ಪೇಟೆಗೆ ನಿಖಿಲ್ ಕುಮಾರಸ್ವಾಮಿ ಬಂದ ಸಂದರ್ಭದಲ್ಲಿ 2028ಕ್ಕೂ ಮುನ್ನ ಸ್ಥಳೀಯ ಸಂಸ್ಥೆ ಚುನಾವಣೆ ಬರಲಿವೆ. ಹಾಗಾಗಿ ಅಭ್ಯರ್ಥಿ ಆಯ್ಕೆಗೂ ಮುನ್ನ ಚುನಾವಣೆಯತ್ತ ಗಮನಹರಿಸಿ ಎಂದ ಕಾರ್ಯಕರ್ತರಿಗೆ ಹೇಳಿದ್ದಾರೆಯೇ ಹೊರತು ನನ್ನನ್ನೇ ಮುಂದಿನ ಅಭ್ಯರ್ಥಿ ಎಂದು ಘೋಷಿಸಿಲ್ಲ ಎಂದು ಶಾಸಕ ಎಚ್.ಟಿ.ಮಂಜು ಸ್ಪಷ್ಟಪಡಿಸಿದರು.</p><p>ಪಕ್ಷ ಸಂಘಟನೆ ದೃಷ್ಟಿಯಿಂದ ನಿಖಿಲ್ ಹೇಳಿರುವ ಮಾತಿಗೆ ಅಪಾರ್ಥ ಕಲ್ಪಿಸುವುದು ಬೇಡ. ಮುಂದಿನ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಜೆಡಿಎಸ್- ಬಿಜೆಪಿಯ ವರಿಷ್ಠರು ತೀರ್ಮಾನಿಸಲಿದ್ದಾರೆ. ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಅವರ ಬಗ್ಗೆ ಅಪಾರ ಗೌರವವಿದೆ. ಅವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಸಂಘರ್ಷಕ್ಕೆ ಎಡೆಮಾಡಿ ಕೊಡಬಾರದು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ‘ಬಿಜೆಪಿ ಸರ್ಕಾರದ ಅವಧಿಯಲ್ಲಿ ಕೆ.ಆರ್. ಪೇಟೆ ಕ್ಷೇತ್ರದ ಅಭಿವೃದ್ಧಿಗೆ ನೀಡಿದ್ದ ಸುಮಾರು ₹100 ಕೋಟಿ ಅನುದಾನವನ್ನು ಇಂದಿನ ಕಾಂಗ್ರೆಸ್ ಸರ್ಕಾರ ಯಾವುದೇ ಕಾರಣ ನೀಡದೆ ವಾಪಸ್ ಪಡೆದುಕೊಂಡಿದೆ. ಅನುದಾನ ಕೊರತೆಯಿಂದ ಜನರ ನಿರೀಕ್ಷೆಗೆ ತಕ್ಕಂತೆ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೊಳ್ಳಲು ಆಗುತ್ತಿಲ್ಲ’ ಎಂದು ಕೆ.ಆರ್. ಪೇಟೆ ಶಾಸಕ ಎಚ್.ಟಿ. ಮಂಜು ಅಸಮಾಧಾನ ವ್ಯಕ್ತಪಡಿಸಿದರು. </p><p>ಶುಕ್ರವಾರ ಪತ್ರಿಕಾಗೋಷ್ಠಿಯಲ್ಲಿ ಅವರು ಮಾತನಾಡಿ, ಸಣ್ಣ ನೀರಾವರಿ ಮತ್ತು ಜಲಸಂಪನ್ಮೂಲ ಯೋಜನೆಗಳಿಗೆ ಸಂಬಂಧಿಸಿದ ₹60 ಕೋಟಿ, ಲೋಕೋಪಯೋಗಿ ಯೋಜನೆಗಳಿಗೆ ಸಂಬಂಧಿಸಿದ ಅನುದಾನಗಳನ್ನು ತಾಂತ್ರಿಕ ಮತ್ತು ಇತರೆ ಕಾರಣ ನೀಡಿ, ವಾಪಸ್ ಪಡೆಯಲಾಗಿದೆ. ಹೀಗಾಗಿ ಮಾಜಿ ಸಚಿವ ಕೆ.ಸಿ.ನಾರಾಯಣಗೌಡರು ಪದೇ ಪದೇ ಅನುದಾನ ತಂದೆ ಎಂಬ ಮಾತುಗಳನ್ನು ಆಡಬಾರದು ಎಂದು ಹೇಳಿದರು. </p><p>‘ನನ್ನ ಅವಧಿಯಲ್ಲಿ ಕೆ.ಆರ್. ಪೇಟೆ ಕ್ಷೇತ್ರಕ್ಕೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರನ್ನು ಭೇಟಿ ಮಾಡಿ ಕೆ.ಆರ್. ಪೇಟೆ ಕ್ಷೇತ್ರದ ನೀರಾವರಿ ಯೋಜನೆಗಳಿಗೆ ಹಣ ನೀಡುವಂತೆ ಮನವಿ ಮಾಡಿದ್ದರಿಂದ ₹100 ಕೋಟಿ ನೀಡಿದ್ದಾರೆ. ಲೋಕೋಪಯೋಗಿ ಇಲಾಖೆಗೆ ₹10 ಕೋಟಿ ಹಾಗೂ ಮುಖ್ಯಮಂತ್ರಿ ವಿಶೇಷ ಅನುದಾನದಲ್ಲಿ ₹25 ಕೋಟಿ ಅನುದಾನ ಬಂದಿದೆ. ಆದರೆ ಕಾಂಗ್ರೆಸ್ ಶಾಸಕರ ಕ್ಷೇತ್ರಕ್ಕಿಂತ ಕಡಿಮೆ ಅನುದಾನ ಸಿಕ್ಕಿದೆ’ ಎಂದು ಹೇಳುವ ಮೂಲಕ ಅನುದಾನ ಬಿಡುಗಡೆಯಲ್ಲಿ ತಾರತಮ್ಯವಾಗಿರುವುದನ್ನು ಪರೋಕ್ಷವಾಗಿ ಹೇಳಿದರು. </p><p><strong>ಪಕ್ಷಕ್ಕೆ ಸೇರ್ಪಡೆ ಮಾಡಿಕೊಂಡಿಲ್ಲ:</strong></p><p>ಬಿಜೆಪಿಯ ಯಾವೊಬ್ಬ ಕಾರ್ಯಕರ್ತರಿಗೆ ಜೆಡಿಎಸ್ ಶಾಲು ಹೊದಿಸಿ ಪಕ್ಷಕ್ಕೆ ಆಹ್ವಾನಿಸಿಲ್ಲ. ಪುರಸಭೆ ಮಾಜಿ ಸದಸ್ಯ ನಂದೀಶ್ ಅವರು ಹುಟ್ಟುಹಬ್ಬದ ದಿನದಂದು ನನ್ನ ಮನೆಗೆ ಬಂದಾಗ ಅವರನ್ನು ಶಾಲು ಹೊದಿಸಿ ಸನ್ಮಾನಿಸಿದ್ದೇನೆಯೇ ಹೊರತು ಜೆಡಿಎಸ್ಗೆ ಸೇರ್ಪಡೆ ಮಾಡಿಕೊಂಡಿಲ್ಲ ಎಂದು ಸ್ಪಷ್ಟಪಡಿಸಿದರು.</p><p>ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಘಟಕದ ಅಧ್ಯಕ್ಷ ಡಿ.ರಮೇಶ್, ಟಿ.ಎ.ಪಿ.ಸಿ.ಎಂ.ಎಸ್ ಅಧ್ಯಕ್ಷ ಬಲದೇವ್, ಜಿಲ್ಲಾ ಯುವ ಜೆಡಿಎಸ್ ಘಟಕದ ಅಧ್ಯಕ್ಷ ಕಂಸಾಗರ ರವಿ, ತಾ.ಪಂ. ಮಾಜಿ ಸದಸ್ಯ ಮೋಹನ್, ಮಹದೇವ ಹಾಜರಿದ್ದರು.</p><p><strong>‘ಸಂಘರ್ಷದ ಹೇಳಿಕೆ ಸಲ್ಲದು’</strong></p><p>ಕೆ.ಆರ್.ಪೇಟೆಗೆ ನಿಖಿಲ್ ಕುಮಾರಸ್ವಾಮಿ ಬಂದ ಸಂದರ್ಭದಲ್ಲಿ 2028ಕ್ಕೂ ಮುನ್ನ ಸ್ಥಳೀಯ ಸಂಸ್ಥೆ ಚುನಾವಣೆ ಬರಲಿವೆ. ಹಾಗಾಗಿ ಅಭ್ಯರ್ಥಿ ಆಯ್ಕೆಗೂ ಮುನ್ನ ಚುನಾವಣೆಯತ್ತ ಗಮನಹರಿಸಿ ಎಂದ ಕಾರ್ಯಕರ್ತರಿಗೆ ಹೇಳಿದ್ದಾರೆಯೇ ಹೊರತು ನನ್ನನ್ನೇ ಮುಂದಿನ ಅಭ್ಯರ್ಥಿ ಎಂದು ಘೋಷಿಸಿಲ್ಲ ಎಂದು ಶಾಸಕ ಎಚ್.ಟಿ.ಮಂಜು ಸ್ಪಷ್ಟಪಡಿಸಿದರು.</p><p>ಪಕ್ಷ ಸಂಘಟನೆ ದೃಷ್ಟಿಯಿಂದ ನಿಖಿಲ್ ಹೇಳಿರುವ ಮಾತಿಗೆ ಅಪಾರ್ಥ ಕಲ್ಪಿಸುವುದು ಬೇಡ. ಮುಂದಿನ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಯನ್ನು ಜೆಡಿಎಸ್- ಬಿಜೆಪಿಯ ವರಿಷ್ಠರು ತೀರ್ಮಾನಿಸಲಿದ್ದಾರೆ. ಮಾಜಿ ಸಚಿವ ಕೆ.ಸಿ. ನಾರಾಯಣಗೌಡ ಅವರ ಬಗ್ಗೆ ಅಪಾರ ಗೌರವವಿದೆ. ಅವರು ಇಲ್ಲಸಲ್ಲದ ಹೇಳಿಕೆಗಳನ್ನು ನೀಡಿ ಸಂಘರ್ಷಕ್ಕೆ ಎಡೆಮಾಡಿ ಕೊಡಬಾರದು ಎಂದು ಮನವಿ ಮಾಡಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>