ಕೊಪ್ಪ: ‘ನಾನು 12 ವರ್ಷಗಳಿಂದ ದಕ್ಷಿಣ ಪದವೀಧರ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಕ್ಷೇತ್ರ ಬದಲಾಯಿಸಲು ಚಿಂತಿಸಿದ್ದೇನೆ. ಮಂಡ್ಯ ಲೋಕಸಭೆ ಅಥವಾ ಮಂಡ್ಯ, ಮದ್ದೂರು, ನಾಗಮಂಗಲ ಸೇರಿದಂತೆ ಯಾವುದೇ ಕ್ಷೇತ್ರದಲ್ಲಿ 2023ರ ವಿಧಾನಸಭಾ ಚುನಾವಣೆಯಲ್ಲಿ ಜೆಡಿಎಸ್ನಿಂದ ಸ್ಪರ್ಧಿಸುವ ಇಂಗಿತವನ್ನು ಪಕ್ಷದ ವರಿಷ್ಠರೊಂದಿಗೆ ವ್ಯಕ್ತಪಡಿಸಿದ್ದೇನೆ’ ಎಂದು ವಿಧಾನ ಪರಿಷತ್ ಸದಸ್ಯ ಕೆ.ಟಿ.ಶ್ರೀಕಂಠೇಗೌಡ ಹೇಳಿದರು.