ತಾಲ್ಲೂಕಿನ ಕಗ್ಗಲೀಪುರ ಗ್ರಾಮದ ಬಳಿಯ ರವಿ ಎಂಬುವವರ ಜಮೀನಿನಲ್ಲಿ ಕಾಣಿಸಿಕೊಂಡು ಕಾಡಾನೆಗಳು ಅರಣ್ಯ ಪ್ರದೇಶದಿಂದ ಬಂದಿವೆ. ಪಕ್ಕದ ಹಳ್ಳದಲ್ಲಿ ಬೆಳೆದು ನಿಂತಿದ್ದ ಬಿದಿರನ್ನು ಮೇಯುತ್ತಿದ್ದ ಒಂದು ಮರಿ ಸೇರಿ ಒಟ್ಟು ಏಳು ಆನೆಗಳನ್ನು ಕಂಡ ಗ್ರಾಮಸ್ಥರು ಕಲ್ಲಿನಿಂದ ಹೊಡೆದು ಓಡಿಸಲು ಪ್ರಯತ್ನಿಸಿದ್ದಾರೆ. ಆದರೆ ಆನೆಗಳು ಜನರತ್ತ ಧಾವಿಸುತ್ತಿರುವುದನ್ನು ಕಂಡು ಅರಣ್ಯ ಇಲಾಖೆಯ ಅಧಿಕಾರಿಗಳಿಗೆ ವಿಚಾರ ಮುಟ್ಟಿಸಿದ್ದಾರೆ.