ಭಾನುವಾರ ‘ಮನ್ ಕಿ ಬಾತ್’ 66ನೇ ಆವೃತ್ತಿಯಲ್ಲಿ ಮಾತನಾಡಿದ ಪ್ರಧಾನಿ, 83 ವರ್ಷ ವಯಸ್ಸಿನ ಕಾಮೇಗೌಡರು ಬೆಟ್ಟದ ಮೇಲೆ 16 ಕಟ್ಟೆ ಕಟ್ಟಿಸುವ ಮೂಲಕ ಪರಿಸರ ಪ್ರೇಮ ಮೆರೆದಿದ್ದಾರೆ. ಶಾಲೆಯ ಮೆಟ್ಟಿಲು ಹತ್ತದ ಅವರು ಸಾವಿರಾರು ಸಸಿ ಬೆಳೆಸಿದ್ದಾರೆ. ನೀಲಿ ವೆಂಕಟಗೌಡ, ರಾಜಮ್ಮ ದಂಪತಿಯ ಪುತ್ರರಾದ ಅವರು ಪರಿಸರ ರಕ್ಷಣೆಗೆ ಮಾದರಿಯಾಗಿದ್ದಾರೆ. ಅವರ ಸೇವೆ ಗುರುತಿಸಿರುವ ಕರ್ನಾಟಕ ಸರ್ಕಾರ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಿದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.