ಹಾಸನ ಜಿಲ್ಲೆಯ ಹೇಮಾವತಿ ಜಲಾಶಯ ಭರ್ತಿಯಾಗಿದ್ದು, ಕೊನೆಯ ಭಾಗವಾದ ನಾಗಮಂಗಲ ತಾಲ್ಲೂಕಿನ ನಾಲೆಗಳಿಗೂ ನೀರು ಹರಿಸಲಾಗುತ್ತಿದೆ. ದೇವಲಾಪುರದ ಬಳಿ ಅರಣ್ಯ ಪ್ರದೇಶವಿದ್ದು, ಅಲ್ಲಿ ಭೂಮಿ ಕುಸಿತದಿಂದ ನಾಲೆ ಒಡೆದಿದೆ. ಕಳೆದ ವರ್ಷವೂ ಇದೇ ಜಾಗದಲ್ಲಿ ಕಾಲುವೆ ಒಡೆದಿತ್ತು. ನಂತರ ದುರಸ್ತಿ ಪಡಿಸಲಾಗಿತ್ತು. ಆದರೆ, ಕಳಪೆ ಕಾಮಗಾರಿಯಿಂದಾಗಿ ಮತ್ತೆ ನಾಲೆ ಒಡೆದಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.