<p><strong>ಕಿಕ್ಕೇರಿ:</strong> ‘ಯಾವುದೇ ಸಹಾಯವಿಲ್ಲದೆ ಸ್ವಯಂಪ್ರೇರಣೆಯಿಂದ ಮನೆಯ ಹಬ್ಬದಂತೆ ಕನ್ನಡ ಹಬ್ಬವನ್ನು ಆಚರಿಸುವ ಆಟೊ ಚಾಲಕರ ಪ್ರೇಮ ಮರೆಯಲಾಗದು’ ಎಂದು ಕೆಪಿಸಿಸಿ ಸದಸ್ಯ ಸುರೇಶ್ ಹೇಳಿದರು.</p>.<p>ಪಟ್ಟಣದ ಅಂಗಡಿಬೀದಿಯ ಆಟೊ ಮಾಲೀಕ, ಚಾಲಕರ ಸಂಘದವರು ಸೋಮವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಕಷ್ಟವಿದ್ದರೂ ಸ್ವಾವಲಂಬಿ ಬದುಕಿಗೆ ಚಾಲಕರಾಗಿದ್ದಾರೆ. ನವೆಂಬರ್ ತಿಂಗಳಲ್ಲಿ ಸಡಗರದಿಂದ ಮಾತೃಭಾಷೆ, ನಾಡು–ನುಡಿಯನ್ನು ಸ್ಮರಿಸುವ ಇವರ ಸತ್ಕಾರ್ಯವನ್ನು ಬುದ್ಧಿಜೀವಿಗಳು ಅನುಸರಿಸಬೇಕು’ ಎಂದರು.</p>.<p>‘ಅತೀ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ ಮಂಡ್ಯ ಆಗಿದ್ದು, ಇಲ್ಲಿನ ಹೃದಯ ಸಿರಿವಂತಿಕೆ ಮೆಚ್ಚಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಭಾಷೆ ಹೆಚ್ಚು ಬಳಕೆಯಲ್ಲಿದೆ. ಸ್ವಂತ ಹಣದಲ್ಲಿ ಮನೆಯ ಹಬ್ಬದಂತೆ ಆಚರಿಸುವ ಚಾಲಕರ ಮಾತೃಭಾಷೆ ಪ್ರೇಮ ಮರೆಯಲಾಗದು’ ಎಂದು ಸ್ಮರಿಸಿದರು.</p>.<p>ಕನ್ನಡಾಂಭೆ ಧ್ವಜ ಹಾರಿಸಿ, ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು. ಚಾಲಕರು ಪಟ್ಟಣದ ಪ್ರಮುಖ ಬೀದಿಯಲ್ಲಿ ಆಟೊಗಳಿಗೆ ಕನ್ನಡ ಬಾವುಟ, ಹಳದಿ, ಕೆಂಪು ಹೂವುಗಳಿಂದ ಅಲಂಕರಿಸಿ ಕನ್ನಡಾಂಬೆಗೆ ಜೈಕಾರ ಹಾಕುತ್ತ ಮೆರವಣಿಗೆಯಲ್ಲಿ ಸಾಗಿದರು. ಸಿಹಿ ತಿನಿಸು, ಅನ್ನ ದಾಸೋಹ ಏರ್ಪಡಿಸಲಾಗಿತ್ತು.</p>.<p>ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ನಾಗೇಂದ್ರ, ಸುರೇಶ್, ರಮೇಶ್, ಶಿವರಾಂ, ಜಯರಾಂ, ರಾಣಾಸಿಂಗ್, ಜೇಟು ಮತ್ತಿತರರನ್ನು ಗೌರವಿಸಲಾಯಿತು. ಸಂಘದ ಚಾಲಕರು, ಮುಖಂಡರು ಭಾಗವಹಿಸಿದ್ದರು.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ:</strong> ‘ಯಾವುದೇ ಸಹಾಯವಿಲ್ಲದೆ ಸ್ವಯಂಪ್ರೇರಣೆಯಿಂದ ಮನೆಯ ಹಬ್ಬದಂತೆ ಕನ್ನಡ ಹಬ್ಬವನ್ನು ಆಚರಿಸುವ ಆಟೊ ಚಾಲಕರ ಪ್ರೇಮ ಮರೆಯಲಾಗದು’ ಎಂದು ಕೆಪಿಸಿಸಿ ಸದಸ್ಯ ಸುರೇಶ್ ಹೇಳಿದರು.</p>.<p>ಪಟ್ಟಣದ ಅಂಗಡಿಬೀದಿಯ ಆಟೊ ಮಾಲೀಕ, ಚಾಲಕರ ಸಂಘದವರು ಸೋಮವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಸನ್ಮಾನ ಸ್ವೀಕರಿಸಿ ಅವರು ಮಾತನಾಡಿದರು.</p>.<p>‘ಕಷ್ಟವಿದ್ದರೂ ಸ್ವಾವಲಂಬಿ ಬದುಕಿಗೆ ಚಾಲಕರಾಗಿದ್ದಾರೆ. ನವೆಂಬರ್ ತಿಂಗಳಲ್ಲಿ ಸಡಗರದಿಂದ ಮಾತೃಭಾಷೆ, ನಾಡು–ನುಡಿಯನ್ನು ಸ್ಮರಿಸುವ ಇವರ ಸತ್ಕಾರ್ಯವನ್ನು ಬುದ್ಧಿಜೀವಿಗಳು ಅನುಸರಿಸಬೇಕು’ ಎಂದರು.</p>.<p>‘ಅತೀ ಹೆಚ್ಚು ಕನ್ನಡ ಮಾತನಾಡುವ ಜಿಲ್ಲೆ ಮಂಡ್ಯ ಆಗಿದ್ದು, ಇಲ್ಲಿನ ಹೃದಯ ಸಿರಿವಂತಿಕೆ ಮೆಚ್ಚಬೇಕಿದೆ. ಗ್ರಾಮೀಣ ಪ್ರದೇಶದಲ್ಲಿ ಕನ್ನಡ ಭಾಷೆ ಹೆಚ್ಚು ಬಳಕೆಯಲ್ಲಿದೆ. ಸ್ವಂತ ಹಣದಲ್ಲಿ ಮನೆಯ ಹಬ್ಬದಂತೆ ಆಚರಿಸುವ ಚಾಲಕರ ಮಾತೃಭಾಷೆ ಪ್ರೇಮ ಮರೆಯಲಾಗದು’ ಎಂದು ಸ್ಮರಿಸಿದರು.</p>.<p>ಕನ್ನಡಾಂಭೆ ಧ್ವಜ ಹಾರಿಸಿ, ಭಾವಚಿತ್ರಕ್ಕೆ ಪುಷ್ಪನಮನವನ್ನು ಸಲ್ಲಿಸಲಾಯಿತು. ಚಾಲಕರು ಪಟ್ಟಣದ ಪ್ರಮುಖ ಬೀದಿಯಲ್ಲಿ ಆಟೊಗಳಿಗೆ ಕನ್ನಡ ಬಾವುಟ, ಹಳದಿ, ಕೆಂಪು ಹೂವುಗಳಿಂದ ಅಲಂಕರಿಸಿ ಕನ್ನಡಾಂಬೆಗೆ ಜೈಕಾರ ಹಾಕುತ್ತ ಮೆರವಣಿಗೆಯಲ್ಲಿ ಸಾಗಿದರು. ಸಿಹಿ ತಿನಿಸು, ಅನ್ನ ದಾಸೋಹ ಏರ್ಪಡಿಸಲಾಗಿತ್ತು.</p>.<p>ಸಾಮಾಜಿಕ ಸೇವೆ ಸಲ್ಲಿಸುತ್ತಿರುವ ನಾಗೇಂದ್ರ, ಸುರೇಶ್, ರಮೇಶ್, ಶಿವರಾಂ, ಜಯರಾಂ, ರಾಣಾಸಿಂಗ್, ಜೇಟು ಮತ್ತಿತರರನ್ನು ಗೌರವಿಸಲಾಯಿತು. ಸಂಘದ ಚಾಲಕರು, ಮುಖಂಡರು ಭಾಗವಹಿಸಿದ್ದರು.<br /><br /><br /></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>