<p><strong>ಶ್ರೀರಂಗಪಟ್ಟಣ:</strong> ಮೈಸೂರು ಸ್ಯಾಂಡಲ್ ಸಾಬೂನಿನ ಪ್ರಚಾರ ರಾಯಭಾರಿಯನ್ನಾಗಿ ಚಿತ್ರನಟಿ ತಮನ್ನಾ ಬಾಟಿಯಾ ಅವರನ್ನು ನೇಮಕ ಮಾಡಿಕೊಂಡಿರುವ ಕೆಎಸ್ಡಿಎಲ್ ಕ್ರಮವನ್ನು ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಲ್ಲೂಕಿನ ಬೊಮ್ಮೂರು ಅಗ್ರಹಾರದಲ್ಲಿ ಗುರುವಾರ ಹಸುಗಳಿಗೆ ಮೈಸೂರು ಸ್ಯಾಂಡಲ್ ಸೋಪ್ನಿಂದ ಸ್ನಾನ ಮಾಡಿಸಿ ಪ್ರತಿಭಟನೆ ನಡೆಸಿದರು.</p>.<p>ಕೆಎಸ್ಡಿಎಲ್ ವಿರುದ್ಧ ಘೋಷಣೆ ಕೂಗಿದರು. ತಮನ್ನಾ ಬಾಟಿಯಾ ಅವರ ನೇಮಕ ಸಂಬಂಧ ಆಗಿರುವ ಒಪ್ಪಂದವನ್ನು ರದ್ದುಪಡಿಸಬೇಕು. ಇಲ್ಲದಿದ್ದರೆ ಈ ಸಾಬೂನು ಬಳಸುವುದನ್ನು ನಿಲ್ಲಿಸುತ್ತೇವೆ ಎಂದು ಎಚ್ಚರಿಸಿದರು.</p>.<p>ತಮನ್ನಾ ಅವರ ನೇಮಕವನ್ನು ಸಮರ್ಥಿಸಿಕೊಂಡಿರುವ ಸಚಿವ ಎಂ.ಬಿ. ಪಾಟೀಲ ಅವರ ವಿರುದ್ಧ ವೇದಿಕೆಯ ಅಧ್ಯಕ್ಷ ಬಿ. ಶಂಕರಬಾಬು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮೈಸೂರು ಸ್ಯಾಂಡಲ್ ಸಾಬೂನು ಕರ್ನಾಟಕ ಸರ್ಕಾರದ ಪ್ರಸಿದ್ಧ ಉತ್ಪನ್ನ. ಹಲವು ದಶಕಗಳಿಂದ ಇದಕ್ಕೆ ಉತ್ತಮ ಬೇಡಿಕೆ ಇದೆ. ತಮನ್ನಾ ಅವರಿಗೆ ₹6.20 ಕೋಟಿ ಕೊಟ್ಟು ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ತನಿಖೆಯಾಗಬೇಕು. ಅಗತ್ಯವಿದ್ದರೆ ಕನ್ನಡದ ಸಿನಿಮಾ ತಾರೆಯರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.</p>.<p>ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎಚ್. ಜಗದೀಶ್, ಮಹಿಳಾ ಘಟಕದ ಅಧ್ಯಕ್ಷೆ ಛಾಯಾದೇವಿ, ಪದಾಧಿಕಾರಿಗಳಾದ ಅಂಕಶೆಟ್ಟಿ, ಜಯಮ್ಮ, ರೇವಮ್ಮ, ಸುಮಿತ್ರಮ್ಮ, ಮನೋಜ್, ಧನುಷ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಮೈಸೂರು ಸ್ಯಾಂಡಲ್ ಸಾಬೂನಿನ ಪ್ರಚಾರ ರಾಯಭಾರಿಯನ್ನಾಗಿ ಚಿತ್ರನಟಿ ತಮನ್ನಾ ಬಾಟಿಯಾ ಅವರನ್ನು ನೇಮಕ ಮಾಡಿಕೊಂಡಿರುವ ಕೆಎಸ್ಡಿಎಲ್ ಕ್ರಮವನ್ನು ಖಂಡಿಸಿ ಮಂಡ್ಯ ರಕ್ಷಣಾ ವೇದಿಕೆ ಕಾರ್ಯಕರ್ತರು ತಾಲ್ಲೂಕಿನ ಬೊಮ್ಮೂರು ಅಗ್ರಹಾರದಲ್ಲಿ ಗುರುವಾರ ಹಸುಗಳಿಗೆ ಮೈಸೂರು ಸ್ಯಾಂಡಲ್ ಸೋಪ್ನಿಂದ ಸ್ನಾನ ಮಾಡಿಸಿ ಪ್ರತಿಭಟನೆ ನಡೆಸಿದರು.</p>.<p>ಕೆಎಸ್ಡಿಎಲ್ ವಿರುದ್ಧ ಘೋಷಣೆ ಕೂಗಿದರು. ತಮನ್ನಾ ಬಾಟಿಯಾ ಅವರ ನೇಮಕ ಸಂಬಂಧ ಆಗಿರುವ ಒಪ್ಪಂದವನ್ನು ರದ್ದುಪಡಿಸಬೇಕು. ಇಲ್ಲದಿದ್ದರೆ ಈ ಸಾಬೂನು ಬಳಸುವುದನ್ನು ನಿಲ್ಲಿಸುತ್ತೇವೆ ಎಂದು ಎಚ್ಚರಿಸಿದರು.</p>.<p>ತಮನ್ನಾ ಅವರ ನೇಮಕವನ್ನು ಸಮರ್ಥಿಸಿಕೊಂಡಿರುವ ಸಚಿವ ಎಂ.ಬಿ. ಪಾಟೀಲ ಅವರ ವಿರುದ್ಧ ವೇದಿಕೆಯ ಅಧ್ಯಕ್ಷ ಬಿ. ಶಂಕರಬಾಬು ಆಕ್ರೋಶ ವ್ಯಕ್ತಪಡಿಸಿದರು.</p>.<p>‘ಮೈಸೂರು ಸ್ಯಾಂಡಲ್ ಸಾಬೂನು ಕರ್ನಾಟಕ ಸರ್ಕಾರದ ಪ್ರಸಿದ್ಧ ಉತ್ಪನ್ನ. ಹಲವು ದಶಕಗಳಿಂದ ಇದಕ್ಕೆ ಉತ್ತಮ ಬೇಡಿಕೆ ಇದೆ. ತಮನ್ನಾ ಅವರಿಗೆ ₹6.20 ಕೋಟಿ ಕೊಟ್ಟು ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿಕೊಂಡಿರುವುದು ಅನುಮಾನಕ್ಕೆ ಎಡೆ ಮಾಡಿಕೊಟ್ಟಿದೆ. ಈ ಬಗ್ಗೆ ತನಿಖೆಯಾಗಬೇಕು. ಅಗತ್ಯವಿದ್ದರೆ ಕನ್ನಡದ ಸಿನಿಮಾ ತಾರೆಯರನ್ನು ಪ್ರಚಾರ ರಾಯಭಾರಿಯನ್ನಾಗಿ ನೇಮಕ ಮಾಡಿಕೊಳ್ಳಬೇಕು’ ಎಂದು ಅವರು ಒತ್ತಾಯಿಸಿದರು.</p>.<p>ವೇದಿಕೆಯ ರಾಜ್ಯ ಸಂಘಟನಾ ಕಾರ್ಯದರ್ಶಿ ಕೆ.ಎಚ್. ಜಗದೀಶ್, ಮಹಿಳಾ ಘಟಕದ ಅಧ್ಯಕ್ಷೆ ಛಾಯಾದೇವಿ, ಪದಾಧಿಕಾರಿಗಳಾದ ಅಂಕಶೆಟ್ಟಿ, ಜಯಮ್ಮ, ರೇವಮ್ಮ, ಸುಮಿತ್ರಮ್ಮ, ಮನೋಜ್, ಧನುಷ್ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>