<p><strong>ಕಿಕ್ಕೇರಿ</strong>: ಬೋರೆ ದೇವಿಯಮ್ಮ ಎಂದು ಜಿಲ್ಲೆಯಲ್ಲಿಯೇ ಪ್ರಸಿದ್ಧಿ ಪಡೆದಿರುವ ಹೋಬಳಿಯ ಊಗಿನಹಳ್ಳಿ ಗ್ರಾಮದಲ್ಲಿರುವ ಕಾರೆಮೆಳೆ ಸಿಂಗಮ್ಮನ ಜಾತ್ರೆ ಸೋಮವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. </p>.<p>ಕಾರ್ತೀಕ ಮಾಸ ಮುಗಿದ ಮರುದಿನವಾದ ಮಂಗಳವಾರ ಊಗಿನಹಳ್ಳಿ ಗ್ರಾಮದ ಹೊರಭಾಗದಲ್ಲಿನ ಕಾರೆಮೆಳೆ ಸಿಂಗಮ್ಮ ಗುಡಿಯ ಬಳಿ ಜಾತ್ರೆ ನಡೆಯಿತು. ತಾಲ್ಲೂಕು, ರಾಜ್ಯದ ವಿವಿಧ ಮೂಲೆಯಿಂದ ದೇವರ ಒಕ್ಕಲಿನ ಭಕ್ತರು ಸಂಭ್ರಮದಿಂದ ಭಾಗವಹಿಸಿದ್ದರು.</p>.<p>ಜಾನುವಾರುಗಳ ಜಾತ್ರೆ ಎಂದೇ ಪ್ರತೀತಿಯಿರುವ ಜಾತ್ರೆಗೆ ರೈತಾಪಿ ಜನತೆ ತಮ್ಮ ಜಾನುವಾರು, ಕುರಿಗಳನ್ನು ತಂದು ದೇವಿಯ ಗುಡಿ ಸುತ್ತ ಪ್ರದಕ್ಷಿಣೆ ಹಾಕಿಸಿ ರೋಗ ರುಜಿನ ಬಾರದಂತೆ ಸಿಂಗಮ್ಮದೇವಿಯಲ್ಲಿ ಪ್ರಾರ್ಥಿಸಿದರು.</p>.<p>ಯುವಕರು, ನೂತನ ದಂಪತಿ ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಭಾಗವಹಿಸಿದರು. ರೈತಾಪಿ ಜನತೆ ತಮ್ಮ ಜಾನುವಾರುಗಳಿಗೆ ಬಣ್ಣ ಬಣ್ಣದ ಟೇಪು, ಗೆಜ್ಜೆ ಕಟ್ಟಿ, ತಿಲಕವಿಟ್ಟು ಗುಡಿಯ ಮುಂದೆ ಆರತಿ ಎತ್ತಿದರು. ಗುಡಿಯ ಸುತ್ತ ಪ್ರದಕ್ಷಿಣೆ ಹಾಕಿಸಿ ರೋಗ ರುಜಿನ ಬಾರದಂತೆ ಮೊರೆಇಟ್ಟರು.</p>.<p>ಜಾತ್ರೆಗೆ ಇಡೀ ದಿನ ವಿದ್ಯುತ್ ಇಲ್ಲದೆ ಕಗ್ಗತ್ತಲಿನಲ್ಲಿ ದೇವರ ದರ್ಶನ ಪಡೆಯುವಂತಾಗಿ ಭಕ್ತರು ಶಪಿಸುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಿಕ್ಕೇರಿ</strong>: ಬೋರೆ ದೇವಿಯಮ್ಮ ಎಂದು ಜಿಲ್ಲೆಯಲ್ಲಿಯೇ ಪ್ರಸಿದ್ಧಿ ಪಡೆದಿರುವ ಹೋಬಳಿಯ ಊಗಿನಹಳ್ಳಿ ಗ್ರಾಮದಲ್ಲಿರುವ ಕಾರೆಮೆಳೆ ಸಿಂಗಮ್ಮನ ಜಾತ್ರೆ ಸೋಮವಾರ ರಾತ್ರಿ ವಿಜೃಂಭಣೆಯಿಂದ ನಡೆಯಿತು. </p>.<p>ಕಾರ್ತೀಕ ಮಾಸ ಮುಗಿದ ಮರುದಿನವಾದ ಮಂಗಳವಾರ ಊಗಿನಹಳ್ಳಿ ಗ್ರಾಮದ ಹೊರಭಾಗದಲ್ಲಿನ ಕಾರೆಮೆಳೆ ಸಿಂಗಮ್ಮ ಗುಡಿಯ ಬಳಿ ಜಾತ್ರೆ ನಡೆಯಿತು. ತಾಲ್ಲೂಕು, ರಾಜ್ಯದ ವಿವಿಧ ಮೂಲೆಯಿಂದ ದೇವರ ಒಕ್ಕಲಿನ ಭಕ್ತರು ಸಂಭ್ರಮದಿಂದ ಭಾಗವಹಿಸಿದ್ದರು.</p>.<p>ಜಾನುವಾರುಗಳ ಜಾತ್ರೆ ಎಂದೇ ಪ್ರತೀತಿಯಿರುವ ಜಾತ್ರೆಗೆ ರೈತಾಪಿ ಜನತೆ ತಮ್ಮ ಜಾನುವಾರು, ಕುರಿಗಳನ್ನು ತಂದು ದೇವಿಯ ಗುಡಿ ಸುತ್ತ ಪ್ರದಕ್ಷಿಣೆ ಹಾಕಿಸಿ ರೋಗ ರುಜಿನ ಬಾರದಂತೆ ಸಿಂಗಮ್ಮದೇವಿಯಲ್ಲಿ ಪ್ರಾರ್ಥಿಸಿದರು.</p>.<p>ಯುವಕರು, ನೂತನ ದಂಪತಿ ಹೆಚ್ಚಿನ ಸಂಖ್ಯೆಯಲ್ಲಿ ಜಾತ್ರೆಯಲ್ಲಿ ಭಾಗವಹಿಸಿದರು. ರೈತಾಪಿ ಜನತೆ ತಮ್ಮ ಜಾನುವಾರುಗಳಿಗೆ ಬಣ್ಣ ಬಣ್ಣದ ಟೇಪು, ಗೆಜ್ಜೆ ಕಟ್ಟಿ, ತಿಲಕವಿಟ್ಟು ಗುಡಿಯ ಮುಂದೆ ಆರತಿ ಎತ್ತಿದರು. ಗುಡಿಯ ಸುತ್ತ ಪ್ರದಕ್ಷಿಣೆ ಹಾಕಿಸಿ ರೋಗ ರುಜಿನ ಬಾರದಂತೆ ಮೊರೆಇಟ್ಟರು.</p>.<p>ಜಾತ್ರೆಗೆ ಇಡೀ ದಿನ ವಿದ್ಯುತ್ ಇಲ್ಲದೆ ಕಗ್ಗತ್ತಲಿನಲ್ಲಿ ದೇವರ ದರ್ಶನ ಪಡೆಯುವಂತಾಗಿ ಭಕ್ತರು ಶಪಿಸುವಂತಾಯಿತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>