‘ನವಿಲು ಗರಿಯಿಂದ ತಯಾರಿಸಿದ ಹಾರವನ್ನು ದರ್ಶನ್ ಪುಟ್ಟಣ್ಣಯ್ಯ ಹಾಕಿಸಿಕೊಂಡಿದ್ದಾರೆಂದು ಆರೋಪಿಸಿ ವಲಯ ಅರಣ್ಯಾಧಿಕಾರಿ ಪುಟ್ಟಸ್ವಾಮಿ ನೋಟಿಸ್ ನೀಡಿರುವುದರ ಹಿಂದೆ ಎದುರಾಳಿ ರಾಜಕೀಯ ವ್ಯಕ್ತಿಗಳ ಕುಮ್ಮಕ್ಕು ಇದೆ. ಇಂತಹ ಹಾರಗಳನ್ನು ಈ ಹಿಂದೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಜೆಡಿಎಸ್ ನಾಯಕ ಎಚ್.ಡಿ. ಕುಮಾರಸ್ವಾಮಿ ಅವರಿಗೂ ಹಾಕಲಾಗಿದೆ. ಅವರಿಗೆ ಯಾವುದೇ ನೋಟಿಸ್ ನೀಡದ ಇಲಾಖೆ ಅಧಿಕಾರಿಗಳು ದರ್ಶನ್ ಅವರಿಗೆ ಮಾತ್ರ ನೀಡಿರುವುದರ ಹಿಂದೆ ರಾಜಕೀಯ ಹುನ್ನಾರವಿದೆ’ ಎಂದಿದ್ದಾರೆ.