ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕುಮಾರಸ್ವಾಮಿ ಸುಳ್ಳುಗಳಿಗೆ ಉತ್ತರ ಕೊಡಲ್ಲ: ಸಿದ್ದರಾಮಯ್ಯ

Last Updated 1 ಜುಲೈ 2021, 14:10 IST
ಅಕ್ಷರ ಗಾತ್ರ

ಮಂಡ್ಯ: ‘ಎಚ್‌.ಡಿ.ಕುಮಾರಸ್ವಾಮಿ ಅವರು ಎಲ್ಲದಕ್ಕೂ ಸುಳ್ಳು ಹೇಳುತ್ತಾರೆ. ಹೀಗಾಗಿ ನಾನು ಅವರ ಸುಳ್ಳುಗಳಿಗೆ ಉತ್ತರ ಕೊಡುವುದಿಲ್ಲ’ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಗುರುವಾರ ಹೇಳಿದರು.

ದಲಿತರು ಮುಖ್ಯಮಂತ್ರಿಯಾಗುವುದನ್ನು ಸಿದ್ದರಾಮಯ್ಯ ತಪ್ಪಿಸಿದ್ದಾರೆ ಎಂಬ ಕುಮಾರಸ್ವಾಮಿ ಆರೋಪಕ್ಕೆ ಅವರು ಉತ್ತರ ನೀಡಿದರು.

‘ಮಂಡ್ಯ ಹಾಲು ಒಕ್ಕೂಟದಲ್ಲಿ ನಡೆದಿರುವ ಹಾಲಿಗೆ ನೀರು ಮಿಶ್ರಣ ಮಾಡಿದ ಪ್ರಕರಣವನ್ನು ಸಿಐಡಿ ತನಿಖೆ ವಹಿಸುವಂತೆ ನಾವು ಒತ್ತಾಯ ಮಾಡಿದ್ದೆವು. ಅದರಂತೆ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ. ಆದಷ್ಟು ಬೇಗ ವಿಚಾರಣೆ ಮುಗಿಸಿ ತಪ್ಪಿತಸ್ಥರಿಗೆ ಶಿಕ್ಷೆಯಾಗುವಂತೆ ನೋಡಿಕೊಳ್ಳಬೇಕು’ ಎಂದು ಒತ್ತಾಯಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT