<p><strong>ಹಲಗೂರು</strong>: ‘ಕರ್ನಾಟಕ ಶ್ರೀಮಂತ ಸಂಸ್ಕೃತಿ, ಐತಿಹಾಸಿಕ ಪರಂಪರೆಯನ್ನು ಹೊಂದಿದ ನೆಲವಾಗಿದ್ದು, ಕನ್ನಡ ನಾಡು ನುಡಿಯ ಸಂರಕ್ಷಣೆಗೆ ನಾವೆಲ್ಲರೂ ಒಂದಾಗಬೇಕಿದೆ’ ಎಂದು ನವ ಕರ್ನಾಟಕ ಯುವಶಕ್ತಿ ತಾಲ್ಲೂಕು ಘಟಕದ ಅಧ್ಯಕ್ಷ ನಂದೀಪುರ ಕುಮಾರ್ ತಿಳಿಸಿದರು.</p>.<p>ಹಲಗೂರು ಸಮೀಪದ ಕರಲಕಟ್ಟೆ ಗೇಟ್ ಬಳಿಯ ಶಂಕರ್ ನಾಗ್ ಆಟೊ ಚಾಲಕರ ಸಂಘದ ವತಿಯಿಂದ ಬುಧವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡರಾದ ಗೊಲ್ಲರಹಳ್ಳಿ ನಾಗೇಶ್ ಮಾತನಾಡಿ, ‘ಕನ್ನಡ ನಾಡು, ಜಲ, ನೆಲ ಹಾಗೂ ಭಾಷೆಯನ್ನು ಉಳಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಜಿಲ್ಲೆಯಲ್ಲೇ ಅತಿ ಹೆಚ್ಚು ಮಂದಿ ಕನ್ನಡ ಭಾಷೆಯನ್ನು ಬಳಕೆ ಮಾಡುತ್ತಿದ್ದು, ಕನ್ನಡ ಜೀವದ ಭಾಷೆ’ ಎಂದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಕೃಷ್ಣೇಗೌಡನದೊಡ್ಡಿ ಗ್ರಾಮದ ಬಸವೇಶ್ವರ ಸ್ವಾಮಿ ದೇವಾಲಯದಿಂದ ವೀರಗಾಸೆ, ಪೂಜಾ ಕುಣಿತ ಸೇರಿದಂತೆ ಜಾನಪದ ಕಲಾ ತಂಡಗಳೊಂದಿಗೆ ಭುವನೇಶ್ವರಿ ತಾಯಿ ಮೆರವಣಿಗೆ ಮಾಡಲಾಯಿತು. ಆಟೋ ಚಾಲಕರ ಸಂಘದ ಹಿರಿಯ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ನಡೆಯಿತು.</p>.<p>ಮುಖಂಡರಾದ ಚಿಕ್ಕರಾಜು, ನವಕರ್ನಾಟಕ ಯುವ ಶಕ್ತಿ ತಾಲ್ಲೂಕು ಅಧ್ಯಕ್ಷ ಕುಮಾರ್, ಗ್ರಾಮ ಪಂಚಾಯತಿ ಸದಸ್ಯರಾದ ಗಾಣಾಳು ಮಾದೇಶ್, ಅನಿಲ್, ಚನ್ನಮ್ಮ, ಮುಖಂಡರಾದ ಮಹೇಶ್, ಅಸ್ಗರ್ ಅಲಿ, ಜಗದೀಶ್, ಶಿಕ್ಷಕ ವಿಜಯ್ ಕುಮಾರ್, ಆಟೊ ಚಾಲಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಹಲಗೂರು</strong>: ‘ಕರ್ನಾಟಕ ಶ್ರೀಮಂತ ಸಂಸ್ಕೃತಿ, ಐತಿಹಾಸಿಕ ಪರಂಪರೆಯನ್ನು ಹೊಂದಿದ ನೆಲವಾಗಿದ್ದು, ಕನ್ನಡ ನಾಡು ನುಡಿಯ ಸಂರಕ್ಷಣೆಗೆ ನಾವೆಲ್ಲರೂ ಒಂದಾಗಬೇಕಿದೆ’ ಎಂದು ನವ ಕರ್ನಾಟಕ ಯುವಶಕ್ತಿ ತಾಲ್ಲೂಕು ಘಟಕದ ಅಧ್ಯಕ್ಷ ನಂದೀಪುರ ಕುಮಾರ್ ತಿಳಿಸಿದರು.</p>.<p>ಹಲಗೂರು ಸಮೀಪದ ಕರಲಕಟ್ಟೆ ಗೇಟ್ ಬಳಿಯ ಶಂಕರ್ ನಾಗ್ ಆಟೊ ಚಾಲಕರ ಸಂಘದ ವತಿಯಿಂದ ಬುಧವಾರ ಏರ್ಪಡಿಸಿದ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.</p>.<p>ಮುಖಂಡರಾದ ಗೊಲ್ಲರಹಳ್ಳಿ ನಾಗೇಶ್ ಮಾತನಾಡಿ, ‘ಕನ್ನಡ ನಾಡು, ಜಲ, ನೆಲ ಹಾಗೂ ಭಾಷೆಯನ್ನು ಉಳಿಸುವ ಜವಬ್ದಾರಿ ನಮ್ಮೆಲ್ಲರ ಮೇಲಿದೆ. ಜಿಲ್ಲೆಯಲ್ಲೇ ಅತಿ ಹೆಚ್ಚು ಮಂದಿ ಕನ್ನಡ ಭಾಷೆಯನ್ನು ಬಳಕೆ ಮಾಡುತ್ತಿದ್ದು, ಕನ್ನಡ ಜೀವದ ಭಾಷೆ’ ಎಂದರು.</p>.<p>ಕಾರ್ಯಕ್ರಮಕ್ಕೂ ಮುನ್ನ ಕೃಷ್ಣೇಗೌಡನದೊಡ್ಡಿ ಗ್ರಾಮದ ಬಸವೇಶ್ವರ ಸ್ವಾಮಿ ದೇವಾಲಯದಿಂದ ವೀರಗಾಸೆ, ಪೂಜಾ ಕುಣಿತ ಸೇರಿದಂತೆ ಜಾನಪದ ಕಲಾ ತಂಡಗಳೊಂದಿಗೆ ಭುವನೇಶ್ವರಿ ತಾಯಿ ಮೆರವಣಿಗೆ ಮಾಡಲಾಯಿತು. ಆಟೋ ಚಾಲಕರ ಸಂಘದ ಹಿರಿಯ ಪದಾಧಿಕಾರಿಗಳಿಗೆ ಸನ್ಮಾನಿಸಲಾಯಿತು. ಸಾರ್ವಜನಿಕರಿಗೆ ಅನ್ನ ಸಂತರ್ಪಣೆ ನಡೆಯಿತು.</p>.<p>ಮುಖಂಡರಾದ ಚಿಕ್ಕರಾಜು, ನವಕರ್ನಾಟಕ ಯುವ ಶಕ್ತಿ ತಾಲ್ಲೂಕು ಅಧ್ಯಕ್ಷ ಕುಮಾರ್, ಗ್ರಾಮ ಪಂಚಾಯತಿ ಸದಸ್ಯರಾದ ಗಾಣಾಳು ಮಾದೇಶ್, ಅನಿಲ್, ಚನ್ನಮ್ಮ, ಮುಖಂಡರಾದ ಮಹೇಶ್, ಅಸ್ಗರ್ ಅಲಿ, ಜಗದೀಶ್, ಶಿಕ್ಷಕ ವಿಜಯ್ ಕುಮಾರ್, ಆಟೊ ಚಾಲಕರ ಸಂಘದ ಪದಾಧಿಕಾರಿಗಳು ಭಾಗವಹಿಸಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>