<p><strong>ಮದ್ದೂರು:</strong> ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತಂದು ಅಗತ್ಯ ಕ್ರಮ ಕೈಗೊಳ್ಳುತ್ತಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ಕೂಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಲ್ ದೊಡ್ಡಿ, ಮೇಲದಾಸನದೊಡ್ಡಿ, ಕೊತ್ತಿಪುರ ಹಾಗೂ ಅಣ್ಣಹಳ್ಳಿದೊಡ್ಡಿ ಗ್ರಾಮಗಳಲ್ಲಿ ಅಂದಾಜು ₹3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಹಲವಾರು ಗ್ರಾಮಗಳ ಹಲವಾರು ರಸ್ತೆಗಳು ಇಂದಿನವರೆಗೂ ಡಾoಬರೀಕರಣವನ್ನೇ ಕಂಡಿಲ್ಲ. ಈಗಾಗಲೇ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿರುವ ಗ್ರಾಮಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದ್ದು, ಇನ್ನು ಕೆಲ ದಿನಗಳಲ್ಲೇ ಕೂಳಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾದರಿ ಗ್ರಾಮಗಳನ್ನಾಗಿ ಮಾಡಲು ಆಲೋಚನೆ ಮಾಡಿದ್ದೇನೆ’ ಎಂದರು.</p>.<p>ಬನ್ನಹಳ್ಳಿ ಏತ ನೀರಾವರಿ ಯೋಜನೆಯೂ ಕೂಡ ಅಂತಿಮ ಘಟ್ಟಕ್ಕೆ ತಲುಪಿದ್ದು, ಮುಂದಿನ ಬೇಸಿಗೆ ವೇಳೆಗೆ 18 ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರ ಬೇಸಾಯಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಪರಾಜು, ಮುಖಂಡರಾದ ಅರುವನಹಳ್ಳಿ ಶ್ರೀನಿವಾಸ್ ಗೌಡ, ತಿಪ್ಪುರು ಮನು,ಸಿದ್ದರಾಜು,ಜಯರಾಂ, ಮಹೇಶ್, ಎಇಇ ನವೀನ್, ಎಇ ನವೀನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮದ್ದೂರು:</strong> ಹಳ್ಳಿಗಳ ಸಮಗ್ರ ಅಭಿವೃದ್ಧಿಗೆ ಸರ್ಕಾರದಿಂದ ವಿಶೇಷ ಅನುದಾನ ತಂದು ಅಗತ್ಯ ಕ್ರಮ ಕೈಗೊಳ್ಳುತ್ತಿರುವುದಾಗಿ ಶಾಸಕ ಕೆ.ಎಂ.ಉದಯ್ ತಿಳಿಸಿದರು.</p>.<p>ತಾಲ್ಲೂಕಿನ ಕೂಳಗೆರೆ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಅರೆಕಲ್ ದೊಡ್ಡಿ, ಮೇಲದಾಸನದೊಡ್ಡಿ, ಕೊತ್ತಿಪುರ ಹಾಗೂ ಅಣ್ಣಹಳ್ಳಿದೊಡ್ಡಿ ಗ್ರಾಮಗಳಲ್ಲಿ ಅಂದಾಜು ₹3 ಕೋಟಿ ವೆಚ್ಚದಲ್ಲಿ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಶುಕ್ರವಾರ ಭೂಮಿಪೂಜೆ ನೆರವೇರಿಸಿ ಅವರು ಮಾತನಾಡಿದರು.</p>.<p>‘ಹಲವಾರು ಗ್ರಾಮಗಳ ಹಲವಾರು ರಸ್ತೆಗಳು ಇಂದಿನವರೆಗೂ ಡಾoಬರೀಕರಣವನ್ನೇ ಕಂಡಿಲ್ಲ. ಈಗಾಗಲೇ ಅಭಿವೃದ್ಧಿಯಲ್ಲಿ ಸಾಕಷ್ಟು ಹಿಂದುಳಿದಿರುವ ಗ್ರಾಮಗಳಲ್ಲಿ ಹಂತ ಹಂತವಾಗಿ ಅಭಿವೃದ್ಧಿ ಕಾರ್ಯಗಳಿಗೆ ಚಾಲನೆ ನೀಡಲಾಗುತ್ತಿದ್ದು, ಇನ್ನು ಕೆಲ ದಿನಗಳಲ್ಲೇ ಕೂಳಗೆರೆ ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ ₹10 ಕೋಟಿ ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳಿಗೆ ಚಾಲನೆ ನೀಡಿ ಮಾದರಿ ಗ್ರಾಮಗಳನ್ನಾಗಿ ಮಾಡಲು ಆಲೋಚನೆ ಮಾಡಿದ್ದೇನೆ’ ಎಂದರು.</p>.<p>ಬನ್ನಹಳ್ಳಿ ಏತ ನೀರಾವರಿ ಯೋಜನೆಯೂ ಕೂಡ ಅಂತಿಮ ಘಟ್ಟಕ್ಕೆ ತಲುಪಿದ್ದು, ಮುಂದಿನ ಬೇಸಿಗೆ ವೇಳೆಗೆ 18 ಕೆರೆಗಳಿಗೆ ನೀರು ತುಂಬಿಸುವ ಮೂಲಕ ರೈತರ ಬೇಸಾಯಕ್ಕೆ ಅನುಕೂಲ ಕಲ್ಪಿಸಲಾಗುವುದು ಎಂದು ತಿಳಿಸಿದರು.</p>.<p>ಗ್ರಾಮ ಪಂಚಾಯಿತಿ ಅಧ್ಯಕ್ಷ ಕೆಂಪರಾಜು, ಮುಖಂಡರಾದ ಅರುವನಹಳ್ಳಿ ಶ್ರೀನಿವಾಸ್ ಗೌಡ, ತಿಪ್ಪುರು ಮನು,ಸಿದ್ದರಾಜು,ಜಯರಾಂ, ಮಹೇಶ್, ಎಇಇ ನವೀನ್, ಎಇ ನವೀನ್ ಹಾಜರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>