<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಕೆಆರ್ಎಸ್ ಬಳಿ, ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಕೆಆರ್ಎಸ್ ಆಸುಪಾಸಿನ ಗ್ರಾಮಗಳ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಮುಖಂಡರು ಆಗ್ರಹಿಸಿದರು.</p>.<p>ಕೆಆರ್ಎಸ್ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಮತ್ತು ಕಾವೇರಿ ಆರತಿ ನಡೆಯುವಂತಾದರೆ ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸಬಹುದು. ಇದರಿಂದ ಸ್ಥಳೀಯರಿಗೆ ಉದ್ಯೋಗ ಸಿಗಲಿದ್ದು, ಸರ್ಕಾರಕ್ಕೆ ಆದಾಯವೂ ಬರುತ್ತದೆ. ಕೆಆರ್ಎಸ್ ಸುತ್ತಮುತ್ತ ಆರ್ಥಿಕ ಚಟುವಟಿಕೆಗಳು ಗರಿಗೆದರುತ್ತವೆ. ಈ ಯೋಜನೆಗಳನ್ನು ವಿರೋಧಿಸುತ್ತಿರುವವರು ವಾಸ್ತವ ಸಂಗತಿಯನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರ ಈ ಎರಡೂ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ. ಸ್ವಾಮಿಗೌಡ ಬುಧವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>ಬೆಳಗೊಳ ಗ್ರಾ.ಪಂ. ಅಧ್ಯಕ್ಷ ಬಿ. ರವಿಕುಮಾರ್ ಮಾತನಾಡಿ, ‘ರೈತಸಂಘ ಮತ್ತು ಇತರ ಸಂಘಟನೆಗಳು ವಿನಾ ಕಾರಣ ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಅಣೆಕಟ್ಟೆ ಮತ್ತು ಬೃಂದಾವನ ಇರುವುದರಿಂದ ಸಹಸ್ರಾರು ಪ್ರವಾಸಿಗರು ಕೆಆರ್ಎಸ್ಗೆ ಭೇಟಿ ನೀಡುತ್ತಿದ್ದಾರೆ. ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಗಳು ಕಾರ್ಯಗತವಾದರೆ ಈ ಸ್ಥಳ ಮತ್ತಷ್ಟು ಪ್ರಸಿದ್ಧ ಪಡೆಯಲಿದೆ’ ಎಂದರು.</p>.<p>ತಾ.ಪಂ. ಮಾಜಿ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಬಿ.ವಿ. ಸುರೇಶ್, ಪುಟ್ಟರಾಜು, ಸದಸ್ಯರಾದ ರಜಿನಿ, ಆರ್ಮುಗಂ, ಮುಖಂಡರಾದ ಡಿ. ಜಗದೀಶ್, ಎನ್. ಪುನೀತ್, ಪ್ರತಾಪ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ</strong>: ತಾಲ್ಲೂಕಿನ ಕೆಆರ್ಎಸ್ ಬಳಿ, ಪ್ರವಾಸೋದ್ಯಮ ಅಭಿವೃದ್ಧಿ ದೃಷ್ಟಿಯಿಂದ ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಕೆಆರ್ಎಸ್ ಆಸುಪಾಸಿನ ಗ್ರಾಮಗಳ ಸ್ಥಳೀಯ ಸಂಸ್ಥೆಗಳ ಜನಪ್ರತಿನಿಧಿಗಳು ಹಾಗೂ ಮುಖಂಡರು ಆಗ್ರಹಿಸಿದರು.</p>.<p>ಕೆಆರ್ಎಸ್ ಬಳಿ ಅಮ್ಯೂಸ್ಮೆಂಟ್ ಪಾರ್ಕ್ ಮತ್ತು ಕಾವೇರಿ ಆರತಿ ನಡೆಯುವಂತಾದರೆ ಮತ್ತಷ್ಟು ಪ್ರವಾಸಿಗರನ್ನು ಆಕರ್ಷಿಸಬಹುದು. ಇದರಿಂದ ಸ್ಥಳೀಯರಿಗೆ ಉದ್ಯೋಗ ಸಿಗಲಿದ್ದು, ಸರ್ಕಾರಕ್ಕೆ ಆದಾಯವೂ ಬರುತ್ತದೆ. ಕೆಆರ್ಎಸ್ ಸುತ್ತಮುತ್ತ ಆರ್ಥಿಕ ಚಟುವಟಿಕೆಗಳು ಗರಿಗೆದರುತ್ತವೆ. ಈ ಯೋಜನೆಗಳನ್ನು ವಿರೋಧಿಸುತ್ತಿರುವವರು ವಾಸ್ತವ ಸಂಗತಿಯನ್ನು ಅರ್ಥಮಾಡಿಕೊಳ್ಳಬೇಕು. ಸರ್ಕಾರ ಈ ಎರಡೂ ಯೋಜನೆಗಳನ್ನು ಅನುಷ್ಠಾನಗೊಳಿಸಬೇಕು ಎಂದು ಎಪಿಎಂಸಿ ಮಾಜಿ ಅಧ್ಯಕ್ಷ ಬಿ.ಎಂ. ಸ್ವಾಮಿಗೌಡ ಬುಧವಾರ ಸುದ್ದಿಗೋಷ್ಠಿಯಲ್ಲಿ ಮನವಿ ಮಾಡಿದರು.</p>.<p>ಬೆಳಗೊಳ ಗ್ರಾ.ಪಂ. ಅಧ್ಯಕ್ಷ ಬಿ. ರವಿಕುಮಾರ್ ಮಾತನಾಡಿ, ‘ರೈತಸಂಘ ಮತ್ತು ಇತರ ಸಂಘಟನೆಗಳು ವಿನಾ ಕಾರಣ ಈ ಯೋಜನೆಗಳನ್ನು ವಿರೋಧಿಸುತ್ತಿವೆ. ಅಣೆಕಟ್ಟೆ ಮತ್ತು ಬೃಂದಾವನ ಇರುವುದರಿಂದ ಸಹಸ್ರಾರು ಪ್ರವಾಸಿಗರು ಕೆಆರ್ಎಸ್ಗೆ ಭೇಟಿ ನೀಡುತ್ತಿದ್ದಾರೆ. ಕಾವೇರಿ ಆರತಿ ಮತ್ತು ಅಮ್ಯೂಸ್ಮೆಂಟ್ ಪಾರ್ಕ್ ಯೋಜನೆಗಳು ಕಾರ್ಯಗತವಾದರೆ ಈ ಸ್ಥಳ ಮತ್ತಷ್ಟು ಪ್ರಸಿದ್ಧ ಪಡೆಯಲಿದೆ’ ಎಂದರು.</p>.<p>ತಾ.ಪಂ. ಮಾಜಿ ಮಾಜಿ ಅಧ್ಯಕ್ಷ ಮಹದೇವಸ್ವಾಮಿ, ಗ್ರಾ.ಪಂ. ಮಾಜಿ ಅಧ್ಯಕ್ಷರಾದ ಬಿ.ವಿ. ಸುರೇಶ್, ಪುಟ್ಟರಾಜು, ಸದಸ್ಯರಾದ ರಜಿನಿ, ಆರ್ಮುಗಂ, ಮುಖಂಡರಾದ ಡಿ. ಜಗದೀಶ್, ಎನ್. ಪುನೀತ್, ಪ್ರತಾಪ್ ಇದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>