<p><strong>ಮಂಡ್ಯ:</strong> ರೈತಸಂಘದ ಪ್ರಬಲ ವಿರೋಧದ ನಡುವೆಯೂ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆ ಬಳಿ ಸೆ.26ರಿಂದ 30ರವರೆಗೆ ‘ಕಾವೇರಿ ಆರತಿ’ ಕಾರ್ಯಕ್ರಮ ಆಯೋಜಿಸಲಾಗಿದೆ. </p>.<p>ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಶ್ರೀರಂಗಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. </p>.<p>‘ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 5 ದಿನ ಕಾವೇರಿ ಆರತಿ ಸಮಾರಂಭವನ್ನು ವಿಜೃಂಭಣೆಯಿಂದ ಸಾಂಕೇತಿಕವಾಗಿ ಆಚರಿಸಲಾಗುವುದು. 26ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ. </p>.<p><strong>ಕಾನೂನು ಉಲ್ಲಂಘನೆ:</strong></p>.<p>‘ಹೈಕೋರ್ಟ್ ತಡೆಯಾಜ್ಞೆಯಿದ್ದರೂ ಆರತಿ ಪ್ರಕ್ರಿಯೆ ನಡೆಸಲು ಸರ್ಕಾರ ಮುಂದಾಗಿದೆ’ ಎಂದು ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ದರ್ಪ, ಅಧಿಕಾರ, ಹಣದ ಮದದಿಂದ ಕಾನೂನನ್ನು ಉಲ್ಲಂಘಿಸಲಾಗುತ್ತಿದೆ. ಕೆ.ಆರ್.ಎಸ್ ಅಣೆಕಟ್ಟೆಯನ್ನು ನಾಶ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುನ್ನೀರಿನಲ್ಲಿ ಕಾವೇರಿ ಆರತಿ ನಡೆಸಲು ಮುಂದಾಗಿದ್ದಾರೆ. ಮಂಡ್ಯ ಸಂಸದರೂ ಆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಿನ್ನೀರಿನಲ್ಲಿ ‘ಸೀ ಪ್ಲೇನ್’ ಯೋಜನೆಯನ್ನು ತರಲು ಹುನ್ನಾರ ನಡೆಸುತ್ತಿದ್ದಾರೆ. ಈ ಎರಡೂ ಯೋಜನೆಗಳು ಡ್ಯಾಂಗೆ ಅಪಾಯ ತಂದೊಡ್ಡುತ್ತವೆ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ:</strong> ರೈತಸಂಘದ ಪ್ರಬಲ ವಿರೋಧದ ನಡುವೆಯೂ ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆ ಬಳಿ ಸೆ.26ರಿಂದ 30ರವರೆಗೆ ‘ಕಾವೇರಿ ಆರತಿ’ ಕಾರ್ಯಕ್ರಮ ಆಯೋಜಿಸಲಾಗಿದೆ. </p>.<p>ಶಾಸಕ ರಮೇಶ ಬಂಡಿಸಿದ್ದೇಗೌಡ ಅವರು ಶ್ರೀರಂಗಪಟ್ಟಣದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಈ ಮಾಹಿತಿಯನ್ನು ಖಚಿತಪಡಿಸಿದ್ದಾರೆ. </p>.<p>‘ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳೊಂದಿಗೆ 5 ದಿನ ಕಾವೇರಿ ಆರತಿ ಸಮಾರಂಭವನ್ನು ವಿಜೃಂಭಣೆಯಿಂದ ಸಾಂಕೇತಿಕವಾಗಿ ಆಚರಿಸಲಾಗುವುದು. 26ರಂದು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಸಮಾರಂಭಕ್ಕೆ ಚಾಲನೆ ನೀಡಲಿದ್ದಾರೆ’ ಎಂದು ತಿಳಿಸಿದ್ದಾರೆ. </p>.<p><strong>ಕಾನೂನು ಉಲ್ಲಂಘನೆ:</strong></p>.<p>‘ಹೈಕೋರ್ಟ್ ತಡೆಯಾಜ್ಞೆಯಿದ್ದರೂ ಆರತಿ ಪ್ರಕ್ರಿಯೆ ನಡೆಸಲು ಸರ್ಕಾರ ಮುಂದಾಗಿದೆ’ ಎಂದು ರೈತ ಹೋರಾಟಗಾರ್ತಿ ಸುನಂದಾ ಜಯರಾಂ ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ದರ್ಪ, ಅಧಿಕಾರ, ಹಣದ ಮದದಿಂದ ಕಾನೂನನ್ನು ಉಲ್ಲಂಘಿಸಲಾಗುತ್ತಿದೆ. ಕೆ.ಆರ್.ಎಸ್ ಅಣೆಕಟ್ಟೆಯನ್ನು ನಾಶ ಮಾಡಲು ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುನ್ನೀರಿನಲ್ಲಿ ಕಾವೇರಿ ಆರತಿ ನಡೆಸಲು ಮುಂದಾಗಿದ್ದಾರೆ. ಮಂಡ್ಯ ಸಂಸದರೂ ಆದ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಹಿನ್ನೀರಿನಲ್ಲಿ ‘ಸೀ ಪ್ಲೇನ್’ ಯೋಜನೆಯನ್ನು ತರಲು ಹುನ್ನಾರ ನಡೆಸುತ್ತಿದ್ದಾರೆ. ಈ ಎರಡೂ ಯೋಜನೆಗಳು ಡ್ಯಾಂಗೆ ಅಪಾಯ ತಂದೊಡ್ಡುತ್ತವೆ’ ಎಂದು ಕಿಡಿಕಾರಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>