<p><strong>ಮಂಡ್ಯ</strong>: ಕನ್ನಡ ನಾಡಿನ ಜೀವನದಿ ‘ಕಾವೇರಿ ಆರತಿ’ ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆ ಬಳಿ ಸೆ.26ರಿಂದ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. <br><br>ಸೆ.26ರಂದು 5 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.</p>.<p>ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ಜಿಲ್ಲೆಯ ಶಾಸಕರು ಪಾಲ್ಗೊಳ್ಳಲಿದ್ದಾರೆ. </p>.<p>ಗಂಗೆಯಷ್ಟೇ ಪಾವಿತ್ರ್ಯ ಹೊಂದಿರುವ ಕಾವೇರಿ ನದಿಗೆ ಕಾವೇರಿ ಆರತಿ ಮಾಡಿ ಭಕ್ತಿ ಭಾವದಿಂದ ನಮಿಸಿ ಪೂಜಿಸಬೇಕೆಂಬುದು ಡಿ.ಕೆ.ಶಿವಕುಮಾರ್ ಅವರ ಕನಸಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2024ರಲ್ಲಿ ಕೆಆರ್ಎಸ್ನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಡಿಸಿಎಂ ಈ ವಿಷಯವನ್ನು ಘೋಷಣೆ ಮಾಡಿದ್ದರು.</p>.<p>ಶಾಸಕರ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಿ ಗಂಗಾರತಿಯನ್ನು ವೀಕ್ಷಿಸಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ಪ್ರಕಾರ ಸರ್ಕಾರ ಕಾವೇರಿ ಆರತಿ ಮಾಡಲು ತೀರ್ಮಾನಿಸಿ, ಸುಮಾರು 10 ಸಾವಿರ ಜನರು ಭವ್ಯ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾದ ಬೃಹತ್ ಸ್ಟೇಡಿಯಂ ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p><strong>ಕಾವೇರಿ ಆರತಿಯ ವಿಧಿ ವಿಧಾನಗಳು </strong></p><p> 13 ಜನರಿಂದ ಆರತಿ. ಅವರಿಗೆ ತಲಾ ಇಬ್ಬರು ಸಹಾಯಕರು ಸೇರಿ ಒಟ್ಟು 40 ಜನರ ತಂಡ ಪೂಜೆಯಲ್ಲಿ ಭಾಗಿ</p><p>* ಮೊದಲು ‘ವಾತಾಪಿ ಗಣಪತಿಂ ಭಜೆ’ ಮಂಗಳವಾದ್ಯದಿಂದ ಪೂಜೆ ಪ್ರಾರಂಭ</p><p>* ಕಾವೇರಿ ಪ್ರಾರ್ಥನೆ ಗಣಪತಿ ಪ್ರಾರ್ಥನೆ ಗುರು ಪ್ರಾರ್ಥನೆ ಸಂಕಲ್ಪ</p><p>* ಕಾವೇರಿ ಸ್ತೋತ್ರದ ಮೂಲಕ ತೀರ್ಥಕ್ಕೆ ಪೂಜೆ ಬಾಗಿನ ಅರ್ಪಣೆ</p><p>* ಬ್ರಹ್ಮ ವಿಷ್ಣು ಮಹೇಶ್ವರರ ಪ್ರಾರ್ಥನೆ ಚಾಮರ ಸೇವೆ* ಮೂರು ದಿಕ್ಕಿಗೂ ಶಂಖನಾದ ದೂಪದ ಆರತಿ ಹಾಗೂ ಮಂತ್ರ ಪುಷ್ಪ ಪಠಣ</p><p>* ಕೊನೆಯಲ್ಲಿ ಕುಂಭಾರತಿ ನಾಗಾರತಿ ಕಾವೇರಿ ಆರತಿಯೊಂದಿಗೆ ಪೂಜಾ ಕೈಂಕರ್ಯ ಸಂಪನ್ನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮಂಡ್ಯ</strong>: ಕನ್ನಡ ನಾಡಿನ ಜೀವನದಿ ‘ಕಾವೇರಿ ಆರತಿ’ ಎಂಬ ಐದು ದಿನಗಳ ಭವ್ಯ ಕಾರ್ಯಕ್ರಮವು ಶ್ರೀರಂಗಪಟ್ಟಣ ತಾಲ್ಲೂಕಿನ ಕೆಆರ್ಎಸ್ ಅಣೆಕಟ್ಟೆ ಬಳಿ ಸೆ.26ರಿಂದ ಆಯೋಜಿಸಲಾಗಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಎನ್.ಚಲುವರಾಯಸ್ವಾಮಿ ಮಾಹಿತಿ ನೀಡಿದ್ದಾರೆ. <br><br>ಸೆ.26ರಂದು 5 ಗಂಟೆಗೆ ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಅವರು ಕಾವೇರಿ ನದಿಗೆ ಪುಷ್ಪಾರ್ಚನೆ ಮಾಡುವ ಮೂಲಕ ‘ಕಾವೇರಿ ಆರತಿ’ ಕಾರ್ಯಕ್ರಮಕ್ಕೆ ಶಾಸ್ತ್ರೋಕ್ತವಾಗಿ ಚಾಲನೆ ನೀಡಲಿದ್ದಾರೆ.</p>.<p>ಆದಿಚುಂಚನಗಿರಿ ಮಠದ ನಿರ್ಮಲಾನಂದನಾಥ ಸ್ವಾಮೀಜಿ, ಸುತ್ತೂರು ಮಠಾದ ಶಿವರಾತ್ರಿ ದೇಶಿಕೇಂದ್ರ ಸ್ವಾಮೀಜಿ, ಸಿದ್ಧಗಂಗಾ ಮಠದ ಸಿದ್ಧಲಿಂಗ ಸ್ವಾಮೀಜಿ, ವಿಶ್ವ ಒಕ್ಕಲಿಗ ಮಹಾ ಸಂಸ್ಥಾನ ಮಠದ ನಿಶ್ಚಲಾನಂದನಾಥ ಸ್ವಾಮೀಜಿ ಹಾಗೂ ಜಿಲ್ಲೆಯ ಶಾಸಕರು ಪಾಲ್ಗೊಳ್ಳಲಿದ್ದಾರೆ. </p>.<p>ಗಂಗೆಯಷ್ಟೇ ಪಾವಿತ್ರ್ಯ ಹೊಂದಿರುವ ಕಾವೇರಿ ನದಿಗೆ ಕಾವೇರಿ ಆರತಿ ಮಾಡಿ ಭಕ್ತಿ ಭಾವದಿಂದ ನಮಿಸಿ ಪೂಜಿಸಬೇಕೆಂಬುದು ಡಿ.ಕೆ.ಶಿವಕುಮಾರ್ ಅವರ ಕನಸಾಗಿತ್ತು. ನಮ್ಮ ಸರ್ಕಾರ ಅಧಿಕಾರಕ್ಕೆ ಬಂದ ನಂತರ 2024ರಲ್ಲಿ ಕೆಆರ್ಎಸ್ನಲ್ಲಿ ಕಾವೇರಿಗೆ ಬಾಗಿನ ಅರ್ಪಿಸುವ ಸಂದರ್ಭದಲ್ಲಿ ಡಿಸಿಎಂ ಈ ವಿಷಯವನ್ನು ಘೋಷಣೆ ಮಾಡಿದ್ದರು.</p>.<p>ಶಾಸಕರ ನಿಯೋಗ ವಾರಣಾಸಿ ಮತ್ತು ಹರಿದ್ವಾರಕ್ಕೆ ಭೇಟಿ ನೀಡಿ ಗಂಗಾರತಿಯನ್ನು ವೀಕ್ಷಿಸಿ ಸರ್ಕಾರಕ್ಕೆ ವರದಿ ನೀಡಿತ್ತು. ಆ ಪ್ರಕಾರ ಸರ್ಕಾರ ಕಾವೇರಿ ಆರತಿ ಮಾಡಲು ತೀರ್ಮಾನಿಸಿ, ಸುಮಾರು 10 ಸಾವಿರ ಜನರು ಭವ್ಯ ಕಾರ್ಯಕ್ರಮ ವೀಕ್ಷಣೆ ಮಾಡಬಹುದಾದ ಬೃಹತ್ ಸ್ಟೇಡಿಯಂ ನಿರ್ಮಿಸಲು ಸಚಿವ ಸಂಪುಟ ಅನುಮೋದನೆ ನೀಡಿತು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ. </p>.<p><strong>ಕಾವೇರಿ ಆರತಿಯ ವಿಧಿ ವಿಧಾನಗಳು </strong></p><p> 13 ಜನರಿಂದ ಆರತಿ. ಅವರಿಗೆ ತಲಾ ಇಬ್ಬರು ಸಹಾಯಕರು ಸೇರಿ ಒಟ್ಟು 40 ಜನರ ತಂಡ ಪೂಜೆಯಲ್ಲಿ ಭಾಗಿ</p><p>* ಮೊದಲು ‘ವಾತಾಪಿ ಗಣಪತಿಂ ಭಜೆ’ ಮಂಗಳವಾದ್ಯದಿಂದ ಪೂಜೆ ಪ್ರಾರಂಭ</p><p>* ಕಾವೇರಿ ಪ್ರಾರ್ಥನೆ ಗಣಪತಿ ಪ್ರಾರ್ಥನೆ ಗುರು ಪ್ರಾರ್ಥನೆ ಸಂಕಲ್ಪ</p><p>* ಕಾವೇರಿ ಸ್ತೋತ್ರದ ಮೂಲಕ ತೀರ್ಥಕ್ಕೆ ಪೂಜೆ ಬಾಗಿನ ಅರ್ಪಣೆ</p><p>* ಬ್ರಹ್ಮ ವಿಷ್ಣು ಮಹೇಶ್ವರರ ಪ್ರಾರ್ಥನೆ ಚಾಮರ ಸೇವೆ* ಮೂರು ದಿಕ್ಕಿಗೂ ಶಂಖನಾದ ದೂಪದ ಆರತಿ ಹಾಗೂ ಮಂತ್ರ ಪುಷ್ಪ ಪಠಣ</p><p>* ಕೊನೆಯಲ್ಲಿ ಕುಂಭಾರತಿ ನಾಗಾರತಿ ಕಾವೇರಿ ಆರತಿಯೊಂದಿಗೆ ಪೂಜಾ ಕೈಂಕರ್ಯ ಸಂಪನ್ನ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>